Homeಅಂತರಾಷ್ಟ್ರೀಯಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ

ಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ

- Advertisement -
- Advertisement -

ವಸಾಹತುಗಾರ ಇಸ್ರೇಲ್‌ನ ವಶದಲ್ಲಿರುವ ಪ್ಯಾಲೆಸ್ತೀನ್‌ನ ಗಾಝಾದಲ್ಲಿ “ತಕ್ಷಣದ, ಬೇಷರತ್ತಾದ ಮತ್ತು ಶಾಶ್ವತ ಕದನ ವಿರಾಮ”ಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ಅಮೆರಿಕ ಮತ್ತೆ ವಿರೋಧಿಸಿದೆ. ನಿರ್ಣಯದ ವಿರುದ್ಧ ತನ್ನ ವಿಶೇಷ ಅಧಿಕಾರ ವೀಟೊ ಬಳಸಿ ಅದನ್ನು ವಿರೋಧಿಸಿದ್ದು, ಅದಾಗ್ಯೂ, ಕೌನ್ಸಿಲ್‌ನಲ್ಲಿ ಉಳಿದ 14 ದೇಶಗಳು ‘ಕದನ ವಿರಾಮ’ದ ಪರವಾಗಿ ಮತ ಚಲಾಯಿಸಿದವು. ಬೇಷರತ್‌ ಗಾಝಾ ಕದನ ವಿರಾಮ

ಗಾಝಾದಲ್ಲಿನ ಪರಿಸ್ಥಿತಿಯನ್ನು “ದುರಂತ” ಎಂದು ಕರೆದಿರುವ ಭದ್ರತಾ ಮಂಡಳಿಯ ನಿರ್ಣಯವು, “ಗಾಝಾಗೆ ಮಾನವೀಯ ನೆರವು ಪ್ರವೇಶದ ಮೇಲಿನ ಎಲ್ಲಾ ನಿರ್ಬಂಧಗಳನ್ನು ತಕ್ಷಣ ಮತ್ತು ಬೇಷರತ್ತಾಗಿ ತೆಗೆದುಹಾಕಬೇಕು. ಜೊತೆಗೆ ವಿಶ್ವಸಂಸ್ಥೆ ಮತ್ತು ಮಾನವೀಯ ಸಂಘಟನೆಗಳು ಅದರ ಸುರಕ್ಷಿತ ಮತ್ತು ಅಡೆತಡೆಯಿಲ್ಲದ ವಿತರಣೆ ಮಾಡಲು ಅವಕಾಶ ನೀಡಬೇಕು” ಎಂದು ಒತ್ತಾಯಿಸಿದೆ.

ಇಸ್ರೇಲ್ ಅನ್ನು ರಕ್ಷಿಸುವ ಸಲುವಾಗಿ ಭದ್ರತಾ ಮಂಡಳಿಯ ಕರಡು ಕದನ ವಿರಾಮ ನಿರ್ಣಯವನ್ನು ಅಮೆರಿಕ ವೀಟೊ ಮಾಡಿದ್ದು ಇದು ಐದನೇ ಬಾರಿಯಾಗಿದೆ. ಕದನ ವಿರಾಮ ಬೇಡಿಕೆಯು ಹಮಾಸ್ ಹಿಡಿದಿಟ್ಟಿರುವ ಎಲ್ಲಾ ಒತ್ತೆಯಾಳುಗಳ ತಕ್ಷಣದ ಮತ್ತು ಬೇಷರತ್ತಾದ ಬಿಡುಗಡೆಗೆ ನೇರವಾಗಿ ಸಂಬಂಧಿಸಿಲ್ಲ ಎಂಬ ಆಧಾರದ ಮೇಲೆ ಬೈಡೆನ್ ಆಡಳಿತದ ಅಡಿಯಲ್ಲಿ ನವೆಂಬರ್‌ನಲ್ಲಿ ಕೂಡಾ ಅಮೆರಿಕ ಇದೇ ರೀತಿಯ ನಿರ್ಣಯವನ್ನು ವೀಟೊ ಮಾಡಿತು.

ನಿರ್ಣಯದ ಪಠ್ಯವನ್ನು ಅಲ್ಜೀರಿಯಾ, ಡೆನ್ಮಾರ್ಕ್, ಗ್ರೀಸ್, ಗಯಾನಾ, ಪಾಕಿಸ್ತಾನ, ಪನಾಮ, ದಕ್ಷಿಣ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ ಮತ್ತು ಸೊಮಾಲಿಯಾ ಸಹ-ಪ್ರಾಯೋಜಿಸಿವೆ. ರಷ್ಯಾ, ಚೀನಾ, ಫ್ರಾನ್ಸ್ ಮತ್ತು ಯುಕೆ ಸಹ ನಿರ್ಣಯದ ಪರವಾಗಿ ಮತ ಚಲಾಯಿಸಿದವು.

“ನಮ್ಮಲ್ಲಿ ಹೆಚ್ಚಿನವರು ಒಂದೇ ದೃಷ್ಟಿಕೋನದಲ್ಲಿ ಒಮ್ಮುಖವಾಗುತ್ತಿರುವಂತೆ ತೋರುತ್ತಿದ್ದರೂ, ಮಂಡಳಿಯು ತನ್ನ ಜವಾಬ್ದಾರಿಯನ್ನು ಹೊರದಂತೆ ತಡೆಯಲಾಯಿತು” ಎಂದು ವಿಶ್ವಸಂಸ್ಥೆಯಲ್ಲಿನ ಫ್ರಾನ್ಸ್ ರಾಯಭಾರಿ ಜೆರೋಮ್ ಬೊನ್ನಾಫಾಂಟ್ ಹೇಳಿದ್ದಾರೆ.

“ಇಂದು, ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಗಾಝಾ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ವೀಟೊ ಮಾಡುವ ಮೂಲಕ ಅಮೆರಿಕ ಬಲವಾದ ಸಂದೇಶವನ್ನು ಕಳುಹಿಸಿದೆ” ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಮತದಾನದ ನಂತರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇಸ್ರೇಲ್ ಮತ್ತು ಹಮಾಸ್ ಸಮಾನ ಎಂದು ತಪ್ಪಾಗಿ ಪ್ರತಿಪಾದಿಸುವ ಅಥವಾ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ನಿರ್ಲಕ್ಷಿಸುವ ಯಾವುದೇ ಪಠ್ಯವನ್ನು ಅಮೆರಿಕ ಬೆಂಬಲಿಸುವುದಿಲ್ಲ. ಅಮೆರಿಕವು ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ನೊಂದಿಗೆ ನಿಲ್ಲುವುದನ್ನು ಮುಂದುವರಿಸುತ್ತದೆ.” ಎಂದು ಅವರು ಹೇಳಿದ್ದಾರೆ.

ಇಸ್ರೇಲ್ ಕೂಡ ಅಮೆರಿಕದ ವೀಟೋವನ್ನು ಸ್ವಾಗತಿಸಿದೆ. “ಇಸ್ರೇಲ್‌ನೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಈ ಏಕಪಕ್ಷೀಯ ನಿರ್ಣಯವನ್ನು ವೀಟೋ ಮಾಡಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಮತ್ತು ಆಡಳಿತಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಪ್ರಸ್ತಾವಿತ ನಿರ್ಣಯವು ಹಮಾಸ್ ಅನ್ನು ಬಲಪಡಿಸುತ್ತದೆ ಮತ್ತು ಒತ್ತೆಯಾಳು ಒಪ್ಪಂದವನ್ನು ಸಾಧಿಸುವ ಅಮೆರಿಕದ ಪ್ರಯತ್ನಗಳನ್ನು ದುರ್ಬಲಗೊಳಿಸುತ್ತದೆ” ಎಂದು ಇಸ್ರೇಲ್‌ನ ವಿದೇಶಾಂಗ ವ್ಯವಹಾರಗಳ ಸಚಿವ ಗಿಡಿಯಾನ್ ಸಾರ್ ಹೇಳಿದ್ದಾರೆ.

ಅದಾಗ್ಯೂ, ಯುನೈಟೆಡ್ ಕಿಂಗ್‌ಡಮ್‌(ಯುಕೆ) ಈ ನಿರ್ಣಯವನ್ನು ಬೆಂಬಲಿಸಿದ್ದು, ಅದರ ರಾಯಭಾರಿ ಬಾರ್ಬರಾ ವುಡ್‌ವರ್ಡ್ ಅವರು ಇಸ್ರೇಲ್‌ನ ಹೊಸ ನೆರವು ವ್ಯವಸ್ಥೆಯನ್ನು “ಅಮಾನವೀಯ” ಎಂದು ಕರೆದಿದ್ದಾರೆ. ಜೊತೆಗೆ, ಇಸ್ರೇಲ್ ಈಗಲೇ ನೆರವಿನ ಮೇಲಿನ ನಿರ್ಬಂಧಗಳನ್ನು ಕೊನೆಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ.

“ಗಾಜಾದಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ವಿಸ್ತರಿಸುವ ಮತ್ತು ಸಹಾಯವನ್ನು ತೀವ್ರವಾಗಿ ನಿರ್ಬಂಧಿಸುವ ಇಸ್ರೇಲ್ ಸರ್ಕಾರದ ಈ ನಿರ್ಧಾರಗಳು ಅಸಮರ್ಥನೀಯ, ಅಸಮಾನ ಮತ್ತು ಪ್ರತಿಕೂಲವಾಗಿವೆ ಮತ್ತು ಯುಕೆ ಅವುಗಳನ್ನು ಸಂಪೂರ್ಣವಾಗಿ ವಿರೋಧಿಸುತ್ತದೆ.” ಎಂದು ಅವರು ಹೇಳಿದ್ದಾರೆ.

ಭದ್ರತಾ ಮಂಡಳಿಯ ಇತರ ಸದಸ್ಯರು ವೀಟೊ ಅಧಿಕಾರ ಚಲಾಯಿಸಿದ ಅಮೆರಿಕವನ್ನು ಟೀಕಿಸಿದ್ದಾರೆ. “ವಿಫಲವಾದ ಈ ನಿರ್ಣಯವು ಮಂಡಳಿಯ ಆತ್ಮಸಾಕ್ಷಿಯ ಮೇಲೆ ನೈತಿಕ ಕಳಂಕವಾಗಿ ಉಳಿಯುವುದಲ್ಲದೆ, ತಲೆಮಾರುಗಳವರೆಗೆ ಪ್ರತಿಧ್ವನಿಸುವ ರಾಜಕೀಯ ಅನ್ವಯದ ಅದೃಷ್ಟದ ಕ್ಷಣವಾಗಿ ಉಳಿಯುತ್ತದೆ” ಎಂದು ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಹೇಳಿದ್ದಾರೆ.

ವಿಶ್ವಸಂಸ್ಥೆಗೆ ಚೀನಾದ ರಾಯಭಾರಿ ಫು ಕಾಂಗ್ ಪ್ರತಿಕ್ರಿಯಿಸಿ, “ಇಂದಿನ ಮತದಾನದ ಫಲಿತಾಂಶವು, ಮತ್ತೊಮ್ಮೆ ಗಾಝಾದಲ್ಲಿನ ಸಂಘರ್ಷವನ್ನು ಶಮನಗೊಳಿಸಲು ಮಂಡಳಿಯ ಅಸಮರ್ಥತೆಗೆ ಮೂಲ ಕಾರಣ ಅಮೆರಿಕದ ಪುನರಾವರ್ತಿತ ಅಡಚಣೆಯಾಗಿದೆ ಎಂದು ಬಹಿರಂಗಪಡಿಸುತ್ತದೆ.” ಎಂದು ಹೇಳಿದ್ದಾರೆ.

ಸಹಾಯದ ಮೇಲಿನ ದೀರ್ಘಾವಧಿಯ ನಿರ್ಬಂಧ ಮತ್ತು ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್ (GHF) ಎಂಬ ಯೋಜನೆಯ ಅಸ್ತವ್ಯಸ್ತ ಅನುಷ್ಠಾನದ ನಂತರ ಗಾಝಾದಲ್ಲಿ ಕ್ಷಾಮದ ಪರಿಸ್ಥಿತಿ ಉಂಟಾಗಿತ್ತು. ಈ ಬಗ್ಗೆ ವಿಶ್ವಸಂಸ್ಥೆ ಮತ್ತು ನೆರವು ಸಂಸ್ಥೆಗಳು ಎಚ್ಚರಿಕೆ ನೀಡಿದ್ದರಿಂದ ಈ ನಿರ್ಣಯವನ್ನು ಮತಕ್ಕೆ ಹಾಕಲಾಯಿತು.

“ಭಯಭೀತರಾಗುವ, ಗಾಯಗೊಳ್ಳುವ ಅಥವಾ ಗಾಜಾದಲ್ಲಿ ತಿನ್ನಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಡುವ ಪ್ಯಾಲೆಸ್ತೀನಿಯನ್ನರ ಭಯಾನಕ ದೃಶ್ಯಗಳನ್ನು ಜಗತ್ತು ದಿನದಿಂದ ದಿನಕ್ಕೆ ನೋಡುತ್ತಿದೆ” ಎಂದು ವಿಶ್ವಸಂಸ್ಥೆಯ ಪರಿಹಾರ ಮುಖ್ಯಸ್ಥ ಟಾಮ್ ಫ್ಲೆಚರ್ ಬುಧವಾರ ಹೇಳಿದ್ದಾರೆ.

ಅಸ್ಪಷ್ಟ ರಾಜಕೀಯ ಬೆಂಬಲ ಮತ್ತು ಹಣವನ್ನು ಹೊಂದಿರುವ ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್ (GHF) ಗುರುವಾರ ಬೆಳಿಗ್ಗೆ ಎರಡನೇ ದಿನವೂ ಗಾಝಾದಲ್ಲಿ ತನ್ನ ವಿತರಣಾ ಕೇಂದ್ರಗಳನ್ನು ಮುಚ್ಚಲಾಗುವುದು ಎಂದು ಘೋಷಿಸಿದೆ. ಅದರ ವಿತರಣಾ ಕೇಂದ್ರದಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದಾಗ ಇಸ್ರೇಲಿ ಗುಂಡಿನ ದಾಳಿಯಿಂದ ಮಂಗಳವಾರ ಕನಿಷ್ಠ 27 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

“ಈ ಘಟನೆಗಳ ಬಗ್ಗೆ ತಕ್ಷಣದ ಮತ್ತು ಸ್ವತಂತ್ರ ತನಿಖೆ ನಡೆಸಿ ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂಬ ವಿಶ್ವಸಂಸ್ಥೆಯ ಕರೆಗೆ ವಿಶ್ವಸಂಸ್ಥೆಗೆ ಯುಕೆ ಖಾಯಂ ಪ್ರತಿನಿಧಿ ವುಡ್‌ವರ್ಡ್ ಬೆಂಬಲ ವ್ಯಕ್ತಪಡಿಸಿದ್ದಾರೆ. “ಇಸ್ರೇಲ್ ಈಗ ನೆರವಿನ ಮೇಲಿನ ತನ್ನ ನಿರ್ಬಂಧಗಳನ್ನು ಕೊನೆಗೊಳಿಸಬೇಕಾಗಿದೆ. ಜೀವಗಳನ್ನು ಉಳಿಸಲು, ದುಃಖವನ್ನು ಕಡಿಮೆ ಮಾಡಲು ಮತ್ತು ನಿರ್ವಹಿಸಲು ವಿಶ್ವಸಂಸ್ಥೆ ಮತ್ತು ಮಾನವೀಯತೆಯಿಳ್ಳವರು ತಮ್ಮ ಕೆಲಸವನ್ನು ಮಾಡಲಿ. ಅದು ಗೌರವ,” ಎಂದು ಅವರು ಹೇಳಿದ್ದಾರೆ. ಬೇಷರತ್‌ ಗಾಝಾ ಕದನ ವಿರಾಮ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಚಿತ ಪಾಸ್‌ ಘೋಷಣೆಯಿಂದ ಹರಿದುಬಂದ ಜನಸಾಗರ; ಆರ್‌ಸಿಬಿ ಸಂಭ್ರಮಾಚರಣೆ ದುರಂತಕ್ಕೆ ಕಾರಣವೇನು?

ಉಚಿತ ಪಾಸ್‌ ಘೋಷಣೆಯಿಂದ ಹರಿದುಬಂದ ಜನಸಾಗರ; ಆರ್‌ಸಿಬಿ ಸಂಭ್ರಮಾಚರಣೆ ದುರಂತಕ್ಕೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...