Homeಅಂತರಾಷ್ಟ್ರೀಯ’ನಮ್ಮನ್ನ ಕ್ಷಮಿಸಿ’: ಗಾಂಧಿ ಶಿಲ್ಪ ವಿರೂಪ ಘಟನೆಗೆ ಅಮೆರಿಕ ರಾಯಭಾರಿ ಕ್ಷಮೆಯಾಚನೆ

’ನಮ್ಮನ್ನ ಕ್ಷಮಿಸಿ’: ಗಾಂಧಿ ಶಿಲ್ಪ ವಿರೂಪ ಘಟನೆಗೆ ಅಮೆರಿಕ ರಾಯಭಾರಿ ಕ್ಷಮೆಯಾಚನೆ

- Advertisement -
- Advertisement -

ಅಮೆರಿಕದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕಾದ ಭಾರತೀಯ ರಾಯಭಾರಿ ಕೆನ್ ಜಸ್ಟರ್ ಕ್ಷಮೆಯಾಚಿಸಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ರಾಯಭಾರಿ ಕಚೇರಿ ಇದ್ದು, ಕಚೇರಿ ಎದುರು ಇರುವ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಭರವಸೆಯನ್ನು ಪೊಲೀಸರು ತಿಳಿಸಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಭಾರತದ ಅಮೇರಿಕಾ ರಾಯಭಾರಿ “ವಾಷಿಂಗ್ಟನ್ ಡಿ.ಸಿ ಯಲ್ಲಿ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿರುವುದಕ್ಕೆ ಕ್ಚಮೆಯಿರಲಿ. ದಯವಿಟ್ಟು ನಮ್ಮ ಪ್ರಾಮಾಣಿಕ ಕ್ಷಮೆಯಾಚನೆಯನ್ನು ಸ್ವೀಕರಿಸಿ. ಜಾರ್ಜ್ ಫ್ಲಾಯ್ಡ್ ಅವರ ಭೀಕರ ಸಾವು, ಭೀಕರವಾದ ಹಿಂಸೆ ಮತ್ತು ವಿಧ್ವಂಸಕತೆಯಿಂದ ದಿಗ್ಭ್ರಮೆಯಾಗಿದೆ. ಯಾವುದೇ ರೀತಿಯ ಪೂರ್ವಾಗ್ರಹ ಮತ್ತು ತಾರತಮ್ಯದ ವಿರುದ್ಧ ನಾವು ನಿಲ್ಲುತ್ತೇವೆ. ನಾವು ಚೇತರಿಸಿಕೊಳ್ಳುತ್ತೇವೆ ಮತ್ತು ಉತ್ತಮವಾಗುತ್ತೇವೆ ” ಎಂದು ಅವರು ಹೇಳಿದ್ದಾರೆ.

ಮೇ 25 ರಂದು ಆಫ್ರಿಕನ್ ಜನಾಂಗಕ್ಕೆ ಸೇರಿದ ಜಾರ್ಜ್ ಫ್ಲಾಯ್ಡ್ ಎಂಬವರನ್ನು ವಿನಿಯಾಪೊಲೀಸ್ ಎಂಬಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹತ್ಯೆ ಮಾಡಿದ್ದರು. ರಸ್ತೆಯ ಮೇಲೆ ಜಾರ್ಜ್ ಅವರನ್ನು ಮಲಗಿಸಿ ಅವರ ಕತ್ತಿನ ಮೇಲೆ ಕಾಲನ್ನು ಒತ್ತಿ ಹಿಡಿದ ಪರಿಣಾಮ ಉಸಿರುಗಟ್ಟಿ ಅವರು ಮೃತಪಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಅಮೆರಿಕದಾದ್ಯಂತ #blacklivesmatter ಎಂಬ ಘೋಷಣೆಯಡಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ಈ ಸಮಯದಲ್ಲಿ ಮಹಾತ್ಮ ಗಾಂಧಿಯ ಪ್ರತಿಮೆಯನ್ನು ವಿರೂಪಗೊಳಿಸಲಾಗಿತ್ತು.

ಭಾರತೀಯ ರಾಯಭಾರ ಕಚೇರಿಯ ವೆಬ್‌ಸೈಟ್‌ನ ಪ್ರಕಾರ, ಮಹಾತ್ಮ ಗಾಂಧಿಯವರ ಶಿಲ್ಪವನ್ನು ಕಂಚಿನಲ್ಲಿ ನಿರ್ಮಿಸಲಾಗಿದ್ದು, 8 ಅಡಿ 8 ಇಂಚುಗಳಷ್ಟು ಎತ್ತರವನ್ನು ಹೊಂದಿದೆ.


ಓದಿ: ಫ್ಪಾಯ್ಡ್ ಸಾವಿಗೆ ಮರುಗಿದ ಪ್ರಿಯಾಂಕ ಚೋಪ್ರಾರವರೆ, ನಿಮ್ಮ ದೇಶದ ಬಗ್ಗೆ ಏನು ಹೇಳುತ್ತೀರಿ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...