Homeಅಂತರಾಷ್ಟ್ರೀಯಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

- Advertisement -
- Advertisement -

ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಲು ಭಾನುವಾರ ಮಾಸ್ಕೋಗೆ ಪ್ರಯಾಣಿಸಲಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. “ಸೋಮವಾರ ಪುಟಿನ್ ಅವರನ್ನು ಭೇಟಿ ಮಾಡಲು ಬಯಸುತ್ತೇನೆ ಎಂದು ಅರಘ್ಚಿ ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿಯನ್ನು ಉಲ್ಲೇಖಿಸಿ ಅದು ಹೇಳಿದೆ. ಅಮೆರಿಕದಿಂದ ಬಾಂಬ್ ದಾಳಿ

ಅಂತರರಾಷ್ಟ್ರೀಯ ಕಾನೂನಿನ ಬಗ್ಗೆ ಅಮೆರಿಕಕ್ಕೆ ಗೌರವವಿಲ್ಲ ಎಂದು ತೋರಿಸಿದೆ ಮತ್ತು ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ದಾಳಿ ಮಾಡುವ ಮೂಲಕ “ಬಹಳ ದೊಡ್ಡ ರೆಡ್‌ ಲೈನ್‌” ಅನ್ನು ದಾಟಿದೆ ಎಂದು ಅರಘ್ಚಿ ಅವರು ಹೇಳಿದ್ದಾರೆ. “ಅವರು ಬೆದರಿಕೆ ಮತ್ತು ಶಕ್ತಿಯ ಭಾಷೆಯನ್ನು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

ಟರ್ಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ್ದ ಅರಘ್ಚಿ, “ಇರಾನ್ ತನ್ನ ಭದ್ರತೆ, ಹಿತಾಸಕ್ತಿ ಮತ್ತು ಜನರನ್ನು ರಕ್ಷಿಸಲು ಎಲ್ಲಾ ಆಯ್ಕೆಗಳನ್ನು ಕಾಯ್ದಿರಿಸಿದೆ. ದೇಶದ ಸಶಸ್ತ್ರ ಪಡೆಗಳು ಸಂಪೂರ್ಣ ಜಾಗರೂಕತೆಯಿಂದ ಇವೆ. ಮೊದಲು ನಮ್ಮ ಪ್ರತಿಕ್ರಿಯೆಗಾಗಿ ಕಾಯಿರಿ. ಆಕ್ರಮಣಶೀಲತೆ ಕೊನೆಗೊಂಡಾಗ, ಈ ಬಗ್ಗೆ ನಾವು ನಿರ್ಧರಿಸಲಿದ್ದೇವೆ” ಎಂದು ಹೇಳಿದ್ದಾರೆ.

ಭಾನುವಾರ ಅಮೆರಿಕದ ದಾಳಿಯ ನಂತರ ಪ್ರತಿಕ್ರಿಯಿಸಿದ್ದ ಇರಾನ್‌ನ ಪರಮಾಣು ಶಕ್ತಿ ಸಂಸ್ಥೆಯ ವಕ್ತಾರ ಬೆಹ್ರೌಜ್ ಕಮಲ್ವಾಂಡಿ, ಪರಮಾಣು ಕ್ಷೇತ್ರದಲ್ಲಿನ ತನ್ನ ಜ್ಞಾನವನ್ನು “ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಈ ಉದ್ಯಮವು ನಮ್ಮ ದೇಶದಲ್ಲಿ ಬೇರುಗಳನ್ನು ಹೊಂದಿದೆ. ಈ ರಾಷ್ಟ್ರೀಯ ಉದ್ಯಮದ ಬೇರುಗಳನ್ನು ನಾಶಮಾಡಲು ಸಾಧ್ಯವಿಲ್ಲ ಎಂದು ಅವರು ತಿಳಿದಿರಬೇಕು. ಖಂಡಿತ, ನಾವು ಹಾನಿಯನ್ನು ಅನುಭವಿಸಿದ್ದೇವೆ, ಆದರೆ ಉದ್ಯಮವು ಹಾನಿಯನ್ನು ಅನುಭವಿಸುತ್ತಿರುವುದು ಇದೇ ಮೊದಲಲ್ಲ” ಎಂದು ಅವರು ತಿಳಿಸಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ಏಜೆನ್ಸಿ ಫ್ರಾನ್ಸ್-ಪ್ರೆಸ್ ವರದಿ ಮಾಡಿದೆ.

ಈ ನಡುವೆ ಇರಾನ್ ಸಂಸತ್ತು ಹಾರ್ಮುಜ್ ಹಡಗು ಮಾರ್ಗದ ಪ್ರಮುಖ ಜಲಸಂಧಿಯನ್ನು ಮುಚ್ಚಲು ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಇರಾನ್ ಮತ್ತು ಒಮಾನ್ ನಡುವಿನ ಕಿರಿದಾದ ಮಾರ್ಗವನ್ನು ಮುಚ್ಚುವ ಮೂಲಕ ಜಾಗತಿಕ ವ್ಯಾಪಾರವನ್ನು ಕುಂಠಿತಗೊಳಿಸುವ ಈ ಕ್ರಮದ ಕುರಿತು ಇರಾನ್‌ನ ಸರ್ವೋಚ್ಚ ರಾಷ್ಟ್ರೀಯ ಭದ್ರತಾ ಮಂಡಳಿಯು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಜಾಗತಿಕ ತೈಲ ಮತ್ತು ಅನಿಲ ಬೇಡಿಕೆಯ ಸುಮಾರು 20% ವ್ಯಾಪಾರ ನಡೆಯುವ ಜಲಸಂಧಿಯನ್ನು ಮುಚ್ಚುವ ನಿರ್ಧಾರ ಇನ್ನೂ ಅಂತಿಮವಾಗಿಲ್ಲ. ಆದಾಗ್ಯೂ, ಸಂಸದ, ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡರ್ ಎಸ್ಮಾಯಿಲ್ ಕೊಸಾರಿ ಪ್ರತಿಕ್ರಿಯಿಸಿ, ಹೀಗೆ ಮಾಡುವುದು ಕಾರ್ಯಸೂಚಿಯಲ್ಲಿದೆ ಮತ್ತು ಅಗತ್ಯವಿದ್ದಾಗಲೆಲ್ಲಾ ಅದನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇರಾನ್‌ ಮೇಲೆ ದಾಳಿ ಮಾಡಿರುವ ಕುರಿತು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಭಾನುವಾರ ಮಾಹಿತಿ ನೀಡಿದ್ದು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.

“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಹೊಸೈನ್ ಕೆರ್ಮನ್‌ಪೋರ್, ದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ. ಅಮೆರಿಕದಿಂದ ಬಾಂಬ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶ | ಸೀಟಿನ ವಿಚಾರದಲ್ಲಿ ಜಗಳ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯ ಗುಂಪು ಹತ್ಯೆ

ಉತ್ತರ ಪ್ರದೇಶ | ಸೀಟಿನ ವಿಚಾರದಲ್ಲಿ ಜಗಳ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯ ಗುಂಪು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...