Homeಅಂತರಾಷ್ಟ್ರೀಯಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

- Advertisement -
- Advertisement -

ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಲು ಭಾನುವಾರ ಮಾಸ್ಕೋಗೆ ಪ್ರಯಾಣಿಸಲಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. “ಸೋಮವಾರ ಪುಟಿನ್ ಅವರನ್ನು ಭೇಟಿ ಮಾಡಲು ಬಯಸುತ್ತೇನೆ ಎಂದು ಅರಘ್ಚಿ ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿಯನ್ನು ಉಲ್ಲೇಖಿಸಿ ಅದು ಹೇಳಿದೆ. ಅಮೆರಿಕದಿಂದ ಬಾಂಬ್ ದಾಳಿ

ಅಂತರರಾಷ್ಟ್ರೀಯ ಕಾನೂನಿನ ಬಗ್ಗೆ ಅಮೆರಿಕಕ್ಕೆ ಗೌರವವಿಲ್ಲ ಎಂದು ತೋರಿಸಿದೆ ಮತ್ತು ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ದಾಳಿ ಮಾಡುವ ಮೂಲಕ “ಬಹಳ ದೊಡ್ಡ ರೆಡ್‌ ಲೈನ್‌” ಅನ್ನು ದಾಟಿದೆ ಎಂದು ಅರಘ್ಚಿ ಅವರು ಹೇಳಿದ್ದಾರೆ. “ಅವರು ಬೆದರಿಕೆ ಮತ್ತು ಶಕ್ತಿಯ ಭಾಷೆಯನ್ನು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

ಟರ್ಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ್ದ ಅರಘ್ಚಿ, “ಇರಾನ್ ತನ್ನ ಭದ್ರತೆ, ಹಿತಾಸಕ್ತಿ ಮತ್ತು ಜನರನ್ನು ರಕ್ಷಿಸಲು ಎಲ್ಲಾ ಆಯ್ಕೆಗಳನ್ನು ಕಾಯ್ದಿರಿಸಿದೆ. ದೇಶದ ಸಶಸ್ತ್ರ ಪಡೆಗಳು ಸಂಪೂರ್ಣ ಜಾಗರೂಕತೆಯಿಂದ ಇವೆ. ಮೊದಲು ನಮ್ಮ ಪ್ರತಿಕ್ರಿಯೆಗಾಗಿ ಕಾಯಿರಿ. ಆಕ್ರಮಣಶೀಲತೆ ಕೊನೆಗೊಂಡಾಗ, ಈ ಬಗ್ಗೆ ನಾವು ನಿರ್ಧರಿಸಲಿದ್ದೇವೆ” ಎಂದು ಹೇಳಿದ್ದಾರೆ.

ಭಾನುವಾರ ಅಮೆರಿಕದ ದಾಳಿಯ ನಂತರ ಪ್ರತಿಕ್ರಿಯಿಸಿದ್ದ ಇರಾನ್‌ನ ಪರಮಾಣು ಶಕ್ತಿ ಸಂಸ್ಥೆಯ ವಕ್ತಾರ ಬೆಹ್ರೌಜ್ ಕಮಲ್ವಾಂಡಿ, ಪರಮಾಣು ಕ್ಷೇತ್ರದಲ್ಲಿನ ತನ್ನ ಜ್ಞಾನವನ್ನು “ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಈ ಉದ್ಯಮವು ನಮ್ಮ ದೇಶದಲ್ಲಿ ಬೇರುಗಳನ್ನು ಹೊಂದಿದೆ. ಈ ರಾಷ್ಟ್ರೀಯ ಉದ್ಯಮದ ಬೇರುಗಳನ್ನು ನಾಶಮಾಡಲು ಸಾಧ್ಯವಿಲ್ಲ ಎಂದು ಅವರು ತಿಳಿದಿರಬೇಕು. ಖಂಡಿತ, ನಾವು ಹಾನಿಯನ್ನು ಅನುಭವಿಸಿದ್ದೇವೆ, ಆದರೆ ಉದ್ಯಮವು ಹಾನಿಯನ್ನು ಅನುಭವಿಸುತ್ತಿರುವುದು ಇದೇ ಮೊದಲಲ್ಲ” ಎಂದು ಅವರು ತಿಳಿಸಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ಏಜೆನ್ಸಿ ಫ್ರಾನ್ಸ್-ಪ್ರೆಸ್ ವರದಿ ಮಾಡಿದೆ.

ಈ ನಡುವೆ ಇರಾನ್ ಸಂಸತ್ತು ಹಾರ್ಮುಜ್ ಹಡಗು ಮಾರ್ಗದ ಪ್ರಮುಖ ಜಲಸಂಧಿಯನ್ನು ಮುಚ್ಚಲು ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಇರಾನ್ ಮತ್ತು ಒಮಾನ್ ನಡುವಿನ ಕಿರಿದಾದ ಮಾರ್ಗವನ್ನು ಮುಚ್ಚುವ ಮೂಲಕ ಜಾಗತಿಕ ವ್ಯಾಪಾರವನ್ನು ಕುಂಠಿತಗೊಳಿಸುವ ಈ ಕ್ರಮದ ಕುರಿತು ಇರಾನ್‌ನ ಸರ್ವೋಚ್ಚ ರಾಷ್ಟ್ರೀಯ ಭದ್ರತಾ ಮಂಡಳಿಯು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಜಾಗತಿಕ ತೈಲ ಮತ್ತು ಅನಿಲ ಬೇಡಿಕೆಯ ಸುಮಾರು 20% ವ್ಯಾಪಾರ ನಡೆಯುವ ಜಲಸಂಧಿಯನ್ನು ಮುಚ್ಚುವ ನಿರ್ಧಾರ ಇನ್ನೂ ಅಂತಿಮವಾಗಿಲ್ಲ. ಆದಾಗ್ಯೂ, ಸಂಸದ, ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡರ್ ಎಸ್ಮಾಯಿಲ್ ಕೊಸಾರಿ ಪ್ರತಿಕ್ರಿಯಿಸಿ, ಹೀಗೆ ಮಾಡುವುದು ಕಾರ್ಯಸೂಚಿಯಲ್ಲಿದೆ ಮತ್ತು ಅಗತ್ಯವಿದ್ದಾಗಲೆಲ್ಲಾ ಅದನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇರಾನ್‌ ಮೇಲೆ ದಾಳಿ ಮಾಡಿರುವ ಕುರಿತು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಭಾನುವಾರ ಮಾಹಿತಿ ನೀಡಿದ್ದು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.

“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಹೊಸೈನ್ ಕೆರ್ಮನ್‌ಪೋರ್, ದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ. ಅಮೆರಿಕದಿಂದ ಬಾಂಬ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶ | ಸೀಟಿನ ವಿಚಾರದಲ್ಲಿ ಜಗಳ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯ ಗುಂಪು ಹತ್ಯೆ

ಉತ್ತರ ಪ್ರದೇಶ | ಸೀಟಿನ ವಿಚಾರದಲ್ಲಿ ಜಗಳ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯ ಗುಂಪು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...