Homeಮುಖಪುಟಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ಅಕ್ರಮ ವಲಸಿಗರನ್ನು ಹೊತ್ತ ಮಿಲಿಟರಿ ವಿಮಾನ ಭಾರತದ್ದ ಹೊರಟಿದೆ ಎಂದು ಹೇಳಲಾಗ್ತಿದೆ

- Advertisement -
- Advertisement -

ಭಾರತದ ಅಕ್ರಮ ವಲಸಿಗರನ್ನು ಅಮೆರಿಕದಿಂದ ಹೊರದಬ್ಬುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಯುಎಸ್‌ ಮಿಲಿಟರಿ ವಿಮಾನವು ಅಕ್ರಮ ವಲಸಿಗರನ್ನು ಹೊತ್ತು ಹೊರಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ಅಕ್ರಮ ವಲಸಿಗರ ವಿರುದ್ದ ಕೈಗೊಂಡ ಮೊದಲ ಕಠಿಣ ಕ್ರಮ ಇದು. ಟ್ರಂಪ್ ಚುನಾವಣಾ ಪೂರ್ವದಲ್ಲೇ ಈ ಬಗ್ಗೆ ವಾಗ್ದಾನ ಮಾಡಿದ್ದರು.

ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಸಿ -17 ಭಾರತದತ್ತ ಹೊರಟಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅದು 24 ಗಂಟೆಗಳಲ್ಲಿ ಭಾರತಕ್ಕೆ ತಲುಪುವ ನಿರೀಕ್ಷೆಯಿಂದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಕುರಿತು ಯಾವುದೇ ಮಾಹಿತಿ ನೀಡಲು ಭಾರತದ ಅಮೆರಿಕ ರಾಯಭಾರ ಕಚೇರಿಯ ವಕ್ತಾರರು ನಿರಾಕರಿಸಿದ್ದಾರೆ. ಆದರೆ, “ಅಮೆರಿಕ ಗಡಿ ನೀತಿಯನ್ನು ಕಠಿಣವಾಗಿ ಜಾರಿಗೊಳಿಸುತ್ತಿದೆ. ವಲಸೆ ಕಾನೂನುಗಳನ್ನು ಬಿಗಿಗೊಳಿಸುತ್ತಿದೆ ಮತ್ತು ಅಕ್ರಮ ವಲಸಿಗರನ್ನು ಹೊರ ಹಾಕುತ್ತಿದೆ” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಟೆಕ್ಸಾಸ್‌ನ ಎಲ್ ಪಾಸೊ ಮತ್ತು ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ಬಂಧನಕ್ಕೊಳಗಾದ 5,000ಕ್ಕೂ ಹೆಚ್ಚು ವಲಸಿಗರನ್ನು ಪೆಂಟಗನ್ (ಅಮೆರಿಕ) ಮಿಲಿಟರಿ ವಿಮಾನಗಳ ಮೂಲಕ ಗಡಿಪಾರು ಮಾಡಲು ಪ್ರಾರಂಭಿಸಿದೆ. ಇಲ್ಲಿಯವರೆಗೆ, ಮಿಲಿಟರಿ ವಿಮಾನಗಳು ಗ್ವಾಟೆಮಾಲಾ, ಪೆರು ಮತ್ತು ಹೊಂಡುರಾಸ್‌ಗೆ ವಲಸಿಗರನ್ನು ಸಾಗಿಸಿವೆ ಎಂದು ವರದಿ ಹೇಳಿದೆ.

ರಾಯಿಟರ್ಸ್ ವರದಿಯ ಪ್ರಕಾರ, ಮಿಲಿಟರಿ ವಿಮಾನಗಳ ಮೂಲಕ ವಲಸಿಗರನ್ನು ಗಡಿಪಾರು ಮಾಡಲು ಅಮೆರಿಕಕ್ಕೆ ಹೆಚ್ಚಿನ ವೆಚ್ಚ ತಗಲುತ್ತಿದೆ. ಇತ್ತೀಚೆಗೆ ಗ್ವಾಟೆಮಾಲಾಗೆ ಹಾರಾಟ ನಡೆಸಿದ ವಿಮಾನದಲ್ಲಿ ಪ್ರತಿ ವಲಸಿಗರಿಗೆ ಕನಿಷ್ಠ 4,675 ಡಾಲರ್ ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ.

ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ತನ್ನ ನಾಗರಿಕರನ್ನು ಗುರುತಿಸಿ, ವಾಪಸ್ ಕಳುಹಿಸುವಲ್ಲಿ ಟ್ರಂಪ್ ಆಡಳಿತದೊಂದಿಗೆ ಸಹಕರಿಸುವ ಇಚ್ಛೆಯನ್ನು ಭಾರತ ಸರ್ಕಾರ ವ್ಯಕ್ತಪಡಿಸಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಮತ್ತು ವ್ಯಾಪಾರ ಸಂಘರ್ಷವನ್ನು ತಪ್ಪಿಸಲು ಭಾರತ ಈ ನಿರ್ಧಾರ ಕೈಗೊಂಡಿದೆ.

“ನಾವು ಅಕ್ರಮ ವಲಸೆಯನ್ನು ವಿರೋಧಿಸುತ್ತೇವೆ. ವಿಶೇಷವಾಗಿ, ಇದು ಹಲವಾರು ರೀತಿಯ ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದೆ” ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಕಳೆದ ತಿಂಗಳು ಹೇಳಿದ್ದರು.

“ಅಮೆರಿಕದಲ್ಲಿ ಮಾತ್ರವಲ್ಲದೆ, ಜಗತ್ತಿನ ಎಲ್ಲಿಯಾದರೂ ಭಾರತೀಯರು ಅವಧಿ ಮೀರಿ ಉಳಿದಿದ್ದರೆ ಅಥವಾ ಅವರು ಸರಿಯಾದ ದಾಖಲೆಗಳಿಲ್ಲದೆ ನಿರ್ದಿಷ್ಟ ದೇಶದಲ್ಲಿದ್ದರೆ, ನಾವು ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ದಾಖಲೆಗಳನ್ನು ನಮ್ಮೊಂದಿಗೆ ಹಂಚಿಕೊಂಡರೆ ಅವರ ರಾಷ್ಟ್ರೀಯತೆ ಮತ್ತು ಅವರು ನಿಜವಾಗಿಯೂ ಭಾರತೀಯರೇ ಎಂದು ನಾವು ಪರಿಶೀಲಿಸಬಹುದು. ಹಾಗಿದ್ದಲ್ಲಿ, ನಾವು ಈ ವಿಷಯವನ್ನು ಮುಂದಕ್ಕೆ ಕೊಂಡೊಯ್ದು ಅವರು ಭಾರತಕ್ಕೆ ಮರಳಲು ಅನುಕೂಲ ಮಾಡಿಕೊಡುತ್ತೇವೆ” ಎಂದು ಜೈಸ್ವಾಲ್ ತಿಳಿಸಿದ್ದರು.

ವರದಿಗಳ ಪ್ರಕಾರ, ಅಮೆರಿಕ- ಭಾರತ ಎರಡೂ ದೇಶಗಳು ಸರಿಸುಮಾರು 18,000 ಅಕ್ರಮ ಭಾರತೀಯ ವಲಸಿಗರನ್ನು ಗಡಿಪಾರು ಮಾಡಲು ಗುರುತಿಸಿವೆ. ಆದರೆ, ಅಕ್ರಮ ವಲಸಿಗರ ಒಟ್ಟು ಪ್ರಮಾಣದಲ್ಲಿ ಗೊಂದಲ ಇರುವುದರಿಂದ, ನಿಜವಾದ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿರಬಬಹುದು ಎಂದು ಬ್ಲೂಮ್‌ಬರ್ಗ್ ಕಳೆದ ತಿಂಗಳು ವರದಿ ಮಾಡಿತ್ತು.

ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣಾ ದತ್ತಾಂಶದ ಪ್ರಕಾರ, 2024ರ ಆರ್ಥಿಕ ವರ್ಷದಲ್ಲಿ ಭಾರತದಿಂದ ಅಮೆರಿಕಕ್ಕೆ ಅಕ್ರಮ ವಲಸೆಯ ಪ್ರಮಾಣ ಕಡಿಮೆಯಾಗಿದ್ದು, ಅಮೆರಿಕದ ಎಲ್ಲಾ ಅಕ್ರಮ ಕ್ರಾಸಿಂಗ್‌ಗಳಲ್ಲಿ ಗಡಿ ದಾಟಿದವರ ಒಟ್ಟು ಪ್ರಮಾಣ ಸುಮಾರು ಶೇ. 3ರಷ್ಟಿದೆ. ಇದಕ್ಕೆ ವ್ಯತಿರಿಕ್ತವಾಗಿ, ಲ್ಯಾಟಿನ್ ಅಮೆರಿಕನ್ ರಾಷ್ಟ್ರಗಳಾದ ಮೆಕ್ಸಿಕೊ, ವೆನೆಜುವೆಲಾ ಮತ್ತು ಗ್ವಾಟೆಮಾಲಾಗಳಿಂದ ಅಕ್ರಮ ವಲಸೆ ಹೆಚ್ಚಾಗಿದೆ.

ನಿಖರವಾದ ಒಟ್ಟು ಸಂಖ್ಯೆಯಲ್ಲಿ ಗೊಂದಲವಿದ್ದರೂ, 2022ರ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ವರದಿಯ ಪ್ರಕಾರ, ಸುಮಾರು 2,20,000 ಅನಧಿಕೃತ ಭಾರತೀಯ ವಲಸಿಗರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.

ಅಕ್ರಮ ವಲಸಿಗರ ಗಡಿಪಾರು ಆತಂಕದ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 12 ರಿಂದ ಎರಡು ದಿನಗಳ ಕಾಲ ಅಮೆರಿಕ ಭೇಟಿಗೆ ತೆರಳಲಿದ್ದು, ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ.

ಬಾಂಗ್ಲಾದೇಶಿ ವಲಸಿಗರ ಗಡೀಪಾರು ಮಾಡುವ ಬದಲು, ಬಂಧನ ಶಿಬಿರಗಳಲ್ಲಿ ಏಕೆ ಇರಿಸಿದ್ದೀರಿ? – ಕೇಂದ್ರಕ್ಕೆ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...