Homeಮುಖಪುಟಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ಅಕ್ರಮ ವಲಸಿಗರನ್ನು ಹೊತ್ತ ಮಿಲಿಟರಿ ವಿಮಾನ ಭಾರತದ್ದ ಹೊರಟಿದೆ ಎಂದು ಹೇಳಲಾಗ್ತಿದೆ

- Advertisement -
- Advertisement -

ಭಾರತದ ಅಕ್ರಮ ವಲಸಿಗರನ್ನು ಅಮೆರಿಕದಿಂದ ಹೊರದಬ್ಬುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಯುಎಸ್‌ ಮಿಲಿಟರಿ ವಿಮಾನವು ಅಕ್ರಮ ವಲಸಿಗರನ್ನು ಹೊತ್ತು ಹೊರಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ಅಕ್ರಮ ವಲಸಿಗರ ವಿರುದ್ದ ಕೈಗೊಂಡ ಮೊದಲ ಕಠಿಣ ಕ್ರಮ ಇದು. ಟ್ರಂಪ್ ಚುನಾವಣಾ ಪೂರ್ವದಲ್ಲೇ ಈ ಬಗ್ಗೆ ವಾಗ್ದಾನ ಮಾಡಿದ್ದರು.

ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಸಿ -17 ಭಾರತದತ್ತ ಹೊರಟಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅದು 24 ಗಂಟೆಗಳಲ್ಲಿ ಭಾರತಕ್ಕೆ ತಲುಪುವ ನಿರೀಕ್ಷೆಯಿಂದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಕುರಿತು ಯಾವುದೇ ಮಾಹಿತಿ ನೀಡಲು ಭಾರತದ ಅಮೆರಿಕ ರಾಯಭಾರ ಕಚೇರಿಯ ವಕ್ತಾರರು ನಿರಾಕರಿಸಿದ್ದಾರೆ. ಆದರೆ, “ಅಮೆರಿಕ ಗಡಿ ನೀತಿಯನ್ನು ಕಠಿಣವಾಗಿ ಜಾರಿಗೊಳಿಸುತ್ತಿದೆ. ವಲಸೆ ಕಾನೂನುಗಳನ್ನು ಬಿಗಿಗೊಳಿಸುತ್ತಿದೆ ಮತ್ತು ಅಕ್ರಮ ವಲಸಿಗರನ್ನು ಹೊರ ಹಾಕುತ್ತಿದೆ” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಟೆಕ್ಸಾಸ್‌ನ ಎಲ್ ಪಾಸೊ ಮತ್ತು ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ಬಂಧನಕ್ಕೊಳಗಾದ 5,000ಕ್ಕೂ ಹೆಚ್ಚು ವಲಸಿಗರನ್ನು ಪೆಂಟಗನ್ (ಅಮೆರಿಕ) ಮಿಲಿಟರಿ ವಿಮಾನಗಳ ಮೂಲಕ ಗಡಿಪಾರು ಮಾಡಲು ಪ್ರಾರಂಭಿಸಿದೆ. ಇಲ್ಲಿಯವರೆಗೆ, ಮಿಲಿಟರಿ ವಿಮಾನಗಳು ಗ್ವಾಟೆಮಾಲಾ, ಪೆರು ಮತ್ತು ಹೊಂಡುರಾಸ್‌ಗೆ ವಲಸಿಗರನ್ನು ಸಾಗಿಸಿವೆ ಎಂದು ವರದಿ ಹೇಳಿದೆ.

ರಾಯಿಟರ್ಸ್ ವರದಿಯ ಪ್ರಕಾರ, ಮಿಲಿಟರಿ ವಿಮಾನಗಳ ಮೂಲಕ ವಲಸಿಗರನ್ನು ಗಡಿಪಾರು ಮಾಡಲು ಅಮೆರಿಕಕ್ಕೆ ಹೆಚ್ಚಿನ ವೆಚ್ಚ ತಗಲುತ್ತಿದೆ. ಇತ್ತೀಚೆಗೆ ಗ್ವಾಟೆಮಾಲಾಗೆ ಹಾರಾಟ ನಡೆಸಿದ ವಿಮಾನದಲ್ಲಿ ಪ್ರತಿ ವಲಸಿಗರಿಗೆ ಕನಿಷ್ಠ 4,675 ಡಾಲರ್ ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ.

ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ತನ್ನ ನಾಗರಿಕರನ್ನು ಗುರುತಿಸಿ, ವಾಪಸ್ ಕಳುಹಿಸುವಲ್ಲಿ ಟ್ರಂಪ್ ಆಡಳಿತದೊಂದಿಗೆ ಸಹಕರಿಸುವ ಇಚ್ಛೆಯನ್ನು ಭಾರತ ಸರ್ಕಾರ ವ್ಯಕ್ತಪಡಿಸಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಮತ್ತು ವ್ಯಾಪಾರ ಸಂಘರ್ಷವನ್ನು ತಪ್ಪಿಸಲು ಭಾರತ ಈ ನಿರ್ಧಾರ ಕೈಗೊಂಡಿದೆ.

“ನಾವು ಅಕ್ರಮ ವಲಸೆಯನ್ನು ವಿರೋಧಿಸುತ್ತೇವೆ. ವಿಶೇಷವಾಗಿ, ಇದು ಹಲವಾರು ರೀತಿಯ ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದೆ” ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಕಳೆದ ತಿಂಗಳು ಹೇಳಿದ್ದರು.

“ಅಮೆರಿಕದಲ್ಲಿ ಮಾತ್ರವಲ್ಲದೆ, ಜಗತ್ತಿನ ಎಲ್ಲಿಯಾದರೂ ಭಾರತೀಯರು ಅವಧಿ ಮೀರಿ ಉಳಿದಿದ್ದರೆ ಅಥವಾ ಅವರು ಸರಿಯಾದ ದಾಖಲೆಗಳಿಲ್ಲದೆ ನಿರ್ದಿಷ್ಟ ದೇಶದಲ್ಲಿದ್ದರೆ, ನಾವು ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ದಾಖಲೆಗಳನ್ನು ನಮ್ಮೊಂದಿಗೆ ಹಂಚಿಕೊಂಡರೆ ಅವರ ರಾಷ್ಟ್ರೀಯತೆ ಮತ್ತು ಅವರು ನಿಜವಾಗಿಯೂ ಭಾರತೀಯರೇ ಎಂದು ನಾವು ಪರಿಶೀಲಿಸಬಹುದು. ಹಾಗಿದ್ದಲ್ಲಿ, ನಾವು ಈ ವಿಷಯವನ್ನು ಮುಂದಕ್ಕೆ ಕೊಂಡೊಯ್ದು ಅವರು ಭಾರತಕ್ಕೆ ಮರಳಲು ಅನುಕೂಲ ಮಾಡಿಕೊಡುತ್ತೇವೆ” ಎಂದು ಜೈಸ್ವಾಲ್ ತಿಳಿಸಿದ್ದರು.

ವರದಿಗಳ ಪ್ರಕಾರ, ಅಮೆರಿಕ- ಭಾರತ ಎರಡೂ ದೇಶಗಳು ಸರಿಸುಮಾರು 18,000 ಅಕ್ರಮ ಭಾರತೀಯ ವಲಸಿಗರನ್ನು ಗಡಿಪಾರು ಮಾಡಲು ಗುರುತಿಸಿವೆ. ಆದರೆ, ಅಕ್ರಮ ವಲಸಿಗರ ಒಟ್ಟು ಪ್ರಮಾಣದಲ್ಲಿ ಗೊಂದಲ ಇರುವುದರಿಂದ, ನಿಜವಾದ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿರಬಬಹುದು ಎಂದು ಬ್ಲೂಮ್‌ಬರ್ಗ್ ಕಳೆದ ತಿಂಗಳು ವರದಿ ಮಾಡಿತ್ತು.

ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣಾ ದತ್ತಾಂಶದ ಪ್ರಕಾರ, 2024ರ ಆರ್ಥಿಕ ವರ್ಷದಲ್ಲಿ ಭಾರತದಿಂದ ಅಮೆರಿಕಕ್ಕೆ ಅಕ್ರಮ ವಲಸೆಯ ಪ್ರಮಾಣ ಕಡಿಮೆಯಾಗಿದ್ದು, ಅಮೆರಿಕದ ಎಲ್ಲಾ ಅಕ್ರಮ ಕ್ರಾಸಿಂಗ್‌ಗಳಲ್ಲಿ ಗಡಿ ದಾಟಿದವರ ಒಟ್ಟು ಪ್ರಮಾಣ ಸುಮಾರು ಶೇ. 3ರಷ್ಟಿದೆ. ಇದಕ್ಕೆ ವ್ಯತಿರಿಕ್ತವಾಗಿ, ಲ್ಯಾಟಿನ್ ಅಮೆರಿಕನ್ ರಾಷ್ಟ್ರಗಳಾದ ಮೆಕ್ಸಿಕೊ, ವೆನೆಜುವೆಲಾ ಮತ್ತು ಗ್ವಾಟೆಮಾಲಾಗಳಿಂದ ಅಕ್ರಮ ವಲಸೆ ಹೆಚ್ಚಾಗಿದೆ.

ನಿಖರವಾದ ಒಟ್ಟು ಸಂಖ್ಯೆಯಲ್ಲಿ ಗೊಂದಲವಿದ್ದರೂ, 2022ರ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ವರದಿಯ ಪ್ರಕಾರ, ಸುಮಾರು 2,20,000 ಅನಧಿಕೃತ ಭಾರತೀಯ ವಲಸಿಗರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.

ಅಕ್ರಮ ವಲಸಿಗರ ಗಡಿಪಾರು ಆತಂಕದ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 12 ರಿಂದ ಎರಡು ದಿನಗಳ ಕಾಲ ಅಮೆರಿಕ ಭೇಟಿಗೆ ತೆರಳಲಿದ್ದು, ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ.

ಬಾಂಗ್ಲಾದೇಶಿ ವಲಸಿಗರ ಗಡೀಪಾರು ಮಾಡುವ ಬದಲು, ಬಂಧನ ಶಿಬಿರಗಳಲ್ಲಿ ಏಕೆ ಇರಿಸಿದ್ದೀರಿ? – ಕೇಂದ್ರಕ್ಕೆ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...