Homeಮುಖಪುಟಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ...

ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

- Advertisement -
- Advertisement -

ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಯ ಸಂಚಿನ ಕುರಿತು ಭಾರತ ಸರಿಯಾದ ತನಿಖೆ ನಡೆಸುವವರೆಗೂ ಭಾರತಕ್ಕೆ 31 MQ-9A ಸೀ ಗಾರ್ಡಿಯನ್‌ ಮತ್ತು ಸ್ಕೈ ಗಾರ್ಡಿಯನ್‌ ಡ್ರೋನ್‌ಗಳ ವಿತರಣೆಯನ್ನು US ಸರ್ಕಾರ ತಡೆಹಿಡಿದಿದೆ ಎಂದು The Wire ವರದಿ ಮಾಡಿದೆ.

ಪ್ರಸ್ತಾವಿತ 3 ಬಿಲಿಯನ್ ಡಾಲರ್‌ ಖರೀದಿ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಗೆ 15 ಸೀ ಗಾರ್ಡಿಯನ್ ಡ್ರೋನ್‌ಗಳನ್ನು ಮತ್ತು ವಾಯುಪಡೆಗೆ 8 ಸ್ಕೈ ಗಾರ್ಡಿಯನ್ ಡ್ರೋನ್‌ಗಳನ್ನು ರವಾನಿಸಬೇಕಿತ್ತು. ಇದಲ್ಲದೆ ಆರು ಬೋಯಿಂಗ್ P-8I ದೀರ್ಘ-ಶ್ರೇಣಿಯ ಕಡಲ ಗಸ್ತು ವಿಮಾನಗಳನ್ನು ಖರೀದಿಸುವ ಪ್ರಸ್ತಾಪಕ್ಕೆ ಕೂಡ ವಾಷಿಂಗ್ಟನ್ ತಡೆಹಿಡಿದಿದೆ. ಇವುಗಳು ಭಾರತೀಯ ನೌಕಾಪಡೆಯು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 12 P-8I ಪೋಸಿಡಾನ್ ವಿಮಾನಗಳಿಗೆ ಪೂರಕವಾಗಿದೆ. ತಡೆಹಿಡಿಯಲಾದ ಡ್ರೋನ್ ಕುರಿತು ಭಾರತೀಯ ರಕ್ಷಣಾ ಸಚಿವಾಲಯ ಆಂತರಿಕ ಅನುಮೋದನೆಯು ಜೂನ್ 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಾಷಿಂಗ್ಟನ್‌ಗೆ ಭೇಟಿ ನೀಡುವ ಒಂದು ವಾರದ ಮೊದಲು ನೀಡಲಾಗಿತ್ತು.

ಪೋಸಿಡಾನ್ ಏರ್‌ಕ್ರಾಫ್ಟ್ ಮತ್ತು ಸೀ ಗಾರ್ಡಿಯನ್ ಡ್ರೋನ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ, ಹಿಂದೂ ಮಹಾಸಾಗರ ಇವು ಕಣ್ಗಾವಲಿನಲ್ಲಿರುತ್ತದೆ, ಅಂತರಾಷ್ಟ್ರೀಯ ಜಲ ಮಾರ್ಗಗಳನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳಿಗೆ ಪ್ರತಿಕ್ರಿಯಿಸಲು ಭಾರತೀಯ ನೌಕಾಪಡೆಗೆ ಸಾಮರ್ಥ್ಯವನ್ನು ಇವು ನೀಡುತ್ತದೆ.

ಯುಎಸ್ ಮತ್ತು ಕೆನಡಾ ದೇಶಗಳ ಪೌರತ್ವವನ್ನು ಹೊಂದಿರುವ ಪನ್ನುನ್, ನ್ಯೂಯಾರ್ಕ್ ಮೂಲದ ಖಲಿಸ್ತಾನಿ ಪರ ಕಾರ್ಯಕರ್ತ, ಈತನನ್ನು ಭಾರತ ಭಯೋತ್ಪಾದಕ ಎಂದು ಘೋಷಿಸಿತ್ತು. ಪನ್ನುನ್‌ನನ್ನು ಹತ್ಯೆ ಮಾಡುವ ಪ್ರಯತ್ನದ ಮೇಲಿನ ಕೋಪದಿಂದಾಗಿ ಯುಎಸ್ ಖರೀದಿಗೆ ತಡೆ ನೀಡಿದೆ. US ಪ್ರತಿನಿಧಿಗಳು ಮಾರಾಟವನ್ನು ಮುಂದುವರಿಸಲು ಬೇಕಾದ ಅಗತ್ಯವಾದ ಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ.

ನಿಖಿಲ್ ಗುಪ್ತಾ ಎಂಬ ಭಾರತೀಯನ ದೋಷಾರೋಪಣೆಯ ಬಗ್ಗೆ ವಿಶೇಷವಾಗಿ ಇಂಡೋ-ಅಮೆರಿಕನ್ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ನಿಖಿಲ್‌ ಗುಪ್ತಾ ಮೇಲಿದೆ ಮತ್ತು ಈಗ ಆತ ಜೆಕ್ ರಿಪಬ್ಲಿಕ್‌ನಲ್ಲಿ ಬಂಧನದಲ್ಲಿದ್ದಾನೆ.

ಕಳೆದ ಡಿಸೆಂಬರ್‌ನಲ್ಲಿ ಪನ್ನೂನ್ ಹತ್ಯೆ ಸಂಚು ಆರೋಪದ ಕುರಿತು ಭಾರತೀಯ ಮೂಲದ ಐವರು ಯುಎಸ್ ಕಾಂಗ್ರೆಸ್ ಸದಸ್ಯರು, ಭಾರತವು ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವುದು ಮತ್ತು ಹೊಣೆಗಾರರನ್ನು ಶಿಕ್ಷಿಸುವುದು ಬಹಳ ಮುಖ್ಯ, ಇದು ಮತ್ತೆ ಸಂಭವಿಸುವುದಿಲ್ಲ ಎಂಬ ಭರವಸೆಯನ್ನು ಒದಗಿಸಬೇಕು ಎಂದು ಹೇಳಿದ್ದರು.

ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ನಲ್ಲಿ ಪನ್ನುನ್‌ನನ್ನು ಕೊಲ್ಲಲು ಗುಪ್ತಾ ಎಫ್‌ಬಿಐ ಏಜೆಂಟ್‌ಗೆ 1,00,000 ಡಾಲರ್‌ ಭರವಸೆ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಮೆರಿಕದ ಕೋರಿಕೆಯ ಮೇರೆಗೆ ಜೂನ್ 30 ರಂದು ಜೆಕ್ ಗಣರಾಜ್ಯದಲ್ಲಿ ಗುಪ್ತಾನನ್ನು ಬಂಧಿಸಲಾಗಿತ್ತು. ನವೆಂಬರ್ 29ರಂದು US ಫೆಡರಲ್ ಪ್ರಾಸಿಕ್ಯೂಟರ್‌ಗಳು ಗುಪ್ತಾ ವಿರುದ್ಧ ಈ ಆರೋಪ ಹೊರಿಸಿದ್ದು, ಅವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಇಂಡೋ-ಅಮೆರಿಕನ್ ಶಾಸಕರು ಭಾರತ ಈ ಬಗ್ಗೆ ನೇರವಾಗಿ ಮತ್ತು ತ್ವರಿತವಾಗಿ ಪರಿಸ್ಥಿತಿಯನ್ನು ಪರಿಹರಿಸದಿದ್ದರೆ ಭಾರತ-ಅಮೆರಿಕ ಸಂಬಂಧಕ್ಕೆ ಗಮನಾರ್ಹವಾದ ಹಾನಿಯಾಗಲಿದೆ ಎಂದು ಎಚ್ಚರಿಸಿದ್ದರು.

ಡ್ರೋನ್ ಒಪ್ಪಂದಕ್ಕೆ ವಿಳಂಬವಾದ ಅನುಮೋದನೆಗಳ ಕುರಿತು ಕಾಮೆಂಟ್‌ಗಳಿಗಾಗಿ ಸಂಪರ್ಕಿಸಿದಾಗ, ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್, ನಾವು ಔಪಚಾರಿಕವಾಗಿ ಯುಎಸ್ ಕಾಂಗ್ರೆಸ್‌ಗೆ ಸೂಚಿಸುವವರೆಗೆ ನಾವು ಶಸ್ತ್ರಾಸ್ತ್ರ ಮಾರಾಟದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತೀಯ ನೌಕಾಪಡೆ ಮತ್ತು ಭಾರತದ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಅಮೆರಿಕ ಬಾಂಧವ್ಯದ ಮೇಲೆ  ಪನ್ನೂನ್‌ ಹತ್ಯೆ ಸಂಚು ವಿಷಯ ಪ್ರಭಾವವನ್ನು ಬೀರುತ್ತದೆ ಎಂಬುವುದನ್ನು ಅಲ್ಲಗೆಳೆದಿದ್ದರು. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದ್ದರು.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...