Homeಮುಖಪುಟಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ...

ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

- Advertisement -
- Advertisement -

ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಯ ಸಂಚಿನ ಕುರಿತು ಭಾರತ ಸರಿಯಾದ ತನಿಖೆ ನಡೆಸುವವರೆಗೂ ಭಾರತಕ್ಕೆ 31 MQ-9A ಸೀ ಗಾರ್ಡಿಯನ್‌ ಮತ್ತು ಸ್ಕೈ ಗಾರ್ಡಿಯನ್‌ ಡ್ರೋನ್‌ಗಳ ವಿತರಣೆಯನ್ನು US ಸರ್ಕಾರ ತಡೆಹಿಡಿದಿದೆ ಎಂದು The Wire ವರದಿ ಮಾಡಿದೆ.

ಪ್ರಸ್ತಾವಿತ 3 ಬಿಲಿಯನ್ ಡಾಲರ್‌ ಖರೀದಿ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಗೆ 15 ಸೀ ಗಾರ್ಡಿಯನ್ ಡ್ರೋನ್‌ಗಳನ್ನು ಮತ್ತು ವಾಯುಪಡೆಗೆ 8 ಸ್ಕೈ ಗಾರ್ಡಿಯನ್ ಡ್ರೋನ್‌ಗಳನ್ನು ರವಾನಿಸಬೇಕಿತ್ತು. ಇದಲ್ಲದೆ ಆರು ಬೋಯಿಂಗ್ P-8I ದೀರ್ಘ-ಶ್ರೇಣಿಯ ಕಡಲ ಗಸ್ತು ವಿಮಾನಗಳನ್ನು ಖರೀದಿಸುವ ಪ್ರಸ್ತಾಪಕ್ಕೆ ಕೂಡ ವಾಷಿಂಗ್ಟನ್ ತಡೆಹಿಡಿದಿದೆ. ಇವುಗಳು ಭಾರತೀಯ ನೌಕಾಪಡೆಯು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 12 P-8I ಪೋಸಿಡಾನ್ ವಿಮಾನಗಳಿಗೆ ಪೂರಕವಾಗಿದೆ. ತಡೆಹಿಡಿಯಲಾದ ಡ್ರೋನ್ ಕುರಿತು ಭಾರತೀಯ ರಕ್ಷಣಾ ಸಚಿವಾಲಯ ಆಂತರಿಕ ಅನುಮೋದನೆಯು ಜೂನ್ 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಾಷಿಂಗ್ಟನ್‌ಗೆ ಭೇಟಿ ನೀಡುವ ಒಂದು ವಾರದ ಮೊದಲು ನೀಡಲಾಗಿತ್ತು.

ಪೋಸಿಡಾನ್ ಏರ್‌ಕ್ರಾಫ್ಟ್ ಮತ್ತು ಸೀ ಗಾರ್ಡಿಯನ್ ಡ್ರೋನ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ, ಹಿಂದೂ ಮಹಾಸಾಗರ ಇವು ಕಣ್ಗಾವಲಿನಲ್ಲಿರುತ್ತದೆ, ಅಂತರಾಷ್ಟ್ರೀಯ ಜಲ ಮಾರ್ಗಗಳನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳಿಗೆ ಪ್ರತಿಕ್ರಿಯಿಸಲು ಭಾರತೀಯ ನೌಕಾಪಡೆಗೆ ಸಾಮರ್ಥ್ಯವನ್ನು ಇವು ನೀಡುತ್ತದೆ.

ಯುಎಸ್ ಮತ್ತು ಕೆನಡಾ ದೇಶಗಳ ಪೌರತ್ವವನ್ನು ಹೊಂದಿರುವ ಪನ್ನುನ್, ನ್ಯೂಯಾರ್ಕ್ ಮೂಲದ ಖಲಿಸ್ತಾನಿ ಪರ ಕಾರ್ಯಕರ್ತ, ಈತನನ್ನು ಭಾರತ ಭಯೋತ್ಪಾದಕ ಎಂದು ಘೋಷಿಸಿತ್ತು. ಪನ್ನುನ್‌ನನ್ನು ಹತ್ಯೆ ಮಾಡುವ ಪ್ರಯತ್ನದ ಮೇಲಿನ ಕೋಪದಿಂದಾಗಿ ಯುಎಸ್ ಖರೀದಿಗೆ ತಡೆ ನೀಡಿದೆ. US ಪ್ರತಿನಿಧಿಗಳು ಮಾರಾಟವನ್ನು ಮುಂದುವರಿಸಲು ಬೇಕಾದ ಅಗತ್ಯವಾದ ಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ.

ನಿಖಿಲ್ ಗುಪ್ತಾ ಎಂಬ ಭಾರತೀಯನ ದೋಷಾರೋಪಣೆಯ ಬಗ್ಗೆ ವಿಶೇಷವಾಗಿ ಇಂಡೋ-ಅಮೆರಿಕನ್ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ನಿಖಿಲ್‌ ಗುಪ್ತಾ ಮೇಲಿದೆ ಮತ್ತು ಈಗ ಆತ ಜೆಕ್ ರಿಪಬ್ಲಿಕ್‌ನಲ್ಲಿ ಬಂಧನದಲ್ಲಿದ್ದಾನೆ.

ಕಳೆದ ಡಿಸೆಂಬರ್‌ನಲ್ಲಿ ಪನ್ನೂನ್ ಹತ್ಯೆ ಸಂಚು ಆರೋಪದ ಕುರಿತು ಭಾರತೀಯ ಮೂಲದ ಐವರು ಯುಎಸ್ ಕಾಂಗ್ರೆಸ್ ಸದಸ್ಯರು, ಭಾರತವು ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವುದು ಮತ್ತು ಹೊಣೆಗಾರರನ್ನು ಶಿಕ್ಷಿಸುವುದು ಬಹಳ ಮುಖ್ಯ, ಇದು ಮತ್ತೆ ಸಂಭವಿಸುವುದಿಲ್ಲ ಎಂಬ ಭರವಸೆಯನ್ನು ಒದಗಿಸಬೇಕು ಎಂದು ಹೇಳಿದ್ದರು.

ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ನಲ್ಲಿ ಪನ್ನುನ್‌ನನ್ನು ಕೊಲ್ಲಲು ಗುಪ್ತಾ ಎಫ್‌ಬಿಐ ಏಜೆಂಟ್‌ಗೆ 1,00,000 ಡಾಲರ್‌ ಭರವಸೆ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಮೆರಿಕದ ಕೋರಿಕೆಯ ಮೇರೆಗೆ ಜೂನ್ 30 ರಂದು ಜೆಕ್ ಗಣರಾಜ್ಯದಲ್ಲಿ ಗುಪ್ತಾನನ್ನು ಬಂಧಿಸಲಾಗಿತ್ತು. ನವೆಂಬರ್ 29ರಂದು US ಫೆಡರಲ್ ಪ್ರಾಸಿಕ್ಯೂಟರ್‌ಗಳು ಗುಪ್ತಾ ವಿರುದ್ಧ ಈ ಆರೋಪ ಹೊರಿಸಿದ್ದು, ಅವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಇಂಡೋ-ಅಮೆರಿಕನ್ ಶಾಸಕರು ಭಾರತ ಈ ಬಗ್ಗೆ ನೇರವಾಗಿ ಮತ್ತು ತ್ವರಿತವಾಗಿ ಪರಿಸ್ಥಿತಿಯನ್ನು ಪರಿಹರಿಸದಿದ್ದರೆ ಭಾರತ-ಅಮೆರಿಕ ಸಂಬಂಧಕ್ಕೆ ಗಮನಾರ್ಹವಾದ ಹಾನಿಯಾಗಲಿದೆ ಎಂದು ಎಚ್ಚರಿಸಿದ್ದರು.

ಡ್ರೋನ್ ಒಪ್ಪಂದಕ್ಕೆ ವಿಳಂಬವಾದ ಅನುಮೋದನೆಗಳ ಕುರಿತು ಕಾಮೆಂಟ್‌ಗಳಿಗಾಗಿ ಸಂಪರ್ಕಿಸಿದಾಗ, ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್, ನಾವು ಔಪಚಾರಿಕವಾಗಿ ಯುಎಸ್ ಕಾಂಗ್ರೆಸ್‌ಗೆ ಸೂಚಿಸುವವರೆಗೆ ನಾವು ಶಸ್ತ್ರಾಸ್ತ್ರ ಮಾರಾಟದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತೀಯ ನೌಕಾಪಡೆ ಮತ್ತು ಭಾರತದ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಅಮೆರಿಕ ಬಾಂಧವ್ಯದ ಮೇಲೆ  ಪನ್ನೂನ್‌ ಹತ್ಯೆ ಸಂಚು ವಿಷಯ ಪ್ರಭಾವವನ್ನು ಬೀರುತ್ತದೆ ಎಂಬುವುದನ್ನು ಅಲ್ಲಗೆಳೆದಿದ್ದರು. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದ್ದರು.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...