Homeಮುಖಪುಟಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ...

ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

- Advertisement -
- Advertisement -

ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಯ ಸಂಚಿನ ಕುರಿತು ಭಾರತ ಸರಿಯಾದ ತನಿಖೆ ನಡೆಸುವವರೆಗೂ ಭಾರತಕ್ಕೆ 31 MQ-9A ಸೀ ಗಾರ್ಡಿಯನ್‌ ಮತ್ತು ಸ್ಕೈ ಗಾರ್ಡಿಯನ್‌ ಡ್ರೋನ್‌ಗಳ ವಿತರಣೆಯನ್ನು US ಸರ್ಕಾರ ತಡೆಹಿಡಿದಿದೆ ಎಂದು The Wire ವರದಿ ಮಾಡಿದೆ.

ಪ್ರಸ್ತಾವಿತ 3 ಬಿಲಿಯನ್ ಡಾಲರ್‌ ಖರೀದಿ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಗೆ 15 ಸೀ ಗಾರ್ಡಿಯನ್ ಡ್ರೋನ್‌ಗಳನ್ನು ಮತ್ತು ವಾಯುಪಡೆಗೆ 8 ಸ್ಕೈ ಗಾರ್ಡಿಯನ್ ಡ್ರೋನ್‌ಗಳನ್ನು ರವಾನಿಸಬೇಕಿತ್ತು. ಇದಲ್ಲದೆ ಆರು ಬೋಯಿಂಗ್ P-8I ದೀರ್ಘ-ಶ್ರೇಣಿಯ ಕಡಲ ಗಸ್ತು ವಿಮಾನಗಳನ್ನು ಖರೀದಿಸುವ ಪ್ರಸ್ತಾಪಕ್ಕೆ ಕೂಡ ವಾಷಿಂಗ್ಟನ್ ತಡೆಹಿಡಿದಿದೆ. ಇವುಗಳು ಭಾರತೀಯ ನೌಕಾಪಡೆಯು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 12 P-8I ಪೋಸಿಡಾನ್ ವಿಮಾನಗಳಿಗೆ ಪೂರಕವಾಗಿದೆ. ತಡೆಹಿಡಿಯಲಾದ ಡ್ರೋನ್ ಕುರಿತು ಭಾರತೀಯ ರಕ್ಷಣಾ ಸಚಿವಾಲಯ ಆಂತರಿಕ ಅನುಮೋದನೆಯು ಜೂನ್ 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಾಷಿಂಗ್ಟನ್‌ಗೆ ಭೇಟಿ ನೀಡುವ ಒಂದು ವಾರದ ಮೊದಲು ನೀಡಲಾಗಿತ್ತು.

ಪೋಸಿಡಾನ್ ಏರ್‌ಕ್ರಾಫ್ಟ್ ಮತ್ತು ಸೀ ಗಾರ್ಡಿಯನ್ ಡ್ರೋನ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ, ಹಿಂದೂ ಮಹಾಸಾಗರ ಇವು ಕಣ್ಗಾವಲಿನಲ್ಲಿರುತ್ತದೆ, ಅಂತರಾಷ್ಟ್ರೀಯ ಜಲ ಮಾರ್ಗಗಳನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳಿಗೆ ಪ್ರತಿಕ್ರಿಯಿಸಲು ಭಾರತೀಯ ನೌಕಾಪಡೆಗೆ ಸಾಮರ್ಥ್ಯವನ್ನು ಇವು ನೀಡುತ್ತದೆ.

ಯುಎಸ್ ಮತ್ತು ಕೆನಡಾ ದೇಶಗಳ ಪೌರತ್ವವನ್ನು ಹೊಂದಿರುವ ಪನ್ನುನ್, ನ್ಯೂಯಾರ್ಕ್ ಮೂಲದ ಖಲಿಸ್ತಾನಿ ಪರ ಕಾರ್ಯಕರ್ತ, ಈತನನ್ನು ಭಾರತ ಭಯೋತ್ಪಾದಕ ಎಂದು ಘೋಷಿಸಿತ್ತು. ಪನ್ನುನ್‌ನನ್ನು ಹತ್ಯೆ ಮಾಡುವ ಪ್ರಯತ್ನದ ಮೇಲಿನ ಕೋಪದಿಂದಾಗಿ ಯುಎಸ್ ಖರೀದಿಗೆ ತಡೆ ನೀಡಿದೆ. US ಪ್ರತಿನಿಧಿಗಳು ಮಾರಾಟವನ್ನು ಮುಂದುವರಿಸಲು ಬೇಕಾದ ಅಗತ್ಯವಾದ ಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ.

ನಿಖಿಲ್ ಗುಪ್ತಾ ಎಂಬ ಭಾರತೀಯನ ದೋಷಾರೋಪಣೆಯ ಬಗ್ಗೆ ವಿಶೇಷವಾಗಿ ಇಂಡೋ-ಅಮೆರಿಕನ್ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ನಿಖಿಲ್‌ ಗುಪ್ತಾ ಮೇಲಿದೆ ಮತ್ತು ಈಗ ಆತ ಜೆಕ್ ರಿಪಬ್ಲಿಕ್‌ನಲ್ಲಿ ಬಂಧನದಲ್ಲಿದ್ದಾನೆ.

ಕಳೆದ ಡಿಸೆಂಬರ್‌ನಲ್ಲಿ ಪನ್ನೂನ್ ಹತ್ಯೆ ಸಂಚು ಆರೋಪದ ಕುರಿತು ಭಾರತೀಯ ಮೂಲದ ಐವರು ಯುಎಸ್ ಕಾಂಗ್ರೆಸ್ ಸದಸ್ಯರು, ಭಾರತವು ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವುದು ಮತ್ತು ಹೊಣೆಗಾರರನ್ನು ಶಿಕ್ಷಿಸುವುದು ಬಹಳ ಮುಖ್ಯ, ಇದು ಮತ್ತೆ ಸಂಭವಿಸುವುದಿಲ್ಲ ಎಂಬ ಭರವಸೆಯನ್ನು ಒದಗಿಸಬೇಕು ಎಂದು ಹೇಳಿದ್ದರು.

ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ನಲ್ಲಿ ಪನ್ನುನ್‌ನನ್ನು ಕೊಲ್ಲಲು ಗುಪ್ತಾ ಎಫ್‌ಬಿಐ ಏಜೆಂಟ್‌ಗೆ 1,00,000 ಡಾಲರ್‌ ಭರವಸೆ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಮೆರಿಕದ ಕೋರಿಕೆಯ ಮೇರೆಗೆ ಜೂನ್ 30 ರಂದು ಜೆಕ್ ಗಣರಾಜ್ಯದಲ್ಲಿ ಗುಪ್ತಾನನ್ನು ಬಂಧಿಸಲಾಗಿತ್ತು. ನವೆಂಬರ್ 29ರಂದು US ಫೆಡರಲ್ ಪ್ರಾಸಿಕ್ಯೂಟರ್‌ಗಳು ಗುಪ್ತಾ ವಿರುದ್ಧ ಈ ಆರೋಪ ಹೊರಿಸಿದ್ದು, ಅವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಇಂಡೋ-ಅಮೆರಿಕನ್ ಶಾಸಕರು ಭಾರತ ಈ ಬಗ್ಗೆ ನೇರವಾಗಿ ಮತ್ತು ತ್ವರಿತವಾಗಿ ಪರಿಸ್ಥಿತಿಯನ್ನು ಪರಿಹರಿಸದಿದ್ದರೆ ಭಾರತ-ಅಮೆರಿಕ ಸಂಬಂಧಕ್ಕೆ ಗಮನಾರ್ಹವಾದ ಹಾನಿಯಾಗಲಿದೆ ಎಂದು ಎಚ್ಚರಿಸಿದ್ದರು.

ಡ್ರೋನ್ ಒಪ್ಪಂದಕ್ಕೆ ವಿಳಂಬವಾದ ಅನುಮೋದನೆಗಳ ಕುರಿತು ಕಾಮೆಂಟ್‌ಗಳಿಗಾಗಿ ಸಂಪರ್ಕಿಸಿದಾಗ, ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್, ನಾವು ಔಪಚಾರಿಕವಾಗಿ ಯುಎಸ್ ಕಾಂಗ್ರೆಸ್‌ಗೆ ಸೂಚಿಸುವವರೆಗೆ ನಾವು ಶಸ್ತ್ರಾಸ್ತ್ರ ಮಾರಾಟದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತೀಯ ನೌಕಾಪಡೆ ಮತ್ತು ಭಾರತದ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಅಮೆರಿಕ ಬಾಂಧವ್ಯದ ಮೇಲೆ  ಪನ್ನೂನ್‌ ಹತ್ಯೆ ಸಂಚು ವಿಷಯ ಪ್ರಭಾವವನ್ನು ಬೀರುತ್ತದೆ ಎಂಬುವುದನ್ನು ಅಲ್ಲಗೆಳೆದಿದ್ದರು. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದ್ದರು.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...