Homeಮುಖಪುಟಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ...

ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

- Advertisement -
- Advertisement -

ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಯ ಸಂಚಿನ ಕುರಿತು ಭಾರತ ಸರಿಯಾದ ತನಿಖೆ ನಡೆಸುವವರೆಗೂ ಭಾರತಕ್ಕೆ 31 MQ-9A ಸೀ ಗಾರ್ಡಿಯನ್‌ ಮತ್ತು ಸ್ಕೈ ಗಾರ್ಡಿಯನ್‌ ಡ್ರೋನ್‌ಗಳ ವಿತರಣೆಯನ್ನು US ಸರ್ಕಾರ ತಡೆಹಿಡಿದಿದೆ ಎಂದು The Wire ವರದಿ ಮಾಡಿದೆ.

ಪ್ರಸ್ತಾವಿತ 3 ಬಿಲಿಯನ್ ಡಾಲರ್‌ ಖರೀದಿ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಗೆ 15 ಸೀ ಗಾರ್ಡಿಯನ್ ಡ್ರೋನ್‌ಗಳನ್ನು ಮತ್ತು ವಾಯುಪಡೆಗೆ 8 ಸ್ಕೈ ಗಾರ್ಡಿಯನ್ ಡ್ರೋನ್‌ಗಳನ್ನು ರವಾನಿಸಬೇಕಿತ್ತು. ಇದಲ್ಲದೆ ಆರು ಬೋಯಿಂಗ್ P-8I ದೀರ್ಘ-ಶ್ರೇಣಿಯ ಕಡಲ ಗಸ್ತು ವಿಮಾನಗಳನ್ನು ಖರೀದಿಸುವ ಪ್ರಸ್ತಾಪಕ್ಕೆ ಕೂಡ ವಾಷಿಂಗ್ಟನ್ ತಡೆಹಿಡಿದಿದೆ. ಇವುಗಳು ಭಾರತೀಯ ನೌಕಾಪಡೆಯು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 12 P-8I ಪೋಸಿಡಾನ್ ವಿಮಾನಗಳಿಗೆ ಪೂರಕವಾಗಿದೆ. ತಡೆಹಿಡಿಯಲಾದ ಡ್ರೋನ್ ಕುರಿತು ಭಾರತೀಯ ರಕ್ಷಣಾ ಸಚಿವಾಲಯ ಆಂತರಿಕ ಅನುಮೋದನೆಯು ಜೂನ್ 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಾಷಿಂಗ್ಟನ್‌ಗೆ ಭೇಟಿ ನೀಡುವ ಒಂದು ವಾರದ ಮೊದಲು ನೀಡಲಾಗಿತ್ತು.

ಪೋಸಿಡಾನ್ ಏರ್‌ಕ್ರಾಫ್ಟ್ ಮತ್ತು ಸೀ ಗಾರ್ಡಿಯನ್ ಡ್ರೋನ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ, ಹಿಂದೂ ಮಹಾಸಾಗರ ಇವು ಕಣ್ಗಾವಲಿನಲ್ಲಿರುತ್ತದೆ, ಅಂತರಾಷ್ಟ್ರೀಯ ಜಲ ಮಾರ್ಗಗಳನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳಿಗೆ ಪ್ರತಿಕ್ರಿಯಿಸಲು ಭಾರತೀಯ ನೌಕಾಪಡೆಗೆ ಸಾಮರ್ಥ್ಯವನ್ನು ಇವು ನೀಡುತ್ತದೆ.

ಯುಎಸ್ ಮತ್ತು ಕೆನಡಾ ದೇಶಗಳ ಪೌರತ್ವವನ್ನು ಹೊಂದಿರುವ ಪನ್ನುನ್, ನ್ಯೂಯಾರ್ಕ್ ಮೂಲದ ಖಲಿಸ್ತಾನಿ ಪರ ಕಾರ್ಯಕರ್ತ, ಈತನನ್ನು ಭಾರತ ಭಯೋತ್ಪಾದಕ ಎಂದು ಘೋಷಿಸಿತ್ತು. ಪನ್ನುನ್‌ನನ್ನು ಹತ್ಯೆ ಮಾಡುವ ಪ್ರಯತ್ನದ ಮೇಲಿನ ಕೋಪದಿಂದಾಗಿ ಯುಎಸ್ ಖರೀದಿಗೆ ತಡೆ ನೀಡಿದೆ. US ಪ್ರತಿನಿಧಿಗಳು ಮಾರಾಟವನ್ನು ಮುಂದುವರಿಸಲು ಬೇಕಾದ ಅಗತ್ಯವಾದ ಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ.

ನಿಖಿಲ್ ಗುಪ್ತಾ ಎಂಬ ಭಾರತೀಯನ ದೋಷಾರೋಪಣೆಯ ಬಗ್ಗೆ ವಿಶೇಷವಾಗಿ ಇಂಡೋ-ಅಮೆರಿಕನ್ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ನಿಖಿಲ್‌ ಗುಪ್ತಾ ಮೇಲಿದೆ ಮತ್ತು ಈಗ ಆತ ಜೆಕ್ ರಿಪಬ್ಲಿಕ್‌ನಲ್ಲಿ ಬಂಧನದಲ್ಲಿದ್ದಾನೆ.

ಕಳೆದ ಡಿಸೆಂಬರ್‌ನಲ್ಲಿ ಪನ್ನೂನ್ ಹತ್ಯೆ ಸಂಚು ಆರೋಪದ ಕುರಿತು ಭಾರತೀಯ ಮೂಲದ ಐವರು ಯುಎಸ್ ಕಾಂಗ್ರೆಸ್ ಸದಸ್ಯರು, ಭಾರತವು ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವುದು ಮತ್ತು ಹೊಣೆಗಾರರನ್ನು ಶಿಕ್ಷಿಸುವುದು ಬಹಳ ಮುಖ್ಯ, ಇದು ಮತ್ತೆ ಸಂಭವಿಸುವುದಿಲ್ಲ ಎಂಬ ಭರವಸೆಯನ್ನು ಒದಗಿಸಬೇಕು ಎಂದು ಹೇಳಿದ್ದರು.

ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ನಲ್ಲಿ ಪನ್ನುನ್‌ನನ್ನು ಕೊಲ್ಲಲು ಗುಪ್ತಾ ಎಫ್‌ಬಿಐ ಏಜೆಂಟ್‌ಗೆ 1,00,000 ಡಾಲರ್‌ ಭರವಸೆ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಮೆರಿಕದ ಕೋರಿಕೆಯ ಮೇರೆಗೆ ಜೂನ್ 30 ರಂದು ಜೆಕ್ ಗಣರಾಜ್ಯದಲ್ಲಿ ಗುಪ್ತಾನನ್ನು ಬಂಧಿಸಲಾಗಿತ್ತು. ನವೆಂಬರ್ 29ರಂದು US ಫೆಡರಲ್ ಪ್ರಾಸಿಕ್ಯೂಟರ್‌ಗಳು ಗುಪ್ತಾ ವಿರುದ್ಧ ಈ ಆರೋಪ ಹೊರಿಸಿದ್ದು, ಅವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಇಂಡೋ-ಅಮೆರಿಕನ್ ಶಾಸಕರು ಭಾರತ ಈ ಬಗ್ಗೆ ನೇರವಾಗಿ ಮತ್ತು ತ್ವರಿತವಾಗಿ ಪರಿಸ್ಥಿತಿಯನ್ನು ಪರಿಹರಿಸದಿದ್ದರೆ ಭಾರತ-ಅಮೆರಿಕ ಸಂಬಂಧಕ್ಕೆ ಗಮನಾರ್ಹವಾದ ಹಾನಿಯಾಗಲಿದೆ ಎಂದು ಎಚ್ಚರಿಸಿದ್ದರು.

ಡ್ರೋನ್ ಒಪ್ಪಂದಕ್ಕೆ ವಿಳಂಬವಾದ ಅನುಮೋದನೆಗಳ ಕುರಿತು ಕಾಮೆಂಟ್‌ಗಳಿಗಾಗಿ ಸಂಪರ್ಕಿಸಿದಾಗ, ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್, ನಾವು ಔಪಚಾರಿಕವಾಗಿ ಯುಎಸ್ ಕಾಂಗ್ರೆಸ್‌ಗೆ ಸೂಚಿಸುವವರೆಗೆ ನಾವು ಶಸ್ತ್ರಾಸ್ತ್ರ ಮಾರಾಟದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತೀಯ ನೌಕಾಪಡೆ ಮತ್ತು ಭಾರತದ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಅಮೆರಿಕ ಬಾಂಧವ್ಯದ ಮೇಲೆ  ಪನ್ನೂನ್‌ ಹತ್ಯೆ ಸಂಚು ವಿಷಯ ಪ್ರಭಾವವನ್ನು ಬೀರುತ್ತದೆ ಎಂಬುವುದನ್ನು ಅಲ್ಲಗೆಳೆದಿದ್ದರು. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದ್ದರು.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...