Homeಮುಖಪುಟಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ...

ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

- Advertisement -
- Advertisement -

ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಯ ಸಂಚಿನ ಕುರಿತು ಭಾರತ ಸರಿಯಾದ ತನಿಖೆ ನಡೆಸುವವರೆಗೂ ಭಾರತಕ್ಕೆ 31 MQ-9A ಸೀ ಗಾರ್ಡಿಯನ್‌ ಮತ್ತು ಸ್ಕೈ ಗಾರ್ಡಿಯನ್‌ ಡ್ರೋನ್‌ಗಳ ವಿತರಣೆಯನ್ನು US ಸರ್ಕಾರ ತಡೆಹಿಡಿದಿದೆ ಎಂದು The Wire ವರದಿ ಮಾಡಿದೆ.

ಪ್ರಸ್ತಾವಿತ 3 ಬಿಲಿಯನ್ ಡಾಲರ್‌ ಖರೀದಿ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಗೆ 15 ಸೀ ಗಾರ್ಡಿಯನ್ ಡ್ರೋನ್‌ಗಳನ್ನು ಮತ್ತು ವಾಯುಪಡೆಗೆ 8 ಸ್ಕೈ ಗಾರ್ಡಿಯನ್ ಡ್ರೋನ್‌ಗಳನ್ನು ರವಾನಿಸಬೇಕಿತ್ತು. ಇದಲ್ಲದೆ ಆರು ಬೋಯಿಂಗ್ P-8I ದೀರ್ಘ-ಶ್ರೇಣಿಯ ಕಡಲ ಗಸ್ತು ವಿಮಾನಗಳನ್ನು ಖರೀದಿಸುವ ಪ್ರಸ್ತಾಪಕ್ಕೆ ಕೂಡ ವಾಷಿಂಗ್ಟನ್ ತಡೆಹಿಡಿದಿದೆ. ಇವುಗಳು ಭಾರತೀಯ ನೌಕಾಪಡೆಯು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 12 P-8I ಪೋಸಿಡಾನ್ ವಿಮಾನಗಳಿಗೆ ಪೂರಕವಾಗಿದೆ. ತಡೆಹಿಡಿಯಲಾದ ಡ್ರೋನ್ ಕುರಿತು ಭಾರತೀಯ ರಕ್ಷಣಾ ಸಚಿವಾಲಯ ಆಂತರಿಕ ಅನುಮೋದನೆಯು ಜೂನ್ 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಾಷಿಂಗ್ಟನ್‌ಗೆ ಭೇಟಿ ನೀಡುವ ಒಂದು ವಾರದ ಮೊದಲು ನೀಡಲಾಗಿತ್ತು.

ಪೋಸಿಡಾನ್ ಏರ್‌ಕ್ರಾಫ್ಟ್ ಮತ್ತು ಸೀ ಗಾರ್ಡಿಯನ್ ಡ್ರೋನ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ, ಹಿಂದೂ ಮಹಾಸಾಗರ ಇವು ಕಣ್ಗಾವಲಿನಲ್ಲಿರುತ್ತದೆ, ಅಂತರಾಷ್ಟ್ರೀಯ ಜಲ ಮಾರ್ಗಗಳನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳಿಗೆ ಪ್ರತಿಕ್ರಿಯಿಸಲು ಭಾರತೀಯ ನೌಕಾಪಡೆಗೆ ಸಾಮರ್ಥ್ಯವನ್ನು ಇವು ನೀಡುತ್ತದೆ.

ಯುಎಸ್ ಮತ್ತು ಕೆನಡಾ ದೇಶಗಳ ಪೌರತ್ವವನ್ನು ಹೊಂದಿರುವ ಪನ್ನುನ್, ನ್ಯೂಯಾರ್ಕ್ ಮೂಲದ ಖಲಿಸ್ತಾನಿ ಪರ ಕಾರ್ಯಕರ್ತ, ಈತನನ್ನು ಭಾರತ ಭಯೋತ್ಪಾದಕ ಎಂದು ಘೋಷಿಸಿತ್ತು. ಪನ್ನುನ್‌ನನ್ನು ಹತ್ಯೆ ಮಾಡುವ ಪ್ರಯತ್ನದ ಮೇಲಿನ ಕೋಪದಿಂದಾಗಿ ಯುಎಸ್ ಖರೀದಿಗೆ ತಡೆ ನೀಡಿದೆ. US ಪ್ರತಿನಿಧಿಗಳು ಮಾರಾಟವನ್ನು ಮುಂದುವರಿಸಲು ಬೇಕಾದ ಅಗತ್ಯವಾದ ಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ.

ನಿಖಿಲ್ ಗುಪ್ತಾ ಎಂಬ ಭಾರತೀಯನ ದೋಷಾರೋಪಣೆಯ ಬಗ್ಗೆ ವಿಶೇಷವಾಗಿ ಇಂಡೋ-ಅಮೆರಿಕನ್ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ನಿಖಿಲ್‌ ಗುಪ್ತಾ ಮೇಲಿದೆ ಮತ್ತು ಈಗ ಆತ ಜೆಕ್ ರಿಪಬ್ಲಿಕ್‌ನಲ್ಲಿ ಬಂಧನದಲ್ಲಿದ್ದಾನೆ.

ಕಳೆದ ಡಿಸೆಂಬರ್‌ನಲ್ಲಿ ಪನ್ನೂನ್ ಹತ್ಯೆ ಸಂಚು ಆರೋಪದ ಕುರಿತು ಭಾರತೀಯ ಮೂಲದ ಐವರು ಯುಎಸ್ ಕಾಂಗ್ರೆಸ್ ಸದಸ್ಯರು, ಭಾರತವು ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವುದು ಮತ್ತು ಹೊಣೆಗಾರರನ್ನು ಶಿಕ್ಷಿಸುವುದು ಬಹಳ ಮುಖ್ಯ, ಇದು ಮತ್ತೆ ಸಂಭವಿಸುವುದಿಲ್ಲ ಎಂಬ ಭರವಸೆಯನ್ನು ಒದಗಿಸಬೇಕು ಎಂದು ಹೇಳಿದ್ದರು.

ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ನಲ್ಲಿ ಪನ್ನುನ್‌ನನ್ನು ಕೊಲ್ಲಲು ಗುಪ್ತಾ ಎಫ್‌ಬಿಐ ಏಜೆಂಟ್‌ಗೆ 1,00,000 ಡಾಲರ್‌ ಭರವಸೆ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಮೆರಿಕದ ಕೋರಿಕೆಯ ಮೇರೆಗೆ ಜೂನ್ 30 ರಂದು ಜೆಕ್ ಗಣರಾಜ್ಯದಲ್ಲಿ ಗುಪ್ತಾನನ್ನು ಬಂಧಿಸಲಾಗಿತ್ತು. ನವೆಂಬರ್ 29ರಂದು US ಫೆಡರಲ್ ಪ್ರಾಸಿಕ್ಯೂಟರ್‌ಗಳು ಗುಪ್ತಾ ವಿರುದ್ಧ ಈ ಆರೋಪ ಹೊರಿಸಿದ್ದು, ಅವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಇಂಡೋ-ಅಮೆರಿಕನ್ ಶಾಸಕರು ಭಾರತ ಈ ಬಗ್ಗೆ ನೇರವಾಗಿ ಮತ್ತು ತ್ವರಿತವಾಗಿ ಪರಿಸ್ಥಿತಿಯನ್ನು ಪರಿಹರಿಸದಿದ್ದರೆ ಭಾರತ-ಅಮೆರಿಕ ಸಂಬಂಧಕ್ಕೆ ಗಮನಾರ್ಹವಾದ ಹಾನಿಯಾಗಲಿದೆ ಎಂದು ಎಚ್ಚರಿಸಿದ್ದರು.

ಡ್ರೋನ್ ಒಪ್ಪಂದಕ್ಕೆ ವಿಳಂಬವಾದ ಅನುಮೋದನೆಗಳ ಕುರಿತು ಕಾಮೆಂಟ್‌ಗಳಿಗಾಗಿ ಸಂಪರ್ಕಿಸಿದಾಗ, ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್, ನಾವು ಔಪಚಾರಿಕವಾಗಿ ಯುಎಸ್ ಕಾಂಗ್ರೆಸ್‌ಗೆ ಸೂಚಿಸುವವರೆಗೆ ನಾವು ಶಸ್ತ್ರಾಸ್ತ್ರ ಮಾರಾಟದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತೀಯ ನೌಕಾಪಡೆ ಮತ್ತು ಭಾರತದ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಅಮೆರಿಕ ಬಾಂಧವ್ಯದ ಮೇಲೆ  ಪನ್ನೂನ್‌ ಹತ್ಯೆ ಸಂಚು ವಿಷಯ ಪ್ರಭಾವವನ್ನು ಬೀರುತ್ತದೆ ಎಂಬುವುದನ್ನು ಅಲ್ಲಗೆಳೆದಿದ್ದರು. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದ್ದರು.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...