Homeಅಂತರಾಷ್ಟ್ರೀಯಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ಫೇಸ್‌ಬುಕ್‌ನ ಸಾಮುದಾಯಿಕ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ 24 ಗಂಟೆಗಳ ಕಾಲ ಟ್ರಂಪ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ತಿಳಿಸಿದೆ.

- Advertisement -
- Advertisement -

ವಾಷಿಂಗ್ಟನ್‌ನ ಅಮೆರಿಕ ಸಂಸತ್ (ಕ್ಯಾಪಿಟಲ್) ಮೇಲೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅನಿರೀಕ್ಷಿತ ದಾಳಿ ನಡೆಸಿ ಗಲಭೆ ಉಂಟು ಮಾಡಿದ ಬೆನ್ನಲ್ಲೆ ಫೇಸ್‌ಬುಕ್, ಇನ್ಸ್ಟಾಗ್ರಾಮ್‌ ಮತ್ತು ಟ್ವಿಟರ್‌ ಟ್ರಂಪ್ ಅವರ ಖಾತೆಗಳನ್ನು ಸ್ಥಗಿತಗೊಳಿಸಿವೆ.

ನವೆಂಬರ್ 03 ರಂದು ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮ ಇಂದು ನಿಗಧಿಯಾಗಿತ್ತು. ಅದಕ್ಕಾಗಿ ಹಲವಾರು ಶಾಸಕರು ಸೇರಿದ್ದರು. ಈ ವೇಳೆ ಸಂಸತ್ ಹೊರಗಿದ್ದ ಟ್ರಂಪ್ ಬೆಂಬಲಿಗರು ಬಲವಂತವಾಗಿ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದಾನೆ.

ಈ ಹಿನ್ನೆಲೆಯಲ್ಲಿ ಟ್ರಂಪ್‌ರವರ ಮೂರು ಆಕ್ಷೇಪಾರ್ಹ ಟ್ವೀಟ್‌ಗಳನ್ನು ತೆಗೆದುಹಾಕಬೇಕೆಂದು ಟ್ವಿಟರ್ ಹೇಳಿದೆ. 12 ಗಂಟೆಗಳ ಒಳಗಾಗಿ ಟ್ವೀಟ್‌ಗಳನ್ನು ತೆಗೆದುಹಾಕದಿದ್ದರೆ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಟ್ರಂಪ್‌ ಚುನಾವಣಾ ಫಲಿತಾಂಶಗಳನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ. ಇದರಿಂದಾಗಿಯೇ ಸಂಸತ್‌ನಲ್ಲಿ ಗಲಭೆ ನಡೆದಿದೆ ಎನ್ನಲಾಗಿದೆ.

ಫೇಸ್‌ಬುಕ್‌ನ ಸಾಮುದಾಯಿಕ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ 24 ಗಂಟೆಗಳ ಕಾಲ ಟ್ರಂಪ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ತಿಳಿಸಿದೆ.

ಚುನಾವಣಾ ಫಲಿತಾಂಶಗಳನ್ನು ತಿರುಚುವಂತೆ ಟ್ರಂಪ್‌ ಆದೇಶಿಸುತ್ತಿರುವ ವಿಡಿಯೋವೊಂದನ್ನು ಫೇಸ್‌ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ಗೂಗಲ್ ತೆಗೆದುಹಾಕಿವೆ. ಇನ್ಸ್ಟಾಗ್ರಾಮ್ ಖಾತೆಯನ್ನು 24 ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಲಾಗಿದೆ.

ಬುಧವಾರ ಸಂಸತ್ ಭವನದ ಗಲಭೆಯ ವೇಳೆ ಗುಂಡಿನ ದಾಳಿಯಲ್ಲಿ ಒಬ್ಬ ಮೃತಮಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ಒಬ್ಬ ಮಹಿಳೆಯ ಭುಜಕ್ಕೆ ಗುಂಡು ತಗುಲಿದ್ದ ರಕ್ತಸಿಕ್ತ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಡೊನಾಲ್ಡ್ ಟ್ರಂಪ್ ವಿರುದ್ಧ 306-232ರಿಂದ ಅಂತರದಿಂದ ಜಯಗಳಿಸಿದ್ದಾರೆ. ಆದರೆ ಇದನ್ನು ಟ್ರಂಪ್ ಒಪ್ಪುತ್ತಿಲ್ಲ. ಹಾಗಾಗಿ ಟ್ರಂಪ್ ಬೆಂಬಲಿಗರು ಇಂದು ಸಂಸತ್ ಮೇಲೆ ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...