Homeಅಂತರಾಷ್ಟ್ರೀಯಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ‌ ವಿನ್ಸೆಂಟ್‌ ಕ್ಸೇವಿಯರ್‌ನ ಖಾತೆಗಳನ್ನು ಬ್ಯಾನ್‌ ಮಾಡಬೇಕು. ಭಾರತ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು.

- Advertisement -
- Advertisement -

ಅಮೆರಿಕದ ಶ್ವೇತಭವನದ‌ ಮೇಲಿನ ದಾಳಿಯ ಸಂದರ್ಭದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದ ಭಾರತ ಮೂಲದ ವಿನ್ಸೆಂಟ್‌ ಕ್ಸೇವಿಯರ್‌ ವಿರುದ್ಧ ಇಂದು (ಜ.9) ದೂರು ದಾಖಲಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್‌ ಬೆಂಬಲಿಗರು ಶುಕ್ರವಾರ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು.

ತ್ರಿವರ್ಣ ಧ್ವಜ ದುರ್ಬಳಕೆಗೆ ಸಂಬಂಧಿಸಿದಂತೆ ದೀಪಕ್‌ ಕೆ ಸಿಂಗ್‌ ಎಂಬುವವರು ದೆಹಲಿಯ ಕಲ್ಕಾಜಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, “ಈ ಘಟನೆಯ ತನಿಖೆ ನಡೆಸಬೇಕು ಎಂದು ನಾನು ದೆಹಲಿ ಪೊಲೀಸರಲ್ಲಿ ಮನವಿ ಮಾಡುತ್ತೇನೆ. ಪ್ರತಿಭಟನೆಯ ವೇಳೆ ತ್ರಿವರ್ಣ ಧ್ವಜ ಹಿಡಿದಿದ್ದ ವ್ಯಕ್ತಿಯ ಮೇಲೆ ನನಗೆ ವೈಯಕ್ತಿಕ ದ್ವೇಷವೇನೂ ಇಲ್ಲ. ಆದರೆ, ಆತನ ಕೃತ್ಯವು ಭಾರತ ಮತ್ತು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ. ಇದು ದೇಶದ್ರೋಹ,” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

“ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ‌ ವಿನ್ಸೆಂಟ್‌ ಕ್ಸೇವಿಯರ್‌ನ ಖಾತೆಗಳನ್ನು ಬ್ಯಾನ್‌ ಮಾಡಬೇಕು. ಭಾರತ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ದೀಪಕ್‌‌ ಮನವಿ ಮಾಡಿದ್ದಾರೆ. ಈ ಕುರಿತು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಮೋದಿಯೊಂದಿಗೆ ಮಾತನಾಡಿ: ಬ್ರಿಟನ್‌ ಪ್ರಧಾನಿಗೆ ಪತ್ರಬರೆದ ಅಲ್ಲಿನ 100 ಸಂಸದರು

ಈ ಕುರಿತು ಟ್ವೀಟ್‌ ಮಾಡಿರುವ ಭಾರತೀಯ ಮೂಲದ, ವರ್ಜೀನಿಯಾದಲ್ಲಿ ವಾಸವಾಗಿರುವ ಟೆಕ್ಕಿ ವಿನ್ಸೆಂಟ್‌ ಕ್ಸೇವಿಯರ್‌, “ಅಮೆರಿಕದ ದೇಶಭಕ್ತರು- ವಿಯೆಟ್ನಾಂನವರು, ಭಾರತೀಯರು, ಕೊರಿಯನ್ನರು, ಇರಾನಿಯನ್ನರು, ಇನ್ನೂ ಹಲವು ದೇಶಗಳ ವಿವಿಧ ಜನಾಂಗಗಳ ಜನರು ಅಮೆರಿಕ ಚುನಾವಣೆಯಲ್ಲಿ ನಡೆದಿರುವ ಅಕ್ರಮದ ವಿರುದ್ಧ ಮೆರವಣಿಗೆ ನಡೆಸಿ, ಟ್ರಂಪ್‌ಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಡುತ್ತಿರುವ ಪ್ರತಿಭಟನಾಕಾರರು” ಎಂದು ಬರೆದುಕೊಂಡು ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಅಮೆರಿಕದ ಚುನಾವಣೆ ಮುಗಿದು, ಜೋ ಬೈಡೆನ್‌ ಗೆಲುವು ಸಾಧಿಸಿದ್ದರೂ ಸಹ ಡೊನಾಲ್ಡ್‌ ಟ್ರಂಪ್‌ ತಮ್ಮ ಸೋಲನ್ನು ಒಪ್ಪಿಕೊಂಡಿಲ್ಲ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲಿನಿಂದಲೂ ಆರೋಪಿಸುತ್ತಲೇ ಇದ್ದಾರೆ. ಇದರ ಭಾಗವಾಗಿ ಟ್ರಂಪ್‌ ಬೆಂಬಲಿಗರು ಇತ್ತೀಚೆಗೆ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇಲ್ಲಿ ಭಾರತದ ಧ್ವಜವನ್ನೂ ಬಳಸಲಾಗಿತ್ತು. ಇದಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಟ್ರಂಪ್‌ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಅವರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ.


ಇದನ್ನೂ ಓದಿ: ಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...