Homeಅಂತರಾಷ್ಟ್ರೀಯಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ‌ ವಿನ್ಸೆಂಟ್‌ ಕ್ಸೇವಿಯರ್‌ನ ಖಾತೆಗಳನ್ನು ಬ್ಯಾನ್‌ ಮಾಡಬೇಕು. ಭಾರತ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು.

- Advertisement -
- Advertisement -

ಅಮೆರಿಕದ ಶ್ವೇತಭವನದ‌ ಮೇಲಿನ ದಾಳಿಯ ಸಂದರ್ಭದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದ ಭಾರತ ಮೂಲದ ವಿನ್ಸೆಂಟ್‌ ಕ್ಸೇವಿಯರ್‌ ವಿರುದ್ಧ ಇಂದು (ಜ.9) ದೂರು ದಾಖಲಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್‌ ಬೆಂಬಲಿಗರು ಶುಕ್ರವಾರ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು.

ತ್ರಿವರ್ಣ ಧ್ವಜ ದುರ್ಬಳಕೆಗೆ ಸಂಬಂಧಿಸಿದಂತೆ ದೀಪಕ್‌ ಕೆ ಸಿಂಗ್‌ ಎಂಬುವವರು ದೆಹಲಿಯ ಕಲ್ಕಾಜಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, “ಈ ಘಟನೆಯ ತನಿಖೆ ನಡೆಸಬೇಕು ಎಂದು ನಾನು ದೆಹಲಿ ಪೊಲೀಸರಲ್ಲಿ ಮನವಿ ಮಾಡುತ್ತೇನೆ. ಪ್ರತಿಭಟನೆಯ ವೇಳೆ ತ್ರಿವರ್ಣ ಧ್ವಜ ಹಿಡಿದಿದ್ದ ವ್ಯಕ್ತಿಯ ಮೇಲೆ ನನಗೆ ವೈಯಕ್ತಿಕ ದ್ವೇಷವೇನೂ ಇಲ್ಲ. ಆದರೆ, ಆತನ ಕೃತ್ಯವು ಭಾರತ ಮತ್ತು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ. ಇದು ದೇಶದ್ರೋಹ,” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

“ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ‌ ವಿನ್ಸೆಂಟ್‌ ಕ್ಸೇವಿಯರ್‌ನ ಖಾತೆಗಳನ್ನು ಬ್ಯಾನ್‌ ಮಾಡಬೇಕು. ಭಾರತ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ದೀಪಕ್‌‌ ಮನವಿ ಮಾಡಿದ್ದಾರೆ. ಈ ಕುರಿತು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಮೋದಿಯೊಂದಿಗೆ ಮಾತನಾಡಿ: ಬ್ರಿಟನ್‌ ಪ್ರಧಾನಿಗೆ ಪತ್ರಬರೆದ ಅಲ್ಲಿನ 100 ಸಂಸದರು

ಈ ಕುರಿತು ಟ್ವೀಟ್‌ ಮಾಡಿರುವ ಭಾರತೀಯ ಮೂಲದ, ವರ್ಜೀನಿಯಾದಲ್ಲಿ ವಾಸವಾಗಿರುವ ಟೆಕ್ಕಿ ವಿನ್ಸೆಂಟ್‌ ಕ್ಸೇವಿಯರ್‌, “ಅಮೆರಿಕದ ದೇಶಭಕ್ತರು- ವಿಯೆಟ್ನಾಂನವರು, ಭಾರತೀಯರು, ಕೊರಿಯನ್ನರು, ಇರಾನಿಯನ್ನರು, ಇನ್ನೂ ಹಲವು ದೇಶಗಳ ವಿವಿಧ ಜನಾಂಗಗಳ ಜನರು ಅಮೆರಿಕ ಚುನಾವಣೆಯಲ್ಲಿ ನಡೆದಿರುವ ಅಕ್ರಮದ ವಿರುದ್ಧ ಮೆರವಣಿಗೆ ನಡೆಸಿ, ಟ್ರಂಪ್‌ಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಡುತ್ತಿರುವ ಪ್ರತಿಭಟನಾಕಾರರು” ಎಂದು ಬರೆದುಕೊಂಡು ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಅಮೆರಿಕದ ಚುನಾವಣೆ ಮುಗಿದು, ಜೋ ಬೈಡೆನ್‌ ಗೆಲುವು ಸಾಧಿಸಿದ್ದರೂ ಸಹ ಡೊನಾಲ್ಡ್‌ ಟ್ರಂಪ್‌ ತಮ್ಮ ಸೋಲನ್ನು ಒಪ್ಪಿಕೊಂಡಿಲ್ಲ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲಿನಿಂದಲೂ ಆರೋಪಿಸುತ್ತಲೇ ಇದ್ದಾರೆ. ಇದರ ಭಾಗವಾಗಿ ಟ್ರಂಪ್‌ ಬೆಂಬಲಿಗರು ಇತ್ತೀಚೆಗೆ ಶ್ವೇತ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇಲ್ಲಿ ಭಾರತದ ಧ್ವಜವನ್ನೂ ಬಳಸಲಾಗಿತ್ತು. ಇದಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಟ್ರಂಪ್‌ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಅವರ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ.


ಇದನ್ನೂ ಓದಿ: ಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...