Homeಅಂತರಾಷ್ಟ್ರೀಯಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

- Advertisement -
- Advertisement -

ಸುಂಕ-ಪ್ರತಿ ಸುಂಕ ವಿಧಿಸುತ್ತಾ ಪರಸ್ಪರ ವ್ಯಾಪಾರ ಸಮರ ಆರಂಭಿಸಿದ್ದ ಅಮೆರಿಕ ಮತ್ತು ಚೀನಾ ಕೊನೆಗೂ ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ಸರಕುಗಳ ಮೇಲಿನ ಸುಂಕವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಜಿನೀವಾದಲ್ಲಿ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕ್ರಮವು ಪರಸ್ಪರ ವ್ಯಾಪಾರ ಸಮರವನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳು ಒಂದು ಶಾಶ್ವತ ಒಪ್ಪಂದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳ ಕಾಲಾವಕಾಶ ಸಿಗಲಿದೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಪ್ರಸ್ತಾವಿತ ಒಪ್ಪಂದದಡಿಯಲ್ಲಿ ಅಮೆರಿಕವು ಮೇ 14ರ ವೇಳೆಗೆ ಚೀನಾದ ಹೆಚ್ಚಿನ ಆಮದುಗಳ ಮೇಲಿನ ಒಟ್ಟು 145 ಶೇಕಡ ಸುಂಕವನ್ನು ಶೇಕಡ 30ಕ್ಕೆ ಇಳಿಸಲಿದೆ. ಇದರಲ್ಲಿ ಫೆಂಟನಿಲ್‌ಗೆ ಸಂಬಂಧಿಸಿದ ಸುಂಕಗಳು ಸೇರಿವೆ.

ಇದಕ್ಕೆ ಪ್ರತಿಯಾಗಿ, ಚೀನಾ ಅಮೆರಿಕದ ಸರಕುಗಳ ಮೇಲಿನ ತನ್ನ 125 ಶೇಕಡ ಸುಂಕವನ್ನು ಶೇಕಡ 10ಕ್ಕೆ ಇಳಿಸಲಿದೆ. ಎರಡು ದೇಶಗಳ ನಡುವಿನ ಈ ಸುಂಕ ಕಡಿತವು ಈಗ ತಾತ್ಕಾಲಿಕವಾಗಿದ್ದು, ಕನಿಷ್ಠ ಮುಂದಿನ 90 ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದೇಶಗಳ ನಡುವಿನ ವ್ಯಾಪಾರ ಮಾತುಕತೆಯ ಸಮಯದಲ್ಲಿ ಎರಡೂ ಕಡೆಯವರು ಧನಾತ್ಮಕವಾಗಿ ನಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಮಾತುಕತೆಯನ್ನು “ಪ್ರೊಡಕ್ಟಿವ್ ಅಂಡ್ ಕನ್‌ಸ್ಟ್ರಕ್ಟಿವ್” ಎಂದು ಬಣ್ಣಿಸಿದರೆ, ಚೀನಾದ ಉಪಾಧ್ಯಕ್ಷ ಹಿ ಲೈಫೆಂಗ್ “ಇನ್‌- ಡೆಪ್ತ್‌ ಅಂಡ್ ಕ್ಯಾಂಡಿಡ್” ಎಂದಿದ್ದಾರೆ.

ಶ್ವೇತ ಭವನವು ಮಾತುಕತೆಯಲ್ಲಿ ‘ವ್ಯಾಪಾರ ಒಪ್ಪಂದ’ ಮಾಡಿಕೊಳ್ಳಲಾಗಿದೆ ಎಂಬಂತೆ ಪ್ರತಿಕ್ರಿಯಿಸಿದೆ. ಆದರೂ, ಅದು ಇನ್ನೂ ನಿರ್ದಿಷ್ಟ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಮಗ್ರ ಜಂಟಿ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ಜನವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಆಮದುಗಳ ಮೇಲೆ ಭಾರಿ ಸುಂಕಗಳನ್ನು ವಿಧಿಸಿದ್ದರು. ಚೀನಾ ಕೂಡ ಹೆಚ್ಚಿನ ಸುಂಕಗಳನ್ನು ವಿಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತ್ತು. ಇದರಿಂದ ಎರಡೂ ದೇಶಗಳ ನಡುವೆ ವ್ಯಾಪಾರ ಸಮರ ಏರ್ಪಟ್ಟಿತ್ತು. ಆ ಬಳಿಕ ನಡೆದ ಅಮೆರಿಕ ಮತ್ತು ಚೀನಾ ಅಧಿಕಾರಿಗಳ ನಡುವಿನ ಮೊದಲ ಮುಖಾಮುಖಿ ಮಾತುಕತೆ ಇದಾಗಿದೆ.

ತೀವ್ರ ಸುಂಕ ಹೆಚ್ಚಳವು ಜಾಗತಿಕ ಹಣಕಾಸು ಮಾರುಕಟ್ಟೆಗಳನ್ನು ಅಲುಗಾಡಿಸಿತ್ತು ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯನ್ನು ಹುಟ್ಟುಹಾಕಿತ್ತು.

ಜಿನೀವಾದಲ್ಲಿ ನಡೆದ ಎರಡು ದಿನಗಳ ಮಾತುಕತೆಯ ಕೊನೆಯಲ್ಲಿ, ಅಮೆರಿಕದ ವ್ಯಾಪಾರ ಪ್ರತಿನಿಧಿ ರಾಯಭಾರಿ ಜೇಮೀಸನ್ ಗ್ರೀರ್, ಈ ಒಪ್ಪಂದವು ಚೀನಾದೊಂದಿಗಿನ ಅಮೆರಿಕದ 1.2 ಟ್ರಿಲಿಯನ್ ಡಾಲರ್ ವ್ಯಾಪಾರ ಕೊರತೆ ನೀಗಿಸಲು ಸಹಾಯ ಮಾಡಲಿದೆ ಎಂದಿದ್ದಾರೆ.

ಜಂಟಿ ಹೇಳಿಕೆಯಲ್ಲಿ, ವ್ಯಾಪಾರ ಸಂಘರ್ಷವನ್ನು ಶಮನಗೊಳಿಸುವಲ್ಲಿ ‘ಗಣನೀಯ ಪ್ರಗತಿ’ ಸಾಧಿಸಲಾಗಿದೆ ಎಂದು ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

ಎರಡೂ ಕಡೆಯಿಂದ ಹಲವು ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ನಿರಂತರ ಸಂವಾದವನ್ನು ನಿರ್ವಹಿಸಲು ಶಾಶ್ವತ ಆರ್ಥಿಕ ಮತ್ತು ವ್ಯಾಪಾರ ಸಮಾಲೋಚನಾ ಕಾರ್ಯವಿಧಾನವನ್ನು ಸ್ಥಾಪಿಸಲು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ವಾಣಿಜ್ಯ ಸಂಸ್ಥೆಯ ಇನ್ಸ್‌ಪೆಕ್ಟರ್ ಜನರಲ್ ನ್ಗೋಜಿ ಒಕೊಂಜೊ-ಇವೆಲಾ ಅವರು ಎರಡು ದೇಶಗಳ ನಡುವಿನ ಚರ್ಚೆಯ ಫಲಿತಾಂಶವನ್ನು ಸ್ವಾಗತಿಸಿದ್ದಾರೆ. ಇದನ್ನು ಒಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಮುಂದಿನ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...