Homeಅಂತರಾಷ್ಟ್ರೀಯಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

- Advertisement -
- Advertisement -

ಸುಂಕ-ಪ್ರತಿ ಸುಂಕ ವಿಧಿಸುತ್ತಾ ಪರಸ್ಪರ ವ್ಯಾಪಾರ ಸಮರ ಆರಂಭಿಸಿದ್ದ ಅಮೆರಿಕ ಮತ್ತು ಚೀನಾ ಕೊನೆಗೂ ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ಸರಕುಗಳ ಮೇಲಿನ ಸುಂಕವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಜಿನೀವಾದಲ್ಲಿ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕ್ರಮವು ಪರಸ್ಪರ ವ್ಯಾಪಾರ ಸಮರವನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳು ಒಂದು ಶಾಶ್ವತ ಒಪ್ಪಂದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳ ಕಾಲಾವಕಾಶ ಸಿಗಲಿದೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಪ್ರಸ್ತಾವಿತ ಒಪ್ಪಂದದಡಿಯಲ್ಲಿ ಅಮೆರಿಕವು ಮೇ 14ರ ವೇಳೆಗೆ ಚೀನಾದ ಹೆಚ್ಚಿನ ಆಮದುಗಳ ಮೇಲಿನ ಒಟ್ಟು 145 ಶೇಕಡ ಸುಂಕವನ್ನು ಶೇಕಡ 30ಕ್ಕೆ ಇಳಿಸಲಿದೆ. ಇದರಲ್ಲಿ ಫೆಂಟನಿಲ್‌ಗೆ ಸಂಬಂಧಿಸಿದ ಸುಂಕಗಳು ಸೇರಿವೆ.

ಇದಕ್ಕೆ ಪ್ರತಿಯಾಗಿ, ಚೀನಾ ಅಮೆರಿಕದ ಸರಕುಗಳ ಮೇಲಿನ ತನ್ನ 125 ಶೇಕಡ ಸುಂಕವನ್ನು ಶೇಕಡ 10ಕ್ಕೆ ಇಳಿಸಲಿದೆ. ಎರಡು ದೇಶಗಳ ನಡುವಿನ ಈ ಸುಂಕ ಕಡಿತವು ಈಗ ತಾತ್ಕಾಲಿಕವಾಗಿದ್ದು, ಕನಿಷ್ಠ ಮುಂದಿನ 90 ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದೇಶಗಳ ನಡುವಿನ ವ್ಯಾಪಾರ ಮಾತುಕತೆಯ ಸಮಯದಲ್ಲಿ ಎರಡೂ ಕಡೆಯವರು ಧನಾತ್ಮಕವಾಗಿ ನಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಮಾತುಕತೆಯನ್ನು “ಪ್ರೊಡಕ್ಟಿವ್ ಅಂಡ್ ಕನ್‌ಸ್ಟ್ರಕ್ಟಿವ್” ಎಂದು ಬಣ್ಣಿಸಿದರೆ, ಚೀನಾದ ಉಪಾಧ್ಯಕ್ಷ ಹಿ ಲೈಫೆಂಗ್ “ಇನ್‌- ಡೆಪ್ತ್‌ ಅಂಡ್ ಕ್ಯಾಂಡಿಡ್” ಎಂದಿದ್ದಾರೆ.

ಶ್ವೇತ ಭವನವು ಮಾತುಕತೆಯಲ್ಲಿ ‘ವ್ಯಾಪಾರ ಒಪ್ಪಂದ’ ಮಾಡಿಕೊಳ್ಳಲಾಗಿದೆ ಎಂಬಂತೆ ಪ್ರತಿಕ್ರಿಯಿಸಿದೆ. ಆದರೂ, ಅದು ಇನ್ನೂ ನಿರ್ದಿಷ್ಟ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಮಗ್ರ ಜಂಟಿ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ಜನವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಆಮದುಗಳ ಮೇಲೆ ಭಾರಿ ಸುಂಕಗಳನ್ನು ವಿಧಿಸಿದ್ದರು. ಚೀನಾ ಕೂಡ ಹೆಚ್ಚಿನ ಸುಂಕಗಳನ್ನು ವಿಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತ್ತು. ಇದರಿಂದ ಎರಡೂ ದೇಶಗಳ ನಡುವೆ ವ್ಯಾಪಾರ ಸಮರ ಏರ್ಪಟ್ಟಿತ್ತು. ಆ ಬಳಿಕ ನಡೆದ ಅಮೆರಿಕ ಮತ್ತು ಚೀನಾ ಅಧಿಕಾರಿಗಳ ನಡುವಿನ ಮೊದಲ ಮುಖಾಮುಖಿ ಮಾತುಕತೆ ಇದಾಗಿದೆ.

ತೀವ್ರ ಸುಂಕ ಹೆಚ್ಚಳವು ಜಾಗತಿಕ ಹಣಕಾಸು ಮಾರುಕಟ್ಟೆಗಳನ್ನು ಅಲುಗಾಡಿಸಿತ್ತು ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯನ್ನು ಹುಟ್ಟುಹಾಕಿತ್ತು.

ಜಿನೀವಾದಲ್ಲಿ ನಡೆದ ಎರಡು ದಿನಗಳ ಮಾತುಕತೆಯ ಕೊನೆಯಲ್ಲಿ, ಅಮೆರಿಕದ ವ್ಯಾಪಾರ ಪ್ರತಿನಿಧಿ ರಾಯಭಾರಿ ಜೇಮೀಸನ್ ಗ್ರೀರ್, ಈ ಒಪ್ಪಂದವು ಚೀನಾದೊಂದಿಗಿನ ಅಮೆರಿಕದ 1.2 ಟ್ರಿಲಿಯನ್ ಡಾಲರ್ ವ್ಯಾಪಾರ ಕೊರತೆ ನೀಗಿಸಲು ಸಹಾಯ ಮಾಡಲಿದೆ ಎಂದಿದ್ದಾರೆ.

ಜಂಟಿ ಹೇಳಿಕೆಯಲ್ಲಿ, ವ್ಯಾಪಾರ ಸಂಘರ್ಷವನ್ನು ಶಮನಗೊಳಿಸುವಲ್ಲಿ ‘ಗಣನೀಯ ಪ್ರಗತಿ’ ಸಾಧಿಸಲಾಗಿದೆ ಎಂದು ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

ಎರಡೂ ಕಡೆಯಿಂದ ಹಲವು ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ನಿರಂತರ ಸಂವಾದವನ್ನು ನಿರ್ವಹಿಸಲು ಶಾಶ್ವತ ಆರ್ಥಿಕ ಮತ್ತು ವ್ಯಾಪಾರ ಸಮಾಲೋಚನಾ ಕಾರ್ಯವಿಧಾನವನ್ನು ಸ್ಥಾಪಿಸಲು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ವಾಣಿಜ್ಯ ಸಂಸ್ಥೆಯ ಇನ್ಸ್‌ಪೆಕ್ಟರ್ ಜನರಲ್ ನ್ಗೋಜಿ ಒಕೊಂಜೊ-ಇವೆಲಾ ಅವರು ಎರಡು ದೇಶಗಳ ನಡುವಿನ ಚರ್ಚೆಯ ಫಲಿತಾಂಶವನ್ನು ಸ್ವಾಗತಿಸಿದ್ದಾರೆ. ಇದನ್ನು ಒಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಮುಂದಿನ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...