Homeಅಂತರಾಷ್ಟ್ರೀಯಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

- Advertisement -
- Advertisement -

ಸುಂಕ-ಪ್ರತಿ ಸುಂಕ ವಿಧಿಸುತ್ತಾ ಪರಸ್ಪರ ವ್ಯಾಪಾರ ಸಮರ ಆರಂಭಿಸಿದ್ದ ಅಮೆರಿಕ ಮತ್ತು ಚೀನಾ ಕೊನೆಗೂ ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ಸರಕುಗಳ ಮೇಲಿನ ಸುಂಕವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಜಿನೀವಾದಲ್ಲಿ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕ್ರಮವು ಪರಸ್ಪರ ವ್ಯಾಪಾರ ಸಮರವನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳು ಒಂದು ಶಾಶ್ವತ ಒಪ್ಪಂದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳ ಕಾಲಾವಕಾಶ ಸಿಗಲಿದೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಪ್ರಸ್ತಾವಿತ ಒಪ್ಪಂದದಡಿಯಲ್ಲಿ ಅಮೆರಿಕವು ಮೇ 14ರ ವೇಳೆಗೆ ಚೀನಾದ ಹೆಚ್ಚಿನ ಆಮದುಗಳ ಮೇಲಿನ ಒಟ್ಟು 145 ಶೇಕಡ ಸುಂಕವನ್ನು ಶೇಕಡ 30ಕ್ಕೆ ಇಳಿಸಲಿದೆ. ಇದರಲ್ಲಿ ಫೆಂಟನಿಲ್‌ಗೆ ಸಂಬಂಧಿಸಿದ ಸುಂಕಗಳು ಸೇರಿವೆ.

ಇದಕ್ಕೆ ಪ್ರತಿಯಾಗಿ, ಚೀನಾ ಅಮೆರಿಕದ ಸರಕುಗಳ ಮೇಲಿನ ತನ್ನ 125 ಶೇಕಡ ಸುಂಕವನ್ನು ಶೇಕಡ 10ಕ್ಕೆ ಇಳಿಸಲಿದೆ. ಎರಡು ದೇಶಗಳ ನಡುವಿನ ಈ ಸುಂಕ ಕಡಿತವು ಈಗ ತಾತ್ಕಾಲಿಕವಾಗಿದ್ದು, ಕನಿಷ್ಠ ಮುಂದಿನ 90 ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದೇಶಗಳ ನಡುವಿನ ವ್ಯಾಪಾರ ಮಾತುಕತೆಯ ಸಮಯದಲ್ಲಿ ಎರಡೂ ಕಡೆಯವರು ಧನಾತ್ಮಕವಾಗಿ ನಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಮಾತುಕತೆಯನ್ನು “ಪ್ರೊಡಕ್ಟಿವ್ ಅಂಡ್ ಕನ್‌ಸ್ಟ್ರಕ್ಟಿವ್” ಎಂದು ಬಣ್ಣಿಸಿದರೆ, ಚೀನಾದ ಉಪಾಧ್ಯಕ್ಷ ಹಿ ಲೈಫೆಂಗ್ “ಇನ್‌- ಡೆಪ್ತ್‌ ಅಂಡ್ ಕ್ಯಾಂಡಿಡ್” ಎಂದಿದ್ದಾರೆ.

ಶ್ವೇತ ಭವನವು ಮಾತುಕತೆಯಲ್ಲಿ ‘ವ್ಯಾಪಾರ ಒಪ್ಪಂದ’ ಮಾಡಿಕೊಳ್ಳಲಾಗಿದೆ ಎಂಬಂತೆ ಪ್ರತಿಕ್ರಿಯಿಸಿದೆ. ಆದರೂ, ಅದು ಇನ್ನೂ ನಿರ್ದಿಷ್ಟ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಮಗ್ರ ಜಂಟಿ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ಜನವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಆಮದುಗಳ ಮೇಲೆ ಭಾರಿ ಸುಂಕಗಳನ್ನು ವಿಧಿಸಿದ್ದರು. ಚೀನಾ ಕೂಡ ಹೆಚ್ಚಿನ ಸುಂಕಗಳನ್ನು ವಿಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತ್ತು. ಇದರಿಂದ ಎರಡೂ ದೇಶಗಳ ನಡುವೆ ವ್ಯಾಪಾರ ಸಮರ ಏರ್ಪಟ್ಟಿತ್ತು. ಆ ಬಳಿಕ ನಡೆದ ಅಮೆರಿಕ ಮತ್ತು ಚೀನಾ ಅಧಿಕಾರಿಗಳ ನಡುವಿನ ಮೊದಲ ಮುಖಾಮುಖಿ ಮಾತುಕತೆ ಇದಾಗಿದೆ.

ತೀವ್ರ ಸುಂಕ ಹೆಚ್ಚಳವು ಜಾಗತಿಕ ಹಣಕಾಸು ಮಾರುಕಟ್ಟೆಗಳನ್ನು ಅಲುಗಾಡಿಸಿತ್ತು ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯನ್ನು ಹುಟ್ಟುಹಾಕಿತ್ತು.

ಜಿನೀವಾದಲ್ಲಿ ನಡೆದ ಎರಡು ದಿನಗಳ ಮಾತುಕತೆಯ ಕೊನೆಯಲ್ಲಿ, ಅಮೆರಿಕದ ವ್ಯಾಪಾರ ಪ್ರತಿನಿಧಿ ರಾಯಭಾರಿ ಜೇಮೀಸನ್ ಗ್ರೀರ್, ಈ ಒಪ್ಪಂದವು ಚೀನಾದೊಂದಿಗಿನ ಅಮೆರಿಕದ 1.2 ಟ್ರಿಲಿಯನ್ ಡಾಲರ್ ವ್ಯಾಪಾರ ಕೊರತೆ ನೀಗಿಸಲು ಸಹಾಯ ಮಾಡಲಿದೆ ಎಂದಿದ್ದಾರೆ.

ಜಂಟಿ ಹೇಳಿಕೆಯಲ್ಲಿ, ವ್ಯಾಪಾರ ಸಂಘರ್ಷವನ್ನು ಶಮನಗೊಳಿಸುವಲ್ಲಿ ‘ಗಣನೀಯ ಪ್ರಗತಿ’ ಸಾಧಿಸಲಾಗಿದೆ ಎಂದು ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

ಎರಡೂ ಕಡೆಯಿಂದ ಹಲವು ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ನಿರಂತರ ಸಂವಾದವನ್ನು ನಿರ್ವಹಿಸಲು ಶಾಶ್ವತ ಆರ್ಥಿಕ ಮತ್ತು ವ್ಯಾಪಾರ ಸಮಾಲೋಚನಾ ಕಾರ್ಯವಿಧಾನವನ್ನು ಸ್ಥಾಪಿಸಲು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ವಾಣಿಜ್ಯ ಸಂಸ್ಥೆಯ ಇನ್ಸ್‌ಪೆಕ್ಟರ್ ಜನರಲ್ ನ್ಗೋಜಿ ಒಕೊಂಜೊ-ಇವೆಲಾ ಅವರು ಎರಡು ದೇಶಗಳ ನಡುವಿನ ಚರ್ಚೆಯ ಫಲಿತಾಂಶವನ್ನು ಸ್ವಾಗತಿಸಿದ್ದಾರೆ. ಇದನ್ನು ಒಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಮುಂದಿನ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...