Homeಅಂತರಾಷ್ಟ್ರೀಯಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

- Advertisement -
- Advertisement -

ಸುಂಕ-ಪ್ರತಿ ಸುಂಕ ವಿಧಿಸುತ್ತಾ ಪರಸ್ಪರ ವ್ಯಾಪಾರ ಸಮರ ಆರಂಭಿಸಿದ್ದ ಅಮೆರಿಕ ಮತ್ತು ಚೀನಾ ಕೊನೆಗೂ ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ಸರಕುಗಳ ಮೇಲಿನ ಸುಂಕವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಜಿನೀವಾದಲ್ಲಿ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕ್ರಮವು ಪರಸ್ಪರ ವ್ಯಾಪಾರ ಸಮರವನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳು ಒಂದು ಶಾಶ್ವತ ಒಪ್ಪಂದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳ ಕಾಲಾವಕಾಶ ಸಿಗಲಿದೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಪ್ರಸ್ತಾವಿತ ಒಪ್ಪಂದದಡಿಯಲ್ಲಿ ಅಮೆರಿಕವು ಮೇ 14ರ ವೇಳೆಗೆ ಚೀನಾದ ಹೆಚ್ಚಿನ ಆಮದುಗಳ ಮೇಲಿನ ಒಟ್ಟು 145 ಶೇಕಡ ಸುಂಕವನ್ನು ಶೇಕಡ 30ಕ್ಕೆ ಇಳಿಸಲಿದೆ. ಇದರಲ್ಲಿ ಫೆಂಟನಿಲ್‌ಗೆ ಸಂಬಂಧಿಸಿದ ಸುಂಕಗಳು ಸೇರಿವೆ.

ಇದಕ್ಕೆ ಪ್ರತಿಯಾಗಿ, ಚೀನಾ ಅಮೆರಿಕದ ಸರಕುಗಳ ಮೇಲಿನ ತನ್ನ 125 ಶೇಕಡ ಸುಂಕವನ್ನು ಶೇಕಡ 10ಕ್ಕೆ ಇಳಿಸಲಿದೆ. ಎರಡು ದೇಶಗಳ ನಡುವಿನ ಈ ಸುಂಕ ಕಡಿತವು ಈಗ ತಾತ್ಕಾಲಿಕವಾಗಿದ್ದು, ಕನಿಷ್ಠ ಮುಂದಿನ 90 ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದೇಶಗಳ ನಡುವಿನ ವ್ಯಾಪಾರ ಮಾತುಕತೆಯ ಸಮಯದಲ್ಲಿ ಎರಡೂ ಕಡೆಯವರು ಧನಾತ್ಮಕವಾಗಿ ನಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಮಾತುಕತೆಯನ್ನು “ಪ್ರೊಡಕ್ಟಿವ್ ಅಂಡ್ ಕನ್‌ಸ್ಟ್ರಕ್ಟಿವ್” ಎಂದು ಬಣ್ಣಿಸಿದರೆ, ಚೀನಾದ ಉಪಾಧ್ಯಕ್ಷ ಹಿ ಲೈಫೆಂಗ್ “ಇನ್‌- ಡೆಪ್ತ್‌ ಅಂಡ್ ಕ್ಯಾಂಡಿಡ್” ಎಂದಿದ್ದಾರೆ.

ಶ್ವೇತ ಭವನವು ಮಾತುಕತೆಯಲ್ಲಿ ‘ವ್ಯಾಪಾರ ಒಪ್ಪಂದ’ ಮಾಡಿಕೊಳ್ಳಲಾಗಿದೆ ಎಂಬಂತೆ ಪ್ರತಿಕ್ರಿಯಿಸಿದೆ. ಆದರೂ, ಅದು ಇನ್ನೂ ನಿರ್ದಿಷ್ಟ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಮಗ್ರ ಜಂಟಿ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ಜನವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಆಮದುಗಳ ಮೇಲೆ ಭಾರಿ ಸುಂಕಗಳನ್ನು ವಿಧಿಸಿದ್ದರು. ಚೀನಾ ಕೂಡ ಹೆಚ್ಚಿನ ಸುಂಕಗಳನ್ನು ವಿಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತ್ತು. ಇದರಿಂದ ಎರಡೂ ದೇಶಗಳ ನಡುವೆ ವ್ಯಾಪಾರ ಸಮರ ಏರ್ಪಟ್ಟಿತ್ತು. ಆ ಬಳಿಕ ನಡೆದ ಅಮೆರಿಕ ಮತ್ತು ಚೀನಾ ಅಧಿಕಾರಿಗಳ ನಡುವಿನ ಮೊದಲ ಮುಖಾಮುಖಿ ಮಾತುಕತೆ ಇದಾಗಿದೆ.

ತೀವ್ರ ಸುಂಕ ಹೆಚ್ಚಳವು ಜಾಗತಿಕ ಹಣಕಾಸು ಮಾರುಕಟ್ಟೆಗಳನ್ನು ಅಲುಗಾಡಿಸಿತ್ತು ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯನ್ನು ಹುಟ್ಟುಹಾಕಿತ್ತು.

ಜಿನೀವಾದಲ್ಲಿ ನಡೆದ ಎರಡು ದಿನಗಳ ಮಾತುಕತೆಯ ಕೊನೆಯಲ್ಲಿ, ಅಮೆರಿಕದ ವ್ಯಾಪಾರ ಪ್ರತಿನಿಧಿ ರಾಯಭಾರಿ ಜೇಮೀಸನ್ ಗ್ರೀರ್, ಈ ಒಪ್ಪಂದವು ಚೀನಾದೊಂದಿಗಿನ ಅಮೆರಿಕದ 1.2 ಟ್ರಿಲಿಯನ್ ಡಾಲರ್ ವ್ಯಾಪಾರ ಕೊರತೆ ನೀಗಿಸಲು ಸಹಾಯ ಮಾಡಲಿದೆ ಎಂದಿದ್ದಾರೆ.

ಜಂಟಿ ಹೇಳಿಕೆಯಲ್ಲಿ, ವ್ಯಾಪಾರ ಸಂಘರ್ಷವನ್ನು ಶಮನಗೊಳಿಸುವಲ್ಲಿ ‘ಗಣನೀಯ ಪ್ರಗತಿ’ ಸಾಧಿಸಲಾಗಿದೆ ಎಂದು ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

ಎರಡೂ ಕಡೆಯಿಂದ ಹಲವು ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ನಿರಂತರ ಸಂವಾದವನ್ನು ನಿರ್ವಹಿಸಲು ಶಾಶ್ವತ ಆರ್ಥಿಕ ಮತ್ತು ವ್ಯಾಪಾರ ಸಮಾಲೋಚನಾ ಕಾರ್ಯವಿಧಾನವನ್ನು ಸ್ಥಾಪಿಸಲು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ವಾಣಿಜ್ಯ ಸಂಸ್ಥೆಯ ಇನ್ಸ್‌ಪೆಕ್ಟರ್ ಜನರಲ್ ನ್ಗೋಜಿ ಒಕೊಂಜೊ-ಇವೆಲಾ ಅವರು ಎರಡು ದೇಶಗಳ ನಡುವಿನ ಚರ್ಚೆಯ ಫಲಿತಾಂಶವನ್ನು ಸ್ವಾಗತಿಸಿದ್ದಾರೆ. ಇದನ್ನು ಒಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಮುಂದಿನ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...