Homeಮುಖಪುಟ'ತನ್ನ ಸರ್ಕಾರದ ಪದಚ್ಯುತಿ ಹಿಂದೆ ಯುಎಸ್ ಸಂಚು..'; ಶೇಖ್ ಹಸೀನಾ ಆರೋಪ

‘ತನ್ನ ಸರ್ಕಾರದ ಪದಚ್ಯುತಿ ಹಿಂದೆ ಯುಎಸ್ ಸಂಚು..’; ಶೇಖ್ ಹಸೀನಾ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಪದಚ್ಯುತಗೊಳಿಸಿದ ಹಿಂದೆ ಅಮೆರಿಕದ ಪಾತ್ರವಿದೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪಿಸಿದ್ದಾರೆ. “ತನ್ನನ್ನು ಅಧಿಕಾರದಿಂದ ಕೆಳಗಿಳಿಸಲು ದೊಡ್ಡ ಷಡ್ಯಂತ್ರ ರೂಪಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ, “ಸೇಂಟ್ ಮಾರ್ಟಿನ್ ದ್ವೀಪವನ್ನು ನೀಡಲು ನಿರಾಕರಿಸಿದ ಕಾರಣ ಯುಎಸ್ ತನ್ನನ್ನು ಅಧಿಕಾರದಿಂದ ತೆಗೆದುಹಾಕಲು ಯೋಜಿಸಿದೆ. ಈ ದ್ವೀಪವನ್ನು ಪಡೆಯುವುದು ಬಂಗಾಳಕೊಲ್ಲಿಯ ಮೇಲೆ ಅಮೇರಿಕಾ ಪ್ರಭಾವವನ್ನು ಪಡೆಯಲು ಸಹಾಯ ಮಾಡಬಹುದು ಎಂಬ ಕಾರಣಕ್ಕೆ” ಎಂದು ಹಸೀನಾ ಹೇಳಿದ್ದಾರೆ.

ಮೃತ ದೇಹಗಳನ್ನು ನೋಡಲು ಇಷ್ಟವಿಲ್ಲದ ಕಾರಣಕ್ಕೆ ರಾಜೀನಾಮೆ

“ನಾನು ರಾಜೀನಾಮೆ ನೀಡಿದ್ದೇನೆ, ಆದ್ದರಿಂದ ನಾನು ಮೃತ ದೇಹಗಳ ಮೆರವಣಿಗೆಯನ್ನು ನೋಡಬೇಕಾಗಿಲ್ಲ. ಅವರು ವಿದ್ಯಾರ್ಥಿಗಳ ಮೃತ ದೇಹಗಳ ಮೇಲೆ ಅಧಿಕಾರಕ್ಕೆ ಬರಲು ಬಯಸಿದ್ದರು. ಆದರೆ, ನಾನು ಅದಕ್ಕೆ ಅವಕಾಶ ನೀಡಲಿಲ್ಲ, ನಾನು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಸೇಂಟ್ ಮಾರ್ಟಿನ್ ದ್ವೀಪದ ಸಾರ್ವಭೌಮತ್ವವನ್ನು ಬಿಟ್ಟುಕೊಟ್ಟಿದ್ದರೆ ಮತ್ತು ಬಂಗಾಳಕೊಲ್ಲಿಯ ಮೇಲೆ ಅಮೆರಿಕದ ಹಿಡಿತಕ್ಕೆ ಅವಕಾಶ ನೀಡಿದ್ದರೆ ನಾನು ಅಧಿಕಾರದಲ್ಲಿ ಉಳಿಯಬಹುದಿತ್ತು” ಏಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ನಾನು ದೇಶದಲ್ಲಿಯೇ ಉಳಿದಿದ್ದರೆ, ಹೆಚ್ಚು ಜೀವಗಳನ್ನು ಕಳೆದುಕೊಳ್ಳಬಹುದಿತ್ತು, ಹೆಚ್ಚು ಸಂಪನ್ಮೂಲಗಳು ನಾಶವಾಗುತ್ತಿದ್ದವು. ನಾನು ನಿರ್ಗಮಿಸಲು ಅತ್ಯಂತ ಕಷ್ಟಕರವಾದ ನಿರ್ಧಾರವನ್ನು ಮಾಡಿದ್ದೇನೆ. ನೀವು ನನ್ನನ್ನು ಆರಿಸಿದ್ದರಿಂದ ನಾನು ನಿಮ್ಮ ನಾಯಕಿಯಾಗಿದ್ದೇನೆ, ನೀವೇ ನನ್ನ ಶಕ್ತಿ” ಎಂದು ಹಸೀನಾ ಹೇಳಿದ್ದಾರೆ.

ತನ್ನ ಪಕ್ಷದ ನಾಯಕರ ಹತ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಸೀನಾ, “ಹಲವು ನಾಯಕರನ್ನು ಕೊಲ್ಲಲಾಗಿದೆ, ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಅವರ ಮನೆಗಳನ್ನು ವಿಧ್ವಂಸಕತೆ, ಬೆಂಕಿಗೆ ಒಳಪಡಿಸಲಾಗಿದೆ ಎಂಬ ಸುದ್ದಿ ಬಂದಾಗ ನನ್ನ ಹೃದಯಕ್ಕೆ ಆಘಾತವಾಗಿದೆ ಸರ್ವಶಕ್ತ ಅಲ್ಲಾನ ಕೃಪೆಯೊಂದಿಗೆ ಶೀಘ್ರದಲ್ಲೇ ನಾನು ಹಿಂತಿರುಗುತ್ತೇನೆ.  ಅವಾಮಿ ಲೀಗ್ ಮತ್ತೆ ಮತ್ತೆ ಎದ್ದು ನಿಂತಿದೆ. ನನ್ನ ದೊಡ್ಡ ತಂದೆ ಶ್ರಮಿಸಿದ ಬಾಂಗ್ಲಾದೇಶದ ಭವಿಷ್ಯಕ್ಕಾಗಿ ನಾನು ಶಾಶ್ವತವಾಗಿ ಪ್ರಾರ್ಥಿಸುತ್ತೇನೆ. ನನ್ನ ತಂದೆ ಮತ್ತು ಕುಟುಂಬವು ತಮ್ಮ ಪ್ರಾಣವನ್ನು ನೀಡಿದ ದೇಶ” ಎಂದಿದ್ದಾರೆ.

“ವಿದ್ಯಾರ್ಥಿಗಳನ್ನು ಎಂದಿಗೂ ರಜಾಕಾರ್ ಎಂದು ಕರೆಯಲಿಲ್ಲ, ಹೇಳಿಕೆಯನ್ನು ತಿರುಚಲಾಗಿದೆ” ಎಂದು ಹಸೀನಾ ಸ್ಪಷ್ಟನೆ ನೀಡಿದ್ದಾರೆ.

ಕೋಟಾ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಅವರನ್ನು ಪ್ರಚೋದಿಸಲು ತಮ್ಮ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ಹೇಳಿದರು.

“ನಾನು ಬಾಂಗ್ಲಾದೇಶದ ಯುವ ವಿದ್ಯಾರ್ಥಿಗಳಿಗೆ ಪುನರಾವರ್ತಿಸಲು ಬಯಸುತ್ತೇನೆ. ನಾನು ನಿಮ್ಮನ್ನು ರಜಾಕರೆಂದು ಎಂದೂ ಕರೆದಿಲ್ಲ. ಬದಲಿಗೆ ನಿಮ್ಮನ್ನು ಪ್ರಚೋದಿಸಲು ನನ್ನ ಮಾತುಗಳನ್ನು ತಿರುಚಲಾಗಿದೆ. ಆ ದಿನದ ಸಂಪೂರ್ಣ ವೀಡಿಯೋವನ್ನು ವೀಕ್ಷಿಸಲು ವಿನಂತಿಸುತ್ತೇನೆ. ಪಿತೂರಿಗಾರರು ಮುಗ್ಧತೆಯ ಲಾಭವನ್ನು ಪಡೆದುಕೊಂಡಿದ್ದಾರೆ ಮತ್ತು ರಾಷ್ಟ್ರವನ್ನು ಅಸ್ಥಿರಗೊಳಿಸಲು ನಿಮ್ಮನ್ನು ಬಳಸಿಕೊಂಡಿದ್ದಾರೆ” ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ; ವಯನಾಡ್‌ ಭೂಕುಸಿತ | ನಾಪತ್ತೆಯಾದವರಿಗಾಗಿ ಹುಡುಕಾಟ ಪುನರಾರಂಭ; ಬದುಕುಳಿದವರಿಂದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...