Homeಮುಖಪುಟ'ತನ್ನ ಸರ್ಕಾರದ ಪದಚ್ಯುತಿ ಹಿಂದೆ ಯುಎಸ್ ಸಂಚು..'; ಶೇಖ್ ಹಸೀನಾ ಆರೋಪ

‘ತನ್ನ ಸರ್ಕಾರದ ಪದಚ್ಯುತಿ ಹಿಂದೆ ಯುಎಸ್ ಸಂಚು..’; ಶೇಖ್ ಹಸೀನಾ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಪದಚ್ಯುತಗೊಳಿಸಿದ ಹಿಂದೆ ಅಮೆರಿಕದ ಪಾತ್ರವಿದೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪಿಸಿದ್ದಾರೆ. “ತನ್ನನ್ನು ಅಧಿಕಾರದಿಂದ ಕೆಳಗಿಳಿಸಲು ದೊಡ್ಡ ಷಡ್ಯಂತ್ರ ರೂಪಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ, “ಸೇಂಟ್ ಮಾರ್ಟಿನ್ ದ್ವೀಪವನ್ನು ನೀಡಲು ನಿರಾಕರಿಸಿದ ಕಾರಣ ಯುಎಸ್ ತನ್ನನ್ನು ಅಧಿಕಾರದಿಂದ ತೆಗೆದುಹಾಕಲು ಯೋಜಿಸಿದೆ. ಈ ದ್ವೀಪವನ್ನು ಪಡೆಯುವುದು ಬಂಗಾಳಕೊಲ್ಲಿಯ ಮೇಲೆ ಅಮೇರಿಕಾ ಪ್ರಭಾವವನ್ನು ಪಡೆಯಲು ಸಹಾಯ ಮಾಡಬಹುದು ಎಂಬ ಕಾರಣಕ್ಕೆ” ಎಂದು ಹಸೀನಾ ಹೇಳಿದ್ದಾರೆ.

ಮೃತ ದೇಹಗಳನ್ನು ನೋಡಲು ಇಷ್ಟವಿಲ್ಲದ ಕಾರಣಕ್ಕೆ ರಾಜೀನಾಮೆ

“ನಾನು ರಾಜೀನಾಮೆ ನೀಡಿದ್ದೇನೆ, ಆದ್ದರಿಂದ ನಾನು ಮೃತ ದೇಹಗಳ ಮೆರವಣಿಗೆಯನ್ನು ನೋಡಬೇಕಾಗಿಲ್ಲ. ಅವರು ವಿದ್ಯಾರ್ಥಿಗಳ ಮೃತ ದೇಹಗಳ ಮೇಲೆ ಅಧಿಕಾರಕ್ಕೆ ಬರಲು ಬಯಸಿದ್ದರು. ಆದರೆ, ನಾನು ಅದಕ್ಕೆ ಅವಕಾಶ ನೀಡಲಿಲ್ಲ, ನಾನು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಸೇಂಟ್ ಮಾರ್ಟಿನ್ ದ್ವೀಪದ ಸಾರ್ವಭೌಮತ್ವವನ್ನು ಬಿಟ್ಟುಕೊಟ್ಟಿದ್ದರೆ ಮತ್ತು ಬಂಗಾಳಕೊಲ್ಲಿಯ ಮೇಲೆ ಅಮೆರಿಕದ ಹಿಡಿತಕ್ಕೆ ಅವಕಾಶ ನೀಡಿದ್ದರೆ ನಾನು ಅಧಿಕಾರದಲ್ಲಿ ಉಳಿಯಬಹುದಿತ್ತು” ಏಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ನಾನು ದೇಶದಲ್ಲಿಯೇ ಉಳಿದಿದ್ದರೆ, ಹೆಚ್ಚು ಜೀವಗಳನ್ನು ಕಳೆದುಕೊಳ್ಳಬಹುದಿತ್ತು, ಹೆಚ್ಚು ಸಂಪನ್ಮೂಲಗಳು ನಾಶವಾಗುತ್ತಿದ್ದವು. ನಾನು ನಿರ್ಗಮಿಸಲು ಅತ್ಯಂತ ಕಷ್ಟಕರವಾದ ನಿರ್ಧಾರವನ್ನು ಮಾಡಿದ್ದೇನೆ. ನೀವು ನನ್ನನ್ನು ಆರಿಸಿದ್ದರಿಂದ ನಾನು ನಿಮ್ಮ ನಾಯಕಿಯಾಗಿದ್ದೇನೆ, ನೀವೇ ನನ್ನ ಶಕ್ತಿ” ಎಂದು ಹಸೀನಾ ಹೇಳಿದ್ದಾರೆ.

ತನ್ನ ಪಕ್ಷದ ನಾಯಕರ ಹತ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಸೀನಾ, “ಹಲವು ನಾಯಕರನ್ನು ಕೊಲ್ಲಲಾಗಿದೆ, ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಅವರ ಮನೆಗಳನ್ನು ವಿಧ್ವಂಸಕತೆ, ಬೆಂಕಿಗೆ ಒಳಪಡಿಸಲಾಗಿದೆ ಎಂಬ ಸುದ್ದಿ ಬಂದಾಗ ನನ್ನ ಹೃದಯಕ್ಕೆ ಆಘಾತವಾಗಿದೆ ಸರ್ವಶಕ್ತ ಅಲ್ಲಾನ ಕೃಪೆಯೊಂದಿಗೆ ಶೀಘ್ರದಲ್ಲೇ ನಾನು ಹಿಂತಿರುಗುತ್ತೇನೆ.  ಅವಾಮಿ ಲೀಗ್ ಮತ್ತೆ ಮತ್ತೆ ಎದ್ದು ನಿಂತಿದೆ. ನನ್ನ ದೊಡ್ಡ ತಂದೆ ಶ್ರಮಿಸಿದ ಬಾಂಗ್ಲಾದೇಶದ ಭವಿಷ್ಯಕ್ಕಾಗಿ ನಾನು ಶಾಶ್ವತವಾಗಿ ಪ್ರಾರ್ಥಿಸುತ್ತೇನೆ. ನನ್ನ ತಂದೆ ಮತ್ತು ಕುಟುಂಬವು ತಮ್ಮ ಪ್ರಾಣವನ್ನು ನೀಡಿದ ದೇಶ” ಎಂದಿದ್ದಾರೆ.

“ವಿದ್ಯಾರ್ಥಿಗಳನ್ನು ಎಂದಿಗೂ ರಜಾಕಾರ್ ಎಂದು ಕರೆಯಲಿಲ್ಲ, ಹೇಳಿಕೆಯನ್ನು ತಿರುಚಲಾಗಿದೆ” ಎಂದು ಹಸೀನಾ ಸ್ಪಷ್ಟನೆ ನೀಡಿದ್ದಾರೆ.

ಕೋಟಾ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಅವರನ್ನು ಪ್ರಚೋದಿಸಲು ತಮ್ಮ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ಹೇಳಿದರು.

“ನಾನು ಬಾಂಗ್ಲಾದೇಶದ ಯುವ ವಿದ್ಯಾರ್ಥಿಗಳಿಗೆ ಪುನರಾವರ್ತಿಸಲು ಬಯಸುತ್ತೇನೆ. ನಾನು ನಿಮ್ಮನ್ನು ರಜಾಕರೆಂದು ಎಂದೂ ಕರೆದಿಲ್ಲ. ಬದಲಿಗೆ ನಿಮ್ಮನ್ನು ಪ್ರಚೋದಿಸಲು ನನ್ನ ಮಾತುಗಳನ್ನು ತಿರುಚಲಾಗಿದೆ. ಆ ದಿನದ ಸಂಪೂರ್ಣ ವೀಡಿಯೋವನ್ನು ವೀಕ್ಷಿಸಲು ವಿನಂತಿಸುತ್ತೇನೆ. ಪಿತೂರಿಗಾರರು ಮುಗ್ಧತೆಯ ಲಾಭವನ್ನು ಪಡೆದುಕೊಂಡಿದ್ದಾರೆ ಮತ್ತು ರಾಷ್ಟ್ರವನ್ನು ಅಸ್ಥಿರಗೊಳಿಸಲು ನಿಮ್ಮನ್ನು ಬಳಸಿಕೊಂಡಿದ್ದಾರೆ” ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ; ವಯನಾಡ್‌ ಭೂಕುಸಿತ | ನಾಪತ್ತೆಯಾದವರಿಗಾಗಿ ಹುಡುಕಾಟ ಪುನರಾರಂಭ; ಬದುಕುಳಿದವರಿಂದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...