Homeಮುಖಪುಟ'ತನ್ನ ಸರ್ಕಾರದ ಪದಚ್ಯುತಿ ಹಿಂದೆ ಯುಎಸ್ ಸಂಚು..'; ಶೇಖ್ ಹಸೀನಾ ಆರೋಪ

‘ತನ್ನ ಸರ್ಕಾರದ ಪದಚ್ಯುತಿ ಹಿಂದೆ ಯುಎಸ್ ಸಂಚು..’; ಶೇಖ್ ಹಸೀನಾ ಆರೋಪ

- Advertisement -
- Advertisement -

ತನ್ನ ಸರ್ಕಾರವನ್ನು ಪದಚ್ಯುತಗೊಳಿಸಿದ ಹಿಂದೆ ಅಮೆರಿಕದ ಪಾತ್ರವಿದೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪಿಸಿದ್ದಾರೆ. “ತನ್ನನ್ನು ಅಧಿಕಾರದಿಂದ ಕೆಳಗಿಳಿಸಲು ದೊಡ್ಡ ಷಡ್ಯಂತ್ರ ರೂಪಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ, “ಸೇಂಟ್ ಮಾರ್ಟಿನ್ ದ್ವೀಪವನ್ನು ನೀಡಲು ನಿರಾಕರಿಸಿದ ಕಾರಣ ಯುಎಸ್ ತನ್ನನ್ನು ಅಧಿಕಾರದಿಂದ ತೆಗೆದುಹಾಕಲು ಯೋಜಿಸಿದೆ. ಈ ದ್ವೀಪವನ್ನು ಪಡೆಯುವುದು ಬಂಗಾಳಕೊಲ್ಲಿಯ ಮೇಲೆ ಅಮೇರಿಕಾ ಪ್ರಭಾವವನ್ನು ಪಡೆಯಲು ಸಹಾಯ ಮಾಡಬಹುದು ಎಂಬ ಕಾರಣಕ್ಕೆ” ಎಂದು ಹಸೀನಾ ಹೇಳಿದ್ದಾರೆ.

ಮೃತ ದೇಹಗಳನ್ನು ನೋಡಲು ಇಷ್ಟವಿಲ್ಲದ ಕಾರಣಕ್ಕೆ ರಾಜೀನಾಮೆ

“ನಾನು ರಾಜೀನಾಮೆ ನೀಡಿದ್ದೇನೆ, ಆದ್ದರಿಂದ ನಾನು ಮೃತ ದೇಹಗಳ ಮೆರವಣಿಗೆಯನ್ನು ನೋಡಬೇಕಾಗಿಲ್ಲ. ಅವರು ವಿದ್ಯಾರ್ಥಿಗಳ ಮೃತ ದೇಹಗಳ ಮೇಲೆ ಅಧಿಕಾರಕ್ಕೆ ಬರಲು ಬಯಸಿದ್ದರು. ಆದರೆ, ನಾನು ಅದಕ್ಕೆ ಅವಕಾಶ ನೀಡಲಿಲ್ಲ, ನಾನು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಸೇಂಟ್ ಮಾರ್ಟಿನ್ ದ್ವೀಪದ ಸಾರ್ವಭೌಮತ್ವವನ್ನು ಬಿಟ್ಟುಕೊಟ್ಟಿದ್ದರೆ ಮತ್ತು ಬಂಗಾಳಕೊಲ್ಲಿಯ ಮೇಲೆ ಅಮೆರಿಕದ ಹಿಡಿತಕ್ಕೆ ಅವಕಾಶ ನೀಡಿದ್ದರೆ ನಾನು ಅಧಿಕಾರದಲ್ಲಿ ಉಳಿಯಬಹುದಿತ್ತು” ಏಂದಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ನಾನು ದೇಶದಲ್ಲಿಯೇ ಉಳಿದಿದ್ದರೆ, ಹೆಚ್ಚು ಜೀವಗಳನ್ನು ಕಳೆದುಕೊಳ್ಳಬಹುದಿತ್ತು, ಹೆಚ್ಚು ಸಂಪನ್ಮೂಲಗಳು ನಾಶವಾಗುತ್ತಿದ್ದವು. ನಾನು ನಿರ್ಗಮಿಸಲು ಅತ್ಯಂತ ಕಷ್ಟಕರವಾದ ನಿರ್ಧಾರವನ್ನು ಮಾಡಿದ್ದೇನೆ. ನೀವು ನನ್ನನ್ನು ಆರಿಸಿದ್ದರಿಂದ ನಾನು ನಿಮ್ಮ ನಾಯಕಿಯಾಗಿದ್ದೇನೆ, ನೀವೇ ನನ್ನ ಶಕ್ತಿ” ಎಂದು ಹಸೀನಾ ಹೇಳಿದ್ದಾರೆ.

ತನ್ನ ಪಕ್ಷದ ನಾಯಕರ ಹತ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಸೀನಾ, “ಹಲವು ನಾಯಕರನ್ನು ಕೊಲ್ಲಲಾಗಿದೆ, ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಅವರ ಮನೆಗಳನ್ನು ವಿಧ್ವಂಸಕತೆ, ಬೆಂಕಿಗೆ ಒಳಪಡಿಸಲಾಗಿದೆ ಎಂಬ ಸುದ್ದಿ ಬಂದಾಗ ನನ್ನ ಹೃದಯಕ್ಕೆ ಆಘಾತವಾಗಿದೆ ಸರ್ವಶಕ್ತ ಅಲ್ಲಾನ ಕೃಪೆಯೊಂದಿಗೆ ಶೀಘ್ರದಲ್ಲೇ ನಾನು ಹಿಂತಿರುಗುತ್ತೇನೆ.  ಅವಾಮಿ ಲೀಗ್ ಮತ್ತೆ ಮತ್ತೆ ಎದ್ದು ನಿಂತಿದೆ. ನನ್ನ ದೊಡ್ಡ ತಂದೆ ಶ್ರಮಿಸಿದ ಬಾಂಗ್ಲಾದೇಶದ ಭವಿಷ್ಯಕ್ಕಾಗಿ ನಾನು ಶಾಶ್ವತವಾಗಿ ಪ್ರಾರ್ಥಿಸುತ್ತೇನೆ. ನನ್ನ ತಂದೆ ಮತ್ತು ಕುಟುಂಬವು ತಮ್ಮ ಪ್ರಾಣವನ್ನು ನೀಡಿದ ದೇಶ” ಎಂದಿದ್ದಾರೆ.

“ವಿದ್ಯಾರ್ಥಿಗಳನ್ನು ಎಂದಿಗೂ ರಜಾಕಾರ್ ಎಂದು ಕರೆಯಲಿಲ್ಲ, ಹೇಳಿಕೆಯನ್ನು ತಿರುಚಲಾಗಿದೆ” ಎಂದು ಹಸೀನಾ ಸ್ಪಷ್ಟನೆ ನೀಡಿದ್ದಾರೆ.

ಕೋಟಾ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಅವರನ್ನು ಪ್ರಚೋದಿಸಲು ತಮ್ಮ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ಹೇಳಿದರು.

“ನಾನು ಬಾಂಗ್ಲಾದೇಶದ ಯುವ ವಿದ್ಯಾರ್ಥಿಗಳಿಗೆ ಪುನರಾವರ್ತಿಸಲು ಬಯಸುತ್ತೇನೆ. ನಾನು ನಿಮ್ಮನ್ನು ರಜಾಕರೆಂದು ಎಂದೂ ಕರೆದಿಲ್ಲ. ಬದಲಿಗೆ ನಿಮ್ಮನ್ನು ಪ್ರಚೋದಿಸಲು ನನ್ನ ಮಾತುಗಳನ್ನು ತಿರುಚಲಾಗಿದೆ. ಆ ದಿನದ ಸಂಪೂರ್ಣ ವೀಡಿಯೋವನ್ನು ವೀಕ್ಷಿಸಲು ವಿನಂತಿಸುತ್ತೇನೆ. ಪಿತೂರಿಗಾರರು ಮುಗ್ಧತೆಯ ಲಾಭವನ್ನು ಪಡೆದುಕೊಂಡಿದ್ದಾರೆ ಮತ್ತು ರಾಷ್ಟ್ರವನ್ನು ಅಸ್ಥಿರಗೊಳಿಸಲು ನಿಮ್ಮನ್ನು ಬಳಸಿಕೊಂಡಿದ್ದಾರೆ” ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ; ವಯನಾಡ್‌ ಭೂಕುಸಿತ | ನಾಪತ್ತೆಯಾದವರಿಗಾಗಿ ಹುಡುಕಾಟ ಪುನರಾರಂಭ; ಬದುಕುಳಿದವರಿಂದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...