Homeಮುಖಪುಟಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

- Advertisement -
- Advertisement -

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಶುಕ್ರವಾರ (ಡಿ.20) ರಂದು ನೀಡಿದ ತೀರ್ಪಿನಲ್ಲಿ, ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಫಿಲ್ಲಿಸ್ ಹ್ಯಾಮಿಲ್ಟನ್ ಅವರು, ಎನ್‌ಎಸ್‌ಒ ಗ್ರೂಪ್ ವಂಚನೆ ಹಾಗೂ ದುರ್ಬಳಕೆ ತಡೆ ಕಾಯ್ದೆ ಮತ್ತು ಕ್ಯಾಲಿಫೋರ್ನಿಯಾ ಕಂಪ್ಯೂಟರ್ ಡೇಟಾ ಪ್ರವೇಶ ಮತ್ತು ವಂಚನೆ ತಡೆ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಹೇಳಿದ್ದಾರೆ. ಎನ್‌ಎಸ್‌ಒ ವಾಟ್ಸಾಪ್‌ನ ಸೇವಾ ನಿಯಮಗಳನ್ನೂ ಉಲ್ಲಂಘಿಸಿದೆ ಎಂದು ನ್ಯಾಯಾಧೀಶ ಹ್ಯಾಮಿಲ್ಟನ್ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ, ನ್ಯಾಯಾಧೀಶ ಹ್ಯಾಮಿಲ್ಟನ್ ಅವರು ಇಸ್ರೇಲಿ ಸಂಸ್ಥೆಗೆ ಪೆಗಾಸಸ್ ಮತ್ತು ಅದರ ಇತರ ಸ್ಪೈವೇರ್ ಉತ್ಪನ್ನಗಳ ಕೋಡ್ ಅನ್ನು ಕಾನೂನು ಪ್ರಕ್ರಿಯೆಯ ಭಾಗವಾಗಿ ವಾಟ್ಸಾಪ್‌ಗೆ ಹಸ್ತಾಂತರಿಸುವಂತೆ ಆದೇಶಿಸಿದ್ದರು.

ಇಸ್ರೇಲಿ ಸಂಸ್ಥೆಯು ಅನಧಿಕೃತ ಕಣ್ಗಾವಲಿಗೆ ಅವಕಾಶ ನೀಡುವ ಗೂಢಚಾರ ಸಾಫ್ಟ್ವೇರ್ ಅನ್ನು ಸ್ಥಾಪಿಸಲು ವಾಟ್ಸಾಪ್‌ನ ದೋಷವನ್ನು ಬಳಸಿಕೊಂಡಿದೆ ಎಂದು ಆರೋಪಿಸಿ ಮೆಟಾ ಮೊಕದ್ದಮೆ ಹೂಡಿತ್ತು.

ತನ್ನ ಮೇಲಿನ ಆರೋಪಗಳ ಕುರಿತು ಎನ್‌ಎಸ್‌ಒ ಗ್ರೂಪ್ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯಿಟರ್ಸ್ ಸಂಸ್ಥೆ ವರದಿ ಮಾಡಿದೆ. ನ್ಯಾಯಾಲಯದ ತೀರ್ಪಿನ ಕುರಿತು ವಾಟ್ಸಾಪ್ ಮುಖ್ಯಸ್ಥ ಕ್ಯಾಥ್ಕಾರ್ಟ್ ಮಾತನಾಡಿದ್ದು, “ಈ ತೀರ್ಪು ಗೌಪ್ಯತೆಯ ಗೆಲುವು” ಎಂದು ಹೇಳಿದ್ದಾರೆ.

“ಸ್ಪೈವೇರ್ ಕಂಪನಿಗಳು ವಿನಾಯಿತಿ ಪಡೆಯಲು ಅಥವಾ ಅವರ ಕಾನೂನುಬಾಹಿರ ಕ್ರಮಗಳಿಗೆ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಕ್ರಮ ಬೇಹುಗಾರಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಕಣ್ಗಾವಲು ಕಂಪನಿಗಳು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಕ್ಯಾಥ್ಕಾರ್ಟ್ ತಿಳಿಸಿದ್ದಾರೆ.

ಪೆಗಾಸಸ್ ಎಂಬ ಸ್ಪೈವೇರ್ ಅನ್ನು ಅಭಿವೃದ್ಧಿ ಪಡಿಸಿರುವ ಎನ್ಎಸ್ಒ ಅದನ್ನು ಭಾರತ ಸರ್ಕಾರ ಸೇರಿದಂತೆ ವಿಶ್ವದ ವಿವಿಧ ಸರ್ಕಾರಗಳಿಗೆ ಮಾರಾಟ ಮಾಡಿದೆ ಎಂಬ ಆರೋಪ ಸಂಸ್ಥೆಯ ಮೇಲಿದೆ.
ಪೆಗಾಸಸ್ ವೈರಸ್ ಅನ್ನು ಭಾರತದ ರಾಜಕಾರಣಿಗಳು ಮತ್ತು ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಲು ಬಳಸಲಾಗಿದೆ ಎಂಬ ಆರೋಪ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು.

ಇದನ್ನೂ ಓದಿ : ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...