Homeಮುಖಪುಟಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

- Advertisement -
- Advertisement -

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಶುಕ್ರವಾರ (ಡಿ.20) ರಂದು ನೀಡಿದ ತೀರ್ಪಿನಲ್ಲಿ, ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಫಿಲ್ಲಿಸ್ ಹ್ಯಾಮಿಲ್ಟನ್ ಅವರು, ಎನ್‌ಎಸ್‌ಒ ಗ್ರೂಪ್ ವಂಚನೆ ಹಾಗೂ ದುರ್ಬಳಕೆ ತಡೆ ಕಾಯ್ದೆ ಮತ್ತು ಕ್ಯಾಲಿಫೋರ್ನಿಯಾ ಕಂಪ್ಯೂಟರ್ ಡೇಟಾ ಪ್ರವೇಶ ಮತ್ತು ವಂಚನೆ ತಡೆ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಹೇಳಿದ್ದಾರೆ. ಎನ್‌ಎಸ್‌ಒ ವಾಟ್ಸಾಪ್‌ನ ಸೇವಾ ನಿಯಮಗಳನ್ನೂ ಉಲ್ಲಂಘಿಸಿದೆ ಎಂದು ನ್ಯಾಯಾಧೀಶ ಹ್ಯಾಮಿಲ್ಟನ್ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ, ನ್ಯಾಯಾಧೀಶ ಹ್ಯಾಮಿಲ್ಟನ್ ಅವರು ಇಸ್ರೇಲಿ ಸಂಸ್ಥೆಗೆ ಪೆಗಾಸಸ್ ಮತ್ತು ಅದರ ಇತರ ಸ್ಪೈವೇರ್ ಉತ್ಪನ್ನಗಳ ಕೋಡ್ ಅನ್ನು ಕಾನೂನು ಪ್ರಕ್ರಿಯೆಯ ಭಾಗವಾಗಿ ವಾಟ್ಸಾಪ್‌ಗೆ ಹಸ್ತಾಂತರಿಸುವಂತೆ ಆದೇಶಿಸಿದ್ದರು.

ಇಸ್ರೇಲಿ ಸಂಸ್ಥೆಯು ಅನಧಿಕೃತ ಕಣ್ಗಾವಲಿಗೆ ಅವಕಾಶ ನೀಡುವ ಗೂಢಚಾರ ಸಾಫ್ಟ್ವೇರ್ ಅನ್ನು ಸ್ಥಾಪಿಸಲು ವಾಟ್ಸಾಪ್‌ನ ದೋಷವನ್ನು ಬಳಸಿಕೊಂಡಿದೆ ಎಂದು ಆರೋಪಿಸಿ ಮೆಟಾ ಮೊಕದ್ದಮೆ ಹೂಡಿತ್ತು.

ತನ್ನ ಮೇಲಿನ ಆರೋಪಗಳ ಕುರಿತು ಎನ್‌ಎಸ್‌ಒ ಗ್ರೂಪ್ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯಿಟರ್ಸ್ ಸಂಸ್ಥೆ ವರದಿ ಮಾಡಿದೆ. ನ್ಯಾಯಾಲಯದ ತೀರ್ಪಿನ ಕುರಿತು ವಾಟ್ಸಾಪ್ ಮುಖ್ಯಸ್ಥ ಕ್ಯಾಥ್ಕಾರ್ಟ್ ಮಾತನಾಡಿದ್ದು, “ಈ ತೀರ್ಪು ಗೌಪ್ಯತೆಯ ಗೆಲುವು” ಎಂದು ಹೇಳಿದ್ದಾರೆ.

“ಸ್ಪೈವೇರ್ ಕಂಪನಿಗಳು ವಿನಾಯಿತಿ ಪಡೆಯಲು ಅಥವಾ ಅವರ ಕಾನೂನುಬಾಹಿರ ಕ್ರಮಗಳಿಗೆ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಕ್ರಮ ಬೇಹುಗಾರಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಕಣ್ಗಾವಲು ಕಂಪನಿಗಳು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಕ್ಯಾಥ್ಕಾರ್ಟ್ ತಿಳಿಸಿದ್ದಾರೆ.

ಪೆಗಾಸಸ್ ಎಂಬ ಸ್ಪೈವೇರ್ ಅನ್ನು ಅಭಿವೃದ್ಧಿ ಪಡಿಸಿರುವ ಎನ್ಎಸ್ಒ ಅದನ್ನು ಭಾರತ ಸರ್ಕಾರ ಸೇರಿದಂತೆ ವಿಶ್ವದ ವಿವಿಧ ಸರ್ಕಾರಗಳಿಗೆ ಮಾರಾಟ ಮಾಡಿದೆ ಎಂಬ ಆರೋಪ ಸಂಸ್ಥೆಯ ಮೇಲಿದೆ.
ಪೆಗಾಸಸ್ ವೈರಸ್ ಅನ್ನು ಭಾರತದ ರಾಜಕಾರಣಿಗಳು ಮತ್ತು ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಲು ಬಳಸಲಾಗಿದೆ ಎಂಬ ಆರೋಪ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು.

ಇದನ್ನೂ ಓದಿ : ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...