Homeಮುಖಪುಟಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

- Advertisement -
- Advertisement -

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಶುಕ್ರವಾರ (ಡಿ.20) ರಂದು ನೀಡಿದ ತೀರ್ಪಿನಲ್ಲಿ, ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಫಿಲ್ಲಿಸ್ ಹ್ಯಾಮಿಲ್ಟನ್ ಅವರು, ಎನ್‌ಎಸ್‌ಒ ಗ್ರೂಪ್ ವಂಚನೆ ಹಾಗೂ ದುರ್ಬಳಕೆ ತಡೆ ಕಾಯ್ದೆ ಮತ್ತು ಕ್ಯಾಲಿಫೋರ್ನಿಯಾ ಕಂಪ್ಯೂಟರ್ ಡೇಟಾ ಪ್ರವೇಶ ಮತ್ತು ವಂಚನೆ ತಡೆ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಹೇಳಿದ್ದಾರೆ. ಎನ್‌ಎಸ್‌ಒ ವಾಟ್ಸಾಪ್‌ನ ಸೇವಾ ನಿಯಮಗಳನ್ನೂ ಉಲ್ಲಂಘಿಸಿದೆ ಎಂದು ನ್ಯಾಯಾಧೀಶ ಹ್ಯಾಮಿಲ್ಟನ್ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ, ನ್ಯಾಯಾಧೀಶ ಹ್ಯಾಮಿಲ್ಟನ್ ಅವರು ಇಸ್ರೇಲಿ ಸಂಸ್ಥೆಗೆ ಪೆಗಾಸಸ್ ಮತ್ತು ಅದರ ಇತರ ಸ್ಪೈವೇರ್ ಉತ್ಪನ್ನಗಳ ಕೋಡ್ ಅನ್ನು ಕಾನೂನು ಪ್ರಕ್ರಿಯೆಯ ಭಾಗವಾಗಿ ವಾಟ್ಸಾಪ್‌ಗೆ ಹಸ್ತಾಂತರಿಸುವಂತೆ ಆದೇಶಿಸಿದ್ದರು.

ಇಸ್ರೇಲಿ ಸಂಸ್ಥೆಯು ಅನಧಿಕೃತ ಕಣ್ಗಾವಲಿಗೆ ಅವಕಾಶ ನೀಡುವ ಗೂಢಚಾರ ಸಾಫ್ಟ್ವೇರ್ ಅನ್ನು ಸ್ಥಾಪಿಸಲು ವಾಟ್ಸಾಪ್‌ನ ದೋಷವನ್ನು ಬಳಸಿಕೊಂಡಿದೆ ಎಂದು ಆರೋಪಿಸಿ ಮೆಟಾ ಮೊಕದ್ದಮೆ ಹೂಡಿತ್ತು.

ತನ್ನ ಮೇಲಿನ ಆರೋಪಗಳ ಕುರಿತು ಎನ್‌ಎಸ್‌ಒ ಗ್ರೂಪ್ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯಿಟರ್ಸ್ ಸಂಸ್ಥೆ ವರದಿ ಮಾಡಿದೆ. ನ್ಯಾಯಾಲಯದ ತೀರ್ಪಿನ ಕುರಿತು ವಾಟ್ಸಾಪ್ ಮುಖ್ಯಸ್ಥ ಕ್ಯಾಥ್ಕಾರ್ಟ್ ಮಾತನಾಡಿದ್ದು, “ಈ ತೀರ್ಪು ಗೌಪ್ಯತೆಯ ಗೆಲುವು” ಎಂದು ಹೇಳಿದ್ದಾರೆ.

“ಸ್ಪೈವೇರ್ ಕಂಪನಿಗಳು ವಿನಾಯಿತಿ ಪಡೆಯಲು ಅಥವಾ ಅವರ ಕಾನೂನುಬಾಹಿರ ಕ್ರಮಗಳಿಗೆ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಕ್ರಮ ಬೇಹುಗಾರಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಕಣ್ಗಾವಲು ಕಂಪನಿಗಳು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಕ್ಯಾಥ್ಕಾರ್ಟ್ ತಿಳಿಸಿದ್ದಾರೆ.

ಪೆಗಾಸಸ್ ಎಂಬ ಸ್ಪೈವೇರ್ ಅನ್ನು ಅಭಿವೃದ್ಧಿ ಪಡಿಸಿರುವ ಎನ್ಎಸ್ಒ ಅದನ್ನು ಭಾರತ ಸರ್ಕಾರ ಸೇರಿದಂತೆ ವಿಶ್ವದ ವಿವಿಧ ಸರ್ಕಾರಗಳಿಗೆ ಮಾರಾಟ ಮಾಡಿದೆ ಎಂಬ ಆರೋಪ ಸಂಸ್ಥೆಯ ಮೇಲಿದೆ.
ಪೆಗಾಸಸ್ ವೈರಸ್ ಅನ್ನು ಭಾರತದ ರಾಜಕಾರಣಿಗಳು ಮತ್ತು ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಲು ಬಳಸಲಾಗಿದೆ ಎಂಬ ಆರೋಪ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು.

ಇದನ್ನೂ ಓದಿ : ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...