Homeಮುಖಪುಟಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

- Advertisement -
- Advertisement -

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಶುಕ್ರವಾರ (ಡಿ.20) ರಂದು ನೀಡಿದ ತೀರ್ಪಿನಲ್ಲಿ, ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಫಿಲ್ಲಿಸ್ ಹ್ಯಾಮಿಲ್ಟನ್ ಅವರು, ಎನ್‌ಎಸ್‌ಒ ಗ್ರೂಪ್ ವಂಚನೆ ಹಾಗೂ ದುರ್ಬಳಕೆ ತಡೆ ಕಾಯ್ದೆ ಮತ್ತು ಕ್ಯಾಲಿಫೋರ್ನಿಯಾ ಕಂಪ್ಯೂಟರ್ ಡೇಟಾ ಪ್ರವೇಶ ಮತ್ತು ವಂಚನೆ ತಡೆ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಹೇಳಿದ್ದಾರೆ. ಎನ್‌ಎಸ್‌ಒ ವಾಟ್ಸಾಪ್‌ನ ಸೇವಾ ನಿಯಮಗಳನ್ನೂ ಉಲ್ಲಂಘಿಸಿದೆ ಎಂದು ನ್ಯಾಯಾಧೀಶ ಹ್ಯಾಮಿಲ್ಟನ್ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ, ನ್ಯಾಯಾಧೀಶ ಹ್ಯಾಮಿಲ್ಟನ್ ಅವರು ಇಸ್ರೇಲಿ ಸಂಸ್ಥೆಗೆ ಪೆಗಾಸಸ್ ಮತ್ತು ಅದರ ಇತರ ಸ್ಪೈವೇರ್ ಉತ್ಪನ್ನಗಳ ಕೋಡ್ ಅನ್ನು ಕಾನೂನು ಪ್ರಕ್ರಿಯೆಯ ಭಾಗವಾಗಿ ವಾಟ್ಸಾಪ್‌ಗೆ ಹಸ್ತಾಂತರಿಸುವಂತೆ ಆದೇಶಿಸಿದ್ದರು.

ಇಸ್ರೇಲಿ ಸಂಸ್ಥೆಯು ಅನಧಿಕೃತ ಕಣ್ಗಾವಲಿಗೆ ಅವಕಾಶ ನೀಡುವ ಗೂಢಚಾರ ಸಾಫ್ಟ್ವೇರ್ ಅನ್ನು ಸ್ಥಾಪಿಸಲು ವಾಟ್ಸಾಪ್‌ನ ದೋಷವನ್ನು ಬಳಸಿಕೊಂಡಿದೆ ಎಂದು ಆರೋಪಿಸಿ ಮೆಟಾ ಮೊಕದ್ದಮೆ ಹೂಡಿತ್ತು.

ತನ್ನ ಮೇಲಿನ ಆರೋಪಗಳ ಕುರಿತು ಎನ್‌ಎಸ್‌ಒ ಗ್ರೂಪ್ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯಿಟರ್ಸ್ ಸಂಸ್ಥೆ ವರದಿ ಮಾಡಿದೆ. ನ್ಯಾಯಾಲಯದ ತೀರ್ಪಿನ ಕುರಿತು ವಾಟ್ಸಾಪ್ ಮುಖ್ಯಸ್ಥ ಕ್ಯಾಥ್ಕಾರ್ಟ್ ಮಾತನಾಡಿದ್ದು, “ಈ ತೀರ್ಪು ಗೌಪ್ಯತೆಯ ಗೆಲುವು” ಎಂದು ಹೇಳಿದ್ದಾರೆ.

“ಸ್ಪೈವೇರ್ ಕಂಪನಿಗಳು ವಿನಾಯಿತಿ ಪಡೆಯಲು ಅಥವಾ ಅವರ ಕಾನೂನುಬಾಹಿರ ಕ್ರಮಗಳಿಗೆ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಕ್ರಮ ಬೇಹುಗಾರಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಕಣ್ಗಾವಲು ಕಂಪನಿಗಳು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಕ್ಯಾಥ್ಕಾರ್ಟ್ ತಿಳಿಸಿದ್ದಾರೆ.

ಪೆಗಾಸಸ್ ಎಂಬ ಸ್ಪೈವೇರ್ ಅನ್ನು ಅಭಿವೃದ್ಧಿ ಪಡಿಸಿರುವ ಎನ್ಎಸ್ಒ ಅದನ್ನು ಭಾರತ ಸರ್ಕಾರ ಸೇರಿದಂತೆ ವಿಶ್ವದ ವಿವಿಧ ಸರ್ಕಾರಗಳಿಗೆ ಮಾರಾಟ ಮಾಡಿದೆ ಎಂಬ ಆರೋಪ ಸಂಸ್ಥೆಯ ಮೇಲಿದೆ.
ಪೆಗಾಸಸ್ ವೈರಸ್ ಅನ್ನು ಭಾರತದ ರಾಜಕಾರಣಿಗಳು ಮತ್ತು ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಲು ಬಳಸಲಾಗಿದೆ ಎಂಬ ಆರೋಪ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು.

ಇದನ್ನೂ ಓದಿ : ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...