Homeಅಂತರಾಷ್ಟ್ರೀಯಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

- Advertisement -
- Advertisement -

ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯ ಪ್ರಾಬಲ್ಯ ಹೆಚ್ಚಾಗುತ್ತಿದ್ದು, ಕೊರೊನಾ ಪ್ರಕರಣಗಳು ವೇಗವಾಗಿ ಏರುತ್ತಿವೆ ಎಂದು ಡೇಟಾ ಖಚಿತ ಪಡಿಸಿದೆ. ವ್ಯಾಕ್ಸಿನೇಷನ್ ಪ್ರಕ್ರಿಯೆಗಳು ಕೂಡ ಅಮೆರಿಕಾದಲ್ಲಿ ಸ್ಥಗಿತಗೊಂಡಿವೆ ಎಂದು ವರದಿ ತಿಳಿಸಿದೆ.

ಕಳೆದ ಏಳು ದಿನಗಳ ಸರಾಸರಿ ತೆಗೆದುಕೊಂಡರೇ, ಹೊಸ ಪ್ರಕರಣಗಳ ಏರಿಕೆ ಜುಲೈ 6 ರ ವೇಳೆಗೆ 13,859 ಆಗಿದ್ದು, ಎರಡು ವಾರಗಳ ಹಿಂದಿನ ಪ್ರಕರಣಗಳಿಗೆ ಹೋಲಿಸಿದರೆ 21 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು (CDC) ತಿಳಿಸಿವೆ.

ಈ ಪ್ರಕರಣಗಳಲ್ಲಿ ಜುಲೈ 4 ರ ವಾರಾಂತ್ಯದ ರಜಾದಿನಗಳನ್ನು ಸೇರಿಸಿಲ್ಲ. ಅದನ್ನು ಸೇರಿಸಿದರೇ, ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು. ಡೆಲ್ಟಾ ರೂಪಾಂತರಿ ಪ್ರಕರಣಗಳು ಹೆಚ್ಚಾಗಿದ್ದು, ಇದರಿಂದಾಗಿಯೇ ಸುಮಾರು 52 ಪ್ರತಿಶತದಷ್ಟು ಪ್ರಕರಣಗಳು ಹೆಚ್ಚಾಗಿವೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ತಿಳಿಸಿವೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ವಿಶ್ವದ ಎಲ್ಲಾ ದೇಶಗಳಿಗಿಂತ ಹೆಚ್ಚಿನ ಲಸಿಕೆಗಳ ಲಭ್ಯತೆ ಇದ್ದರೂ ಕೂಡ ಅಮೆರಿಕ, ಲಸಿಕಾ ಅಭಿಯಾನವನ್ನು  ಏಪ್ರಿಲ್‌ನಿಂದಲೇ ಸ್ಥಗಿತಗೊಳಿಸಿತ್ತು. ಶೇಕಡಾ 70 ರಷ್ಟು ವಯಸ್ಕರಿಗೆ ಭಾಗಶಃ ಲಸಿಕೆ ಹಾಕುವ ಗುರಿಯನ್ನು ಕೂಡ ಅಮೆರಿಕಾದಲ್ಲಿ ತಲುಪಲಾಗಿಲ್ಲ. ಇಲ್ಲಿಯವರೆಗೆ ಶೇಕಡಾ 67 ರಷ್ಟು ವಯಸ್ಕರಿಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ಮಿಸೌರಿಯ (Missouri) ಸ್ಪ್ರಿಂಗ್‌ಫೀಲ್ಡ್‌ ಆಸ್ಪತ್ರೆಯಲ್ಲಿ ಈ ವಾರಾಂತ್ಯದಲ್ಲಿ ಆಸ್ಪತ್ರೆಗೆ ದಾಖಲಾದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

“ಅಮೆರಿಕಾದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಎರಡು ವಿಭಿನ್ನ ಸ್ವರೂಪಗಳಿವೆ. ಇದರಲ್ಲಿ ಒಂದು ಹೆಚ್ಚು ಲಸಿಕೆ ಪಡೆಯದ ಜನರಿರುವ ಸ್ಥಳಗಳಲ್ಲಿ ವೈರಸ್ ಹೆಚ್ಚಾಗಿದೆ. ಇನ್ನೊಂದು, ದೇಶದ ಇತರ ಭಾಗಗಳಲ್ಲಿ ಉಸಿರಾಟದ ಸಮಸ್ಯೆಯಾಗಿ ಮಾರ್ಪಟ್ಟಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಕೇಂದ್ರದ ಅಮೆಶ್ ಅಡಾಲ್ಜಾ ತಿಳಿಸಿದ್ದಾರೆ.

ದೇಶದಲ್ಲಿಯೂ ಡೆಲ್ಟಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಬಹುದು: ಟಾಸ್ಕ್ ಫೋರ್ಸ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...