Homeಅಂತರಾಷ್ಟ್ರೀಯಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

- Advertisement -
- Advertisement -

ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯ ಪ್ರಾಬಲ್ಯ ಹೆಚ್ಚಾಗುತ್ತಿದ್ದು, ಕೊರೊನಾ ಪ್ರಕರಣಗಳು ವೇಗವಾಗಿ ಏರುತ್ತಿವೆ ಎಂದು ಡೇಟಾ ಖಚಿತ ಪಡಿಸಿದೆ. ವ್ಯಾಕ್ಸಿನೇಷನ್ ಪ್ರಕ್ರಿಯೆಗಳು ಕೂಡ ಅಮೆರಿಕಾದಲ್ಲಿ ಸ್ಥಗಿತಗೊಂಡಿವೆ ಎಂದು ವರದಿ ತಿಳಿಸಿದೆ.

ಕಳೆದ ಏಳು ದಿನಗಳ ಸರಾಸರಿ ತೆಗೆದುಕೊಂಡರೇ, ಹೊಸ ಪ್ರಕರಣಗಳ ಏರಿಕೆ ಜುಲೈ 6 ರ ವೇಳೆಗೆ 13,859 ಆಗಿದ್ದು, ಎರಡು ವಾರಗಳ ಹಿಂದಿನ ಪ್ರಕರಣಗಳಿಗೆ ಹೋಲಿಸಿದರೆ 21 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು (CDC) ತಿಳಿಸಿವೆ.

ಈ ಪ್ರಕರಣಗಳಲ್ಲಿ ಜುಲೈ 4 ರ ವಾರಾಂತ್ಯದ ರಜಾದಿನಗಳನ್ನು ಸೇರಿಸಿಲ್ಲ. ಅದನ್ನು ಸೇರಿಸಿದರೇ, ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು. ಡೆಲ್ಟಾ ರೂಪಾಂತರಿ ಪ್ರಕರಣಗಳು ಹೆಚ್ಚಾಗಿದ್ದು, ಇದರಿಂದಾಗಿಯೇ ಸುಮಾರು 52 ಪ್ರತಿಶತದಷ್ಟು ಪ್ರಕರಣಗಳು ಹೆಚ್ಚಾಗಿವೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ತಿಳಿಸಿವೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ವಿಶ್ವದ ಎಲ್ಲಾ ದೇಶಗಳಿಗಿಂತ ಹೆಚ್ಚಿನ ಲಸಿಕೆಗಳ ಲಭ್ಯತೆ ಇದ್ದರೂ ಕೂಡ ಅಮೆರಿಕ, ಲಸಿಕಾ ಅಭಿಯಾನವನ್ನು  ಏಪ್ರಿಲ್‌ನಿಂದಲೇ ಸ್ಥಗಿತಗೊಳಿಸಿತ್ತು. ಶೇಕಡಾ 70 ರಷ್ಟು ವಯಸ್ಕರಿಗೆ ಭಾಗಶಃ ಲಸಿಕೆ ಹಾಕುವ ಗುರಿಯನ್ನು ಕೂಡ ಅಮೆರಿಕಾದಲ್ಲಿ ತಲುಪಲಾಗಿಲ್ಲ. ಇಲ್ಲಿಯವರೆಗೆ ಶೇಕಡಾ 67 ರಷ್ಟು ವಯಸ್ಕರಿಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ಮಿಸೌರಿಯ (Missouri) ಸ್ಪ್ರಿಂಗ್‌ಫೀಲ್ಡ್‌ ಆಸ್ಪತ್ರೆಯಲ್ಲಿ ಈ ವಾರಾಂತ್ಯದಲ್ಲಿ ಆಸ್ಪತ್ರೆಗೆ ದಾಖಲಾದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

“ಅಮೆರಿಕಾದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಎರಡು ವಿಭಿನ್ನ ಸ್ವರೂಪಗಳಿವೆ. ಇದರಲ್ಲಿ ಒಂದು ಹೆಚ್ಚು ಲಸಿಕೆ ಪಡೆಯದ ಜನರಿರುವ ಸ್ಥಳಗಳಲ್ಲಿ ವೈರಸ್ ಹೆಚ್ಚಾಗಿದೆ. ಇನ್ನೊಂದು, ದೇಶದ ಇತರ ಭಾಗಗಳಲ್ಲಿ ಉಸಿರಾಟದ ಸಮಸ್ಯೆಯಾಗಿ ಮಾರ್ಪಟ್ಟಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಕೇಂದ್ರದ ಅಮೆಶ್ ಅಡಾಲ್ಜಾ ತಿಳಿಸಿದ್ದಾರೆ.

ದೇಶದಲ್ಲಿಯೂ ಡೆಲ್ಟಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಬಹುದು: ಟಾಸ್ಕ್ ಫೋರ್ಸ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...