Homeಅಂತರಾಷ್ಟ್ರೀಯಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

- Advertisement -
- Advertisement -

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿದೆ. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿದೆ.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿದೆ. ತ್ಸಾರ್ ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿಗೆ ಸೇರಿದೆ. ಇದು 1962ರ ಯುದ್ಧಕ್ಕೂ ಮೊದಲಿನಿಂದಲೂ ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ.

ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿದೆ.

ಗಡಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಮತ್ತು ಭಾರತ ಸರ್ಕಾರದ ನಡುವೆ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ನಡೆಯುತ್ತಿರುವುದನ್ನು ಲೆಕ್ಕಿಸದೆ ಚೀನಾವು ಅಲ್ಲಿ ತನ್ನ ಹಕ್ಕನ್ನು ಪ್ರತಿಪಾದಿಸುತ್ತಿದೆ ಮತ್ತು ಯುದ್ಧತಂತ್ರದ ಕ್ರಮಗಳಿಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ವಾಸಸ್ಥಾನಗಳನ್ನು ನಿರ್ಮಿಸುವ ಚೀನಾದ ನೀತಿಯು ಟಿಬೆಟ್ ಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಲು ಬಹು-ಶತಕೋಟಿ ಡಾಲರ್ ಯೋಜನೆಯ ಒಂದು ಭಾಗವಾಗಿದೆ. ಇದು ಗಡಿ ಪಟ್ಟಣಗಳಿಗೆ ಬೃಹತ್ ರಸ್ತೆ ಮತ್ತು ರೈಲು ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಈ ಪ್ರದೇಶದಲ್ಲಿ 600 ಕ್ಕೂ ಹೆಚ್ಚು ಸಂಪೂರ್ಣ ಅಭಿವೃದ್ಧಿ ಹೊಂದಿದ ಹಳ್ಳಿಗಳನ್ನು ನಿರ್ಮಿಸುವ ಯೋಜನೆಯನ್ನು ಒಳಗೊಂಡಿದೆ ಎನ್ನಲಾಗಿದೆ.

ಇನ್ನೊಂದೆಡೆ ಲಡಾಖ್ ಲೈನ್ ಆಫ್ ಕಂಟ್ರೋಲ್‌ನಲ್ಲಿ ಚೀನಾ ಮತ್ತು ಭಾರತ ಸೈನಿಕರ ನಡುವಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದರು. ಚೀನಾದ ಕಡೆಯಿಂದ ಎಷ್ಟು ಜನರು ಮರಣ ಹೊಂದಿದರು ಎಂಬುದನ್ನು ಚೀನಾ ದೇಶವು ಬಹಿರಂಗಪಡಿಸಿಲ್ಲ.

ಗಾಲ್ವಾನ್ ಘರ್ಷಣೆಯನ್ನು ಉಲ್ಲೇಖಿಸಿರುವ ಯುಎಸ್ ರಕ್ಷಣಾ ವರದಿಯ “ಫೆಬ್ರವರಿ 2021 ರಲ್ಲಿ, ಸೆಂಟ್ರಲ್ ಮಿಲಿಟರಿ ಕಮಿಷನ್ (CMC) ನಾಲ್ಕು ಚೀನಿ ಸೈನಿಕರಿಗೆ ಮರಣೋತ್ತರ ಪ್ರಶಸ್ತಿಗಳನ್ನು ಘೋಷಿಸಿದೆ, ಆದರೂ ಚೀನಾವು ಸಾವುನೋವುಗಳ ಒಟ್ಟು ಸಂಖ್ಯೆಯನ್ನು ತಿಳಿಸಿಲ್ಲ ಎಂದಿದೆ.

“ಈ ಘರ್ಷಣೆಗೆ ಭಾರತೀಯ ಸೈನಿಕರ ಪ್ರಚೋದನೆಯೇ ಕಾರಣ ಎಂದು ಪ್ರತಿಪಾದಿಸಿರುವ ಚೀನಾವೂ ಲೈನ್ ಆಫ್ ಕಂಟ್ರೋಲ್‌ನಿಂದ ಭಾರತೀಯ ಸೇನೆ ಹಿಂದಿರುಗುವವರೆಗೂ ಮತ್ತು ಆ ಪ್ರದೇಶದಲ್ಲಿ ತನ್ನ ಮೂಲಭೂತ ಸೌಕರ್ಯಗಳ ಯೋಜನೆ ನಿಲ್ಲಿಸುವವರೆಗೂ ಯಾವುದೇ ಪಡೆಗಳನ್ನು ಹಿಂತೆಗೆದುಕೊಳ್ಳಲು ಬೀಜಿಂಗ್ ನಿರಾಕರಿಸಿದೆ” ಎಂದು ವರದಿ ಹೇಳಿದೆ.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಡಿಫೆನ್ಸ್ ವರದಿಯು “ಚೀನಾದ ಮಿಲಿಟರಿ ಸಾಮರ್ಥ್ಯ ಮತ್ತು ಅದರ ಜಾಗತಿಕ ಮಹತ್ವಾಕಾಂಕ್ಷೆಗಳಿಂದ ಸವಾಲನ್ನು ಎದುರಿಸುವ ಪ್ರಾಮುಖ್ಯತೆಯ ಸಭೆ ಅಗತ್ಯವಾಗಿದೆ” ಎಂದು ವಿವರಿಸಿದೆ.


ಇದನ್ನೂ ಓದಿ; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...