Homeಅಂತರಾಷ್ಟ್ರೀಯಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

- Advertisement -
- Advertisement -

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿದೆ. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿದೆ.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿದೆ. ತ್ಸಾರ್ ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿಗೆ ಸೇರಿದೆ. ಇದು 1962ರ ಯುದ್ಧಕ್ಕೂ ಮೊದಲಿನಿಂದಲೂ ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ.

ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿದೆ.

ಗಡಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಮತ್ತು ಭಾರತ ಸರ್ಕಾರದ ನಡುವೆ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ನಡೆಯುತ್ತಿರುವುದನ್ನು ಲೆಕ್ಕಿಸದೆ ಚೀನಾವು ಅಲ್ಲಿ ತನ್ನ ಹಕ್ಕನ್ನು ಪ್ರತಿಪಾದಿಸುತ್ತಿದೆ ಮತ್ತು ಯುದ್ಧತಂತ್ರದ ಕ್ರಮಗಳಿಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ವಾಸಸ್ಥಾನಗಳನ್ನು ನಿರ್ಮಿಸುವ ಚೀನಾದ ನೀತಿಯು ಟಿಬೆಟ್ ಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಲು ಬಹು-ಶತಕೋಟಿ ಡಾಲರ್ ಯೋಜನೆಯ ಒಂದು ಭಾಗವಾಗಿದೆ. ಇದು ಗಡಿ ಪಟ್ಟಣಗಳಿಗೆ ಬೃಹತ್ ರಸ್ತೆ ಮತ್ತು ರೈಲು ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಈ ಪ್ರದೇಶದಲ್ಲಿ 600 ಕ್ಕೂ ಹೆಚ್ಚು ಸಂಪೂರ್ಣ ಅಭಿವೃದ್ಧಿ ಹೊಂದಿದ ಹಳ್ಳಿಗಳನ್ನು ನಿರ್ಮಿಸುವ ಯೋಜನೆಯನ್ನು ಒಳಗೊಂಡಿದೆ ಎನ್ನಲಾಗಿದೆ.

ಇನ್ನೊಂದೆಡೆ ಲಡಾಖ್ ಲೈನ್ ಆಫ್ ಕಂಟ್ರೋಲ್‌ನಲ್ಲಿ ಚೀನಾ ಮತ್ತು ಭಾರತ ಸೈನಿಕರ ನಡುವಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದರು. ಚೀನಾದ ಕಡೆಯಿಂದ ಎಷ್ಟು ಜನರು ಮರಣ ಹೊಂದಿದರು ಎಂಬುದನ್ನು ಚೀನಾ ದೇಶವು ಬಹಿರಂಗಪಡಿಸಿಲ್ಲ.

ಗಾಲ್ವಾನ್ ಘರ್ಷಣೆಯನ್ನು ಉಲ್ಲೇಖಿಸಿರುವ ಯುಎಸ್ ರಕ್ಷಣಾ ವರದಿಯ “ಫೆಬ್ರವರಿ 2021 ರಲ್ಲಿ, ಸೆಂಟ್ರಲ್ ಮಿಲಿಟರಿ ಕಮಿಷನ್ (CMC) ನಾಲ್ಕು ಚೀನಿ ಸೈನಿಕರಿಗೆ ಮರಣೋತ್ತರ ಪ್ರಶಸ್ತಿಗಳನ್ನು ಘೋಷಿಸಿದೆ, ಆದರೂ ಚೀನಾವು ಸಾವುನೋವುಗಳ ಒಟ್ಟು ಸಂಖ್ಯೆಯನ್ನು ತಿಳಿಸಿಲ್ಲ ಎಂದಿದೆ.

“ಈ ಘರ್ಷಣೆಗೆ ಭಾರತೀಯ ಸೈನಿಕರ ಪ್ರಚೋದನೆಯೇ ಕಾರಣ ಎಂದು ಪ್ರತಿಪಾದಿಸಿರುವ ಚೀನಾವೂ ಲೈನ್ ಆಫ್ ಕಂಟ್ರೋಲ್‌ನಿಂದ ಭಾರತೀಯ ಸೇನೆ ಹಿಂದಿರುಗುವವರೆಗೂ ಮತ್ತು ಆ ಪ್ರದೇಶದಲ್ಲಿ ತನ್ನ ಮೂಲಭೂತ ಸೌಕರ್ಯಗಳ ಯೋಜನೆ ನಿಲ್ಲಿಸುವವರೆಗೂ ಯಾವುದೇ ಪಡೆಗಳನ್ನು ಹಿಂತೆಗೆದುಕೊಳ್ಳಲು ಬೀಜಿಂಗ್ ನಿರಾಕರಿಸಿದೆ” ಎಂದು ವರದಿ ಹೇಳಿದೆ.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಡಿಫೆನ್ಸ್ ವರದಿಯು “ಚೀನಾದ ಮಿಲಿಟರಿ ಸಾಮರ್ಥ್ಯ ಮತ್ತು ಅದರ ಜಾಗತಿಕ ಮಹತ್ವಾಕಾಂಕ್ಷೆಗಳಿಂದ ಸವಾಲನ್ನು ಎದುರಿಸುವ ಪ್ರಾಮುಖ್ಯತೆಯ ಸಭೆ ಅಗತ್ಯವಾಗಿದೆ” ಎಂದು ವಿವರಿಸಿದೆ.


ಇದನ್ನೂ ಓದಿ; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...