Homeಅಂತರಾಷ್ಟ್ರೀಯಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

- Advertisement -
- Advertisement -

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿದೆ. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿದೆ.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿದೆ. ತ್ಸಾರ್ ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿಗೆ ಸೇರಿದೆ. ಇದು 1962ರ ಯುದ್ಧಕ್ಕೂ ಮೊದಲಿನಿಂದಲೂ ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ.

ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿದೆ.

ಗಡಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಮತ್ತು ಭಾರತ ಸರ್ಕಾರದ ನಡುವೆ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ನಡೆಯುತ್ತಿರುವುದನ್ನು ಲೆಕ್ಕಿಸದೆ ಚೀನಾವು ಅಲ್ಲಿ ತನ್ನ ಹಕ್ಕನ್ನು ಪ್ರತಿಪಾದಿಸುತ್ತಿದೆ ಮತ್ತು ಯುದ್ಧತಂತ್ರದ ಕ್ರಮಗಳಿಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ವಾಸಸ್ಥಾನಗಳನ್ನು ನಿರ್ಮಿಸುವ ಚೀನಾದ ನೀತಿಯು ಟಿಬೆಟ್ ಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಲು ಬಹು-ಶತಕೋಟಿ ಡಾಲರ್ ಯೋಜನೆಯ ಒಂದು ಭಾಗವಾಗಿದೆ. ಇದು ಗಡಿ ಪಟ್ಟಣಗಳಿಗೆ ಬೃಹತ್ ರಸ್ತೆ ಮತ್ತು ರೈಲು ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಈ ಪ್ರದೇಶದಲ್ಲಿ 600 ಕ್ಕೂ ಹೆಚ್ಚು ಸಂಪೂರ್ಣ ಅಭಿವೃದ್ಧಿ ಹೊಂದಿದ ಹಳ್ಳಿಗಳನ್ನು ನಿರ್ಮಿಸುವ ಯೋಜನೆಯನ್ನು ಒಳಗೊಂಡಿದೆ ಎನ್ನಲಾಗಿದೆ.

ಇನ್ನೊಂದೆಡೆ ಲಡಾಖ್ ಲೈನ್ ಆಫ್ ಕಂಟ್ರೋಲ್‌ನಲ್ಲಿ ಚೀನಾ ಮತ್ತು ಭಾರತ ಸೈನಿಕರ ನಡುವಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದರು. ಚೀನಾದ ಕಡೆಯಿಂದ ಎಷ್ಟು ಜನರು ಮರಣ ಹೊಂದಿದರು ಎಂಬುದನ್ನು ಚೀನಾ ದೇಶವು ಬಹಿರಂಗಪಡಿಸಿಲ್ಲ.

ಗಾಲ್ವಾನ್ ಘರ್ಷಣೆಯನ್ನು ಉಲ್ಲೇಖಿಸಿರುವ ಯುಎಸ್ ರಕ್ಷಣಾ ವರದಿಯ “ಫೆಬ್ರವರಿ 2021 ರಲ್ಲಿ, ಸೆಂಟ್ರಲ್ ಮಿಲಿಟರಿ ಕಮಿಷನ್ (CMC) ನಾಲ್ಕು ಚೀನಿ ಸೈನಿಕರಿಗೆ ಮರಣೋತ್ತರ ಪ್ರಶಸ್ತಿಗಳನ್ನು ಘೋಷಿಸಿದೆ, ಆದರೂ ಚೀನಾವು ಸಾವುನೋವುಗಳ ಒಟ್ಟು ಸಂಖ್ಯೆಯನ್ನು ತಿಳಿಸಿಲ್ಲ ಎಂದಿದೆ.

“ಈ ಘರ್ಷಣೆಗೆ ಭಾರತೀಯ ಸೈನಿಕರ ಪ್ರಚೋದನೆಯೇ ಕಾರಣ ಎಂದು ಪ್ರತಿಪಾದಿಸಿರುವ ಚೀನಾವೂ ಲೈನ್ ಆಫ್ ಕಂಟ್ರೋಲ್‌ನಿಂದ ಭಾರತೀಯ ಸೇನೆ ಹಿಂದಿರುಗುವವರೆಗೂ ಮತ್ತು ಆ ಪ್ರದೇಶದಲ್ಲಿ ತನ್ನ ಮೂಲಭೂತ ಸೌಕರ್ಯಗಳ ಯೋಜನೆ ನಿಲ್ಲಿಸುವವರೆಗೂ ಯಾವುದೇ ಪಡೆಗಳನ್ನು ಹಿಂತೆಗೆದುಕೊಳ್ಳಲು ಬೀಜಿಂಗ್ ನಿರಾಕರಿಸಿದೆ” ಎಂದು ವರದಿ ಹೇಳಿದೆ.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಡಿಫೆನ್ಸ್ ವರದಿಯು “ಚೀನಾದ ಮಿಲಿಟರಿ ಸಾಮರ್ಥ್ಯ ಮತ್ತು ಅದರ ಜಾಗತಿಕ ಮಹತ್ವಾಕಾಂಕ್ಷೆಗಳಿಂದ ಸವಾಲನ್ನು ಎದುರಿಸುವ ಪ್ರಾಮುಖ್ಯತೆಯ ಸಭೆ ಅಗತ್ಯವಾಗಿದೆ” ಎಂದು ವಿವರಿಸಿದೆ.


ಇದನ್ನೂ ಓದಿ; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...