Homeಅಂತರಾಷ್ಟ್ರೀಯಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದ ಅಮೆರಿಕಾ

ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದ ಅಮೆರಿಕಾ

- Advertisement -
- Advertisement -

ಕೋವ್ಯಾಕ್ಸಿನ್ ತುರ್ತು ಬಳಕೆಯ ಅನುಮತಿಗಾಗಿ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಲ್ಲಿಸಿದ ಪ್ರಸ್ತಾಪವನ್ನು ಅಮೆರಿಕಾದ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್​ಡಿಎ) ತಿರಸ್ಕರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕಾದಲ್ಲಿ ಭಾರತ್ ಬಯೋಟೆಕ್ ಪಾಲುದಾರ ಒಕುಜೆನ್ (Ocugen) ಕಂಪನಿಯು ಕೋವಾಕ್ಸಿನ್‌ ಬಳಕೆಗೆ ಸಂಪೂರ್ಣ ಅನುಮೋದನೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿತ್ತು.

ತುರ್ತು ಬಳಕೆ ಪ್ರಸ್ತಾವನೆಗೆ ಅನುಮತಿ ದೊರೆಯದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಒಕುಜೆನ್‌ನ ಸಹ ಸಂಸ್ಥಾಪಕ ಶಂಕರ್ ಮುಸುನೂರಿ, “ಇದು ನಮ್ಮ ಸಮಯವನ್ನು ವಿಸ್ತರಿಸುತ್ತದೆ, ಆದರೆ ಕೋವಾಕ್ಸಿನ್ ಅನ್ನು ಅಮೆರಿಕಾಕ್ಕೆ ತರಲು ನಾವು ಬದ್ಧರಾಗಿದ್ದೇವೆ” ಎಂದಿದ್ದಾರೆ.

ಪ್ರಸ್ತುತ, ಅನೇಕ ದೇಶಗಳಲ್ಲಿ ಕೋವಾಕ್ಸಿನ್ ಬಳಕೆಗೆ ಅನುಮತಿ ನೀಡಲಾಗಿಲ್ಲ. ಇರಾನ್, ಫಿಲಿಪೈನ್ಸ್, ಮಾರಿಷಸ್, ಮೆಕ್ಸಿಕೊ, ನೇಪಾಳ, ಗಯಾನಾ, ಪರಾಗ್ವೆ ಮತ್ತು ಜಿಂಬಾಬ್ವೆ ಕೋವಾಕ್ಸಿನ್ ಲಸಿಕೆ ಅನ್ನು ಅನುಮೋದಿಸಿದ ಕೆಲವು ದೇಶಗಳಾಗಿವೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಭಾರತದಲ್ಲಿ ಲಸಿಕೆಯ ತುರ್ತು ಬಳಕೆಯ ಅನುಮತಿಯನ್ನು ನೀಡಿದ ಆರು ತಿಂಗಳ ನಂತರವೂ ಭಾರತ್ ಬಯೋಟೆಕ್ ತನ್ನ ಮೂರನೇ ಹಂತದ ಪ್ರಯೋಗ ದತ್ತಾಂಶವನ್ನು ಹಂಚಿಕೊಳ್ಳದಿರುವ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದೆ. ಈ ಸಮಯದಲ್ಲಿ ಅಮೆರಿಕಾ ಕೂಡ ಲಸಿಕೆಯ ಪ್ರಸ್ತಾಪ ತಿರಸ್ಕರಿಸಿದೆ. ಮಾರ್ಚ್ ವೇಳೆಗೆ ಪರಿಣಾಮಕಾರಿತ್ವದ ಫಲಿತಾಂಶಗಳನ್ನು ಸಲ್ಲಿಸುವುದಾಗಿ ಕಂಪನಿ ಜನವರಿಯಲ್ಲಿ ಹೇಳಿತ್ತು. ಆದರೆ, ಕೋವಾಕ್ಸಿನ್‌ನ 3 ನೇ ಹಂತದ ಪ್ರಯೋಗ ದತ್ತಾಂಶವನ್ನು ಜುಲೈನಲ್ಲಿ ಮಾತ್ರ ಸಾರ್ವಜನಿಕಗೊಳಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

“ಹಂತ 3 ಅಧ್ಯಯನಗಳ ಅಂತಿಮ ವಿಶ್ಲೇಷಣೆಯ ಮಾಹಿತಿಯು ಲಭ್ಯವಾದ ನಂತರ, ಭಾರತ್ ಬಯೋಟೆಕ್ ಕೋವಾಕ್ಸಿನ್‌ಗೆ ಸಂಪೂರ್ಣ ಪರವಾನಗಿಗಾಗಿ ಅರ್ಜಿ ಸಲ್ಲಿಸುತ್ತದೆ” ಎಂದು ಕಂಪನಿ ತಿಳಿಸಿದೆ.

ಕೋವಾಕ್ಸಿನ್ ಮತ್ತು ಕೋವಿಶೀಲ್ಡ್‌ಗಳ ಬಗ್ಗೆ ನಡೆದ ಅಧ್ಯಯನದಲ್ಲಿ, ಜೂನ್ 6 ರಂದು ವರದಿಯಾದ ಅಧ್ಯಯನವು ಕೋವಿಶೀಲ್ಡ್‌ನ ಒಂದು ಡೋಸ್ ಕೋವಾಕ್ಸಿನ್ ಗಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ತಿಳಿಸಿದೆ. ಲಸಿಕೆಗಳ ಎರಡನೇ ಡೋಸ್ ಪಡೆದ ನಂತರ, ಕೋವಿಶೀಲ್ಡ್‌ನ ಎರಡು ಡೋಸ್‌ಗಳು ಕೋವಾಕ್ಸಿನ್‌ಗಿಂತ ಆರು ಪಟ್ಟು ಹೆಚ್ಚು ಪರಿಣಾಮಕಾರಿಯಾಗಿವೆ ಎಂದು ಅಧ್ಯಯನ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಕೊರೊನಾ ಲಸಿಕೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಯತ್ನಿಸುತ್ತಿರುವ ಭಾರತ್ ಬಯೋಟೆಕ್, ಏಪ್ರಿಲ್ 18 ರಂದು ಭಾರತ್ ಬಯೋಟೆಕ್ ಸಂಸ್ಥೆ Expression of Interest ವ್ಯಾಕ್ಸಿನ್ ತುರ್ತು ಬಳಕೆಯ ಅನುಮತಿ ಕೋರಿ ವಿಶ್ವ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು. ಆದರೆ, ಮೇ 18ರಂದು ವಿಶ್ವ ಆರೋಗ್ಯ ಸಂಸ್ಥೆ ಕೋವ್ಯಾಕ್ಸಿನ್ ಲಸಿಕೆಯ ಕುರಿತು ಹೆಚ್ಚುವರಿ ಮಾಹಿತಿ ನೀಡುವಂತೆ ಕೇಳಿತ್ತು. ಸದ್ಯ ಅಮೆರಿಕಾ ಕೂಡ ಕೋವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದೆ.


ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...