Homeಅಂತರಾಷ್ಟ್ರೀಯಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದ ಅಮೆರಿಕಾ

ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದ ಅಮೆರಿಕಾ

- Advertisement -
- Advertisement -

ಕೋವ್ಯಾಕ್ಸಿನ್ ತುರ್ತು ಬಳಕೆಯ ಅನುಮತಿಗಾಗಿ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಲ್ಲಿಸಿದ ಪ್ರಸ್ತಾಪವನ್ನು ಅಮೆರಿಕಾದ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್​ಡಿಎ) ತಿರಸ್ಕರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕಾದಲ್ಲಿ ಭಾರತ್ ಬಯೋಟೆಕ್ ಪಾಲುದಾರ ಒಕುಜೆನ್ (Ocugen) ಕಂಪನಿಯು ಕೋವಾಕ್ಸಿನ್‌ ಬಳಕೆಗೆ ಸಂಪೂರ್ಣ ಅನುಮೋದನೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿತ್ತು.

ತುರ್ತು ಬಳಕೆ ಪ್ರಸ್ತಾವನೆಗೆ ಅನುಮತಿ ದೊರೆಯದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಒಕುಜೆನ್‌ನ ಸಹ ಸಂಸ್ಥಾಪಕ ಶಂಕರ್ ಮುಸುನೂರಿ, “ಇದು ನಮ್ಮ ಸಮಯವನ್ನು ವಿಸ್ತರಿಸುತ್ತದೆ, ಆದರೆ ಕೋವಾಕ್ಸಿನ್ ಅನ್ನು ಅಮೆರಿಕಾಕ್ಕೆ ತರಲು ನಾವು ಬದ್ಧರಾಗಿದ್ದೇವೆ” ಎಂದಿದ್ದಾರೆ.

ಪ್ರಸ್ತುತ, ಅನೇಕ ದೇಶಗಳಲ್ಲಿ ಕೋವಾಕ್ಸಿನ್ ಬಳಕೆಗೆ ಅನುಮತಿ ನೀಡಲಾಗಿಲ್ಲ. ಇರಾನ್, ಫಿಲಿಪೈನ್ಸ್, ಮಾರಿಷಸ್, ಮೆಕ್ಸಿಕೊ, ನೇಪಾಳ, ಗಯಾನಾ, ಪರಾಗ್ವೆ ಮತ್ತು ಜಿಂಬಾಬ್ವೆ ಕೋವಾಕ್ಸಿನ್ ಲಸಿಕೆ ಅನ್ನು ಅನುಮೋದಿಸಿದ ಕೆಲವು ದೇಶಗಳಾಗಿವೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಭಾರತದಲ್ಲಿ ಲಸಿಕೆಯ ತುರ್ತು ಬಳಕೆಯ ಅನುಮತಿಯನ್ನು ನೀಡಿದ ಆರು ತಿಂಗಳ ನಂತರವೂ ಭಾರತ್ ಬಯೋಟೆಕ್ ತನ್ನ ಮೂರನೇ ಹಂತದ ಪ್ರಯೋಗ ದತ್ತಾಂಶವನ್ನು ಹಂಚಿಕೊಳ್ಳದಿರುವ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದೆ. ಈ ಸಮಯದಲ್ಲಿ ಅಮೆರಿಕಾ ಕೂಡ ಲಸಿಕೆಯ ಪ್ರಸ್ತಾಪ ತಿರಸ್ಕರಿಸಿದೆ. ಮಾರ್ಚ್ ವೇಳೆಗೆ ಪರಿಣಾಮಕಾರಿತ್ವದ ಫಲಿತಾಂಶಗಳನ್ನು ಸಲ್ಲಿಸುವುದಾಗಿ ಕಂಪನಿ ಜನವರಿಯಲ್ಲಿ ಹೇಳಿತ್ತು. ಆದರೆ, ಕೋವಾಕ್ಸಿನ್‌ನ 3 ನೇ ಹಂತದ ಪ್ರಯೋಗ ದತ್ತಾಂಶವನ್ನು ಜುಲೈನಲ್ಲಿ ಮಾತ್ರ ಸಾರ್ವಜನಿಕಗೊಳಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

“ಹಂತ 3 ಅಧ್ಯಯನಗಳ ಅಂತಿಮ ವಿಶ್ಲೇಷಣೆಯ ಮಾಹಿತಿಯು ಲಭ್ಯವಾದ ನಂತರ, ಭಾರತ್ ಬಯೋಟೆಕ್ ಕೋವಾಕ್ಸಿನ್‌ಗೆ ಸಂಪೂರ್ಣ ಪರವಾನಗಿಗಾಗಿ ಅರ್ಜಿ ಸಲ್ಲಿಸುತ್ತದೆ” ಎಂದು ಕಂಪನಿ ತಿಳಿಸಿದೆ.

ಕೋವಾಕ್ಸಿನ್ ಮತ್ತು ಕೋವಿಶೀಲ್ಡ್‌ಗಳ ಬಗ್ಗೆ ನಡೆದ ಅಧ್ಯಯನದಲ್ಲಿ, ಜೂನ್ 6 ರಂದು ವರದಿಯಾದ ಅಧ್ಯಯನವು ಕೋವಿಶೀಲ್ಡ್‌ನ ಒಂದು ಡೋಸ್ ಕೋವಾಕ್ಸಿನ್ ಗಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ತಿಳಿಸಿದೆ. ಲಸಿಕೆಗಳ ಎರಡನೇ ಡೋಸ್ ಪಡೆದ ನಂತರ, ಕೋವಿಶೀಲ್ಡ್‌ನ ಎರಡು ಡೋಸ್‌ಗಳು ಕೋವಾಕ್ಸಿನ್‌ಗಿಂತ ಆರು ಪಟ್ಟು ಹೆಚ್ಚು ಪರಿಣಾಮಕಾರಿಯಾಗಿವೆ ಎಂದು ಅಧ್ಯಯನ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಕೊರೊನಾ ಲಸಿಕೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಯತ್ನಿಸುತ್ತಿರುವ ಭಾರತ್ ಬಯೋಟೆಕ್, ಏಪ್ರಿಲ್ 18 ರಂದು ಭಾರತ್ ಬಯೋಟೆಕ್ ಸಂಸ್ಥೆ Expression of Interest ವ್ಯಾಕ್ಸಿನ್ ತುರ್ತು ಬಳಕೆಯ ಅನುಮತಿ ಕೋರಿ ವಿಶ್ವ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು. ಆದರೆ, ಮೇ 18ರಂದು ವಿಶ್ವ ಆರೋಗ್ಯ ಸಂಸ್ಥೆ ಕೋವ್ಯಾಕ್ಸಿನ್ ಲಸಿಕೆಯ ಕುರಿತು ಹೆಚ್ಚುವರಿ ಮಾಹಿತಿ ನೀಡುವಂತೆ ಕೇಳಿತ್ತು. ಸದ್ಯ ಅಮೆರಿಕಾ ಕೂಡ ಕೋವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದೆ.


ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...