Homeಅಂತರಾಷ್ಟ್ರೀಯಅಮೇರಿಕಾ ಚುನಾವಣೆ: ಶೇಕಡ 69 ರಷ್ಟು ಮುಸ್ಲಿಮರು ಜೋ ಬೈಡೆನ್ ಪರ; ಸಮೀಕ್ಷೆ!

ಅಮೇರಿಕಾ ಚುನಾವಣೆ: ಶೇಕಡ 69 ರಷ್ಟು ಮುಸ್ಲಿಮರು ಜೋ ಬೈಡೆನ್ ಪರ; ಸಮೀಕ್ಷೆ!

ಅಮೇರಿಕಾದಲ್ಲಿ ಸುಮಾರು 3.45 ಮಿಲಿಯನ್ ಮುಸ್ಲಿಮರು ವಾಸಿಸುತ್ತಿದ್ದು, ಅಲ್ಲಿನ ಒಟ್ಟು ಜನಸಂಖ್ಯೆಯ ಶೇಕಡಾ 1.1 ರಷ್ಟಿದ್ದಾರೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷೀಯ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಸುಮಾರು ಶೇಕಡ 69 ಪ್ರತಿಶತದಷ್ಟು ಮುಸ್ಲಿಂ ಮತದಾರರು ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್ ಪರ ಮತ ಚಲಾಯಿಸಿದ್ದು, ಶೇಕಡ 17 ರಷ್ಟು ಜನರು ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸಿದ್ದಾರೆ ಎಂದು ಮುಸ್ಲಿಂ ನಾಗರಿಕ ಸ್ವಾತಂತ್ರ್ಯ ಮತ್ತು ವಕಾಲತ್ತು ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ದೇಶದ ಅತಿದೊಡ್ಡ ಮುಸ್ಲಿಂ ನಾಗರಿಕ ಹಕ್ಕುಗಳು ಮತ್ತು ವಕಾಲತ್ತು ಸಂಘಟನೆ, ಕೌನ್ಸಿಲ್ ಆನ್ ಅಮೇರಿಕನ್-ಇಸ್ಲಾಮಿಕ್ ರಿಲೇಶನ್ಸ್ (CAIR) ತನ್ನ 2020 ಮುಸ್ಲಿಂ ಮತದಾರರ ಅಧ್ಯಕ್ಷೀಯ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಮಂಗಳವಾರ ಬಿಡುಗಡೆ ಮಾಡಿತು. ದಾಖಲೆಯ ಶೇಕಡ 84 ರಷ್ಟು ಮುಸ್ಲಿಮರು ಮತಚಲಾವಣೆ ಮಾಡಿದ್ದಾರೆ ಎಂದು CAIR ನ ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

CAIR ರಾಷ್ಟ್ರೀಯ ಕಾರ್ಯನಿರ್ವಾಹಕ ನಿರ್ದೇಶಕ ನಿಹಾದ್ ಅವದ್, “ರಾಷ್ಟ್ರಪತಿ ಚುನಾವಣೆ ಸೇರಿದಂತೆ ಈ ದೇಶದಾದ್ಯಂತ ಹಲವಾರು ಫಲಿತಾಂಶಗಳ ಮೇಲೆ ಪರಿಣಾಮ ಬೀರುವ ಮುಸ್ಲಿಂ ಸಮುದಾಯದ ಮಹತ್ವದ ಸಾಮರ್ಥ್ಯವನ್ನು ರಾಷ್ಟ್ರೀಯವಾಗಿ ಗುರುತಿಸಲಾಗಿದೆ” ಎಂದು ಹೇಳಿದರು.

ಸ್ಥಳೀಯ, ರಾಜ್ಯ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಮುಸ್ಲಿಂ ಸಮುದಾಯವು ವಹಿಸುವ ಪಾತ್ರವನ್ನು ನಿರಾಕರಿಸುವಂತಿಲ್ಲ ಎಂದು CAIR ಸರ್ಕಾರಿ ವ್ಯವಹಾರಗಳ ನಿರ್ದೇಶಕ ರಾಬರ್ಟ್ ಎಸ್ ಮೆಕ್‌ಕಾವ್ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಎಲ್ಲಾ ಅಮೆರಿಕನ್ನರ ನಾಗರಿಕ ಮತ್ತು ಧಾರ್ಮಿಕ ಹಕ್ಕುಗಳನ್ನು ಎತ್ತಿಹಿಡಿಯಲಾಗಿದೆ ಮತ್ತು ರಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ಚುನಾಯಿತ ರಾಜಕಾರಣಿಗಳನ್ನು ಜವಾಬ್ದಾರಿಯುತವಾಗಿ ಆಯ್ಕೆ ಮಾಡುವ ಸಮಯ ಇದು” ಎಂದು ಮೆಕ್‌ಕಾವ್ ಹೇಳಿದರು.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

2016 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಟ್ರಂಪ್‌ಗೆ ಆಗ ಶೇಕಡ 13 ರಷ್ಟು ಮುಸ್ಲಿಮರ ಬೆಂಬಲ ಇತ್ತು. 2020ರಲ್ಲಿ ಇದು ಶೇಕಡ 4 ರಷ್ಟು ಹೆಚ್ಚಿದ್ದು, ಈಗ 17 ರಷ್ಟಾಗಿದೆ.

ಪ್ಯೂ ರಿಸರ್ಚ್ ಸೆಂಟರ್ ಪ್ರಕಾರ, 2017 ರಲ್ಲಿ ಅಮೇರಿಕಾದಲ್ಲಿ ಸುಮಾರು 3.45 ಮಿಲಿಯನ್ ಮುಸ್ಲಿಮರು ವಾಸಿಸುತ್ತಿದ್ದು, ಅಲ್ಲಿನ ಒಟ್ಟು ಜನಸಂಖ್ಯೆಯ ಶೇಕಡಾ 1.1 ರಷ್ಟಿದ್ದಾರೆ.


ಇದನ್ನೂ ಓದಿ: US Election 2020 Results LIVE Updates: ಯಾರು ಗೆಲ್ಲಲಿದ್ದಾರೆ ಅಮೆರಿಕಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...