Homeಅಂತರಾಷ್ಟ್ರೀಯಅಮೇರಿಕಾ ಚುನಾವಣೆ: ಶೇಕಡ 69 ರಷ್ಟು ಮುಸ್ಲಿಮರು ಜೋ ಬೈಡೆನ್ ಪರ; ಸಮೀಕ್ಷೆ!

ಅಮೇರಿಕಾ ಚುನಾವಣೆ: ಶೇಕಡ 69 ರಷ್ಟು ಮುಸ್ಲಿಮರು ಜೋ ಬೈಡೆನ್ ಪರ; ಸಮೀಕ್ಷೆ!

ಅಮೇರಿಕಾದಲ್ಲಿ ಸುಮಾರು 3.45 ಮಿಲಿಯನ್ ಮುಸ್ಲಿಮರು ವಾಸಿಸುತ್ತಿದ್ದು, ಅಲ್ಲಿನ ಒಟ್ಟು ಜನಸಂಖ್ಯೆಯ ಶೇಕಡಾ 1.1 ರಷ್ಟಿದ್ದಾರೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷೀಯ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಸುಮಾರು ಶೇಕಡ 69 ಪ್ರತಿಶತದಷ್ಟು ಮುಸ್ಲಿಂ ಮತದಾರರು ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್ ಪರ ಮತ ಚಲಾಯಿಸಿದ್ದು, ಶೇಕಡ 17 ರಷ್ಟು ಜನರು ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸಿದ್ದಾರೆ ಎಂದು ಮುಸ್ಲಿಂ ನಾಗರಿಕ ಸ್ವಾತಂತ್ರ್ಯ ಮತ್ತು ವಕಾಲತ್ತು ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ದೇಶದ ಅತಿದೊಡ್ಡ ಮುಸ್ಲಿಂ ನಾಗರಿಕ ಹಕ್ಕುಗಳು ಮತ್ತು ವಕಾಲತ್ತು ಸಂಘಟನೆ, ಕೌನ್ಸಿಲ್ ಆನ್ ಅಮೇರಿಕನ್-ಇಸ್ಲಾಮಿಕ್ ರಿಲೇಶನ್ಸ್ (CAIR) ತನ್ನ 2020 ಮುಸ್ಲಿಂ ಮತದಾರರ ಅಧ್ಯಕ್ಷೀಯ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಮಂಗಳವಾರ ಬಿಡುಗಡೆ ಮಾಡಿತು. ದಾಖಲೆಯ ಶೇಕಡ 84 ರಷ್ಟು ಮುಸ್ಲಿಮರು ಮತಚಲಾವಣೆ ಮಾಡಿದ್ದಾರೆ ಎಂದು CAIR ನ ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

CAIR ರಾಷ್ಟ್ರೀಯ ಕಾರ್ಯನಿರ್ವಾಹಕ ನಿರ್ದೇಶಕ ನಿಹಾದ್ ಅವದ್, “ರಾಷ್ಟ್ರಪತಿ ಚುನಾವಣೆ ಸೇರಿದಂತೆ ಈ ದೇಶದಾದ್ಯಂತ ಹಲವಾರು ಫಲಿತಾಂಶಗಳ ಮೇಲೆ ಪರಿಣಾಮ ಬೀರುವ ಮುಸ್ಲಿಂ ಸಮುದಾಯದ ಮಹತ್ವದ ಸಾಮರ್ಥ್ಯವನ್ನು ರಾಷ್ಟ್ರೀಯವಾಗಿ ಗುರುತಿಸಲಾಗಿದೆ” ಎಂದು ಹೇಳಿದರು.

ಸ್ಥಳೀಯ, ರಾಜ್ಯ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಮುಸ್ಲಿಂ ಸಮುದಾಯವು ವಹಿಸುವ ಪಾತ್ರವನ್ನು ನಿರಾಕರಿಸುವಂತಿಲ್ಲ ಎಂದು CAIR ಸರ್ಕಾರಿ ವ್ಯವಹಾರಗಳ ನಿರ್ದೇಶಕ ರಾಬರ್ಟ್ ಎಸ್ ಮೆಕ್‌ಕಾವ್ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಎಲ್ಲಾ ಅಮೆರಿಕನ್ನರ ನಾಗರಿಕ ಮತ್ತು ಧಾರ್ಮಿಕ ಹಕ್ಕುಗಳನ್ನು ಎತ್ತಿಹಿಡಿಯಲಾಗಿದೆ ಮತ್ತು ರಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ಚುನಾಯಿತ ರಾಜಕಾರಣಿಗಳನ್ನು ಜವಾಬ್ದಾರಿಯುತವಾಗಿ ಆಯ್ಕೆ ಮಾಡುವ ಸಮಯ ಇದು” ಎಂದು ಮೆಕ್‌ಕಾವ್ ಹೇಳಿದರು.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

2016 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಟ್ರಂಪ್‌ಗೆ ಆಗ ಶೇಕಡ 13 ರಷ್ಟು ಮುಸ್ಲಿಮರ ಬೆಂಬಲ ಇತ್ತು. 2020ರಲ್ಲಿ ಇದು ಶೇಕಡ 4 ರಷ್ಟು ಹೆಚ್ಚಿದ್ದು, ಈಗ 17 ರಷ್ಟಾಗಿದೆ.

ಪ್ಯೂ ರಿಸರ್ಚ್ ಸೆಂಟರ್ ಪ್ರಕಾರ, 2017 ರಲ್ಲಿ ಅಮೇರಿಕಾದಲ್ಲಿ ಸುಮಾರು 3.45 ಮಿಲಿಯನ್ ಮುಸ್ಲಿಮರು ವಾಸಿಸುತ್ತಿದ್ದು, ಅಲ್ಲಿನ ಒಟ್ಟು ಜನಸಂಖ್ಯೆಯ ಶೇಕಡಾ 1.1 ರಷ್ಟಿದ್ದಾರೆ.


ಇದನ್ನೂ ಓದಿ: US Election 2020 Results LIVE Updates: ಯಾರು ಗೆಲ್ಲಲಿದ್ದಾರೆ ಅಮೆರಿಕಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...