Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಸೋಲೊಪ್ಪಿಕೊಳ್ಳುವ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್!

ಅಮೆರಿಕಾ ಚುನಾವಣೆ: ಸೋಲೊಪ್ಪಿಕೊಳ್ಳುವ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್!

ಭವಿಷ್ಯದಲ್ಲಿ ಏನಾಗುತ್ತದೆಯೋ, ಯಾವ ಆಡಳಿತ ಬರುತ್ತದೋ ಎಂದು ಯಾರಿಗೆ ತಿಳಿದಿದೆ. ಸಮಯ ಎಲ್ಲವನ್ನೂ ಹೇಳುತ್ತದೆ ಎಂದು ನಾನು ಊಹಿಸುತ್ತೇನೆ ಎಂದು ಹೇಳಿದರು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕುರಿತು ಇಂದು ಶ್ವೇತಭವನದಲ್ಲಿ ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ 2020ರ ಅಧ್ಯಕ್ಷೀಯ ಚುನಾವಣೆಯಲ್ಲಿನ ತಮ್ಮ ಸೋಲನ್ನು ಇನ್ನೇನು ಒಪ್ಪಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ಮಾತು ನಿಲ್ಲಿಸಿ “ಸಮಯ ಎಲ್ಲವನ್ನೂ ಹೇಳುತ್ತದೆ” ಎಂದು ಹೇಳಿದರು.

ಮೊದಲಿನಿಂದಲೂ ತಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ ಟ್ರಂಪ್, “ಭವಿಷ್ಯದಲ್ಲಿ ಏನಾಗುತ್ತದೆಯೋ, ಯಾವ ಆಡಳಿತ ಬರುತ್ತದೋ ಎಂದು ಯಾರಿಗೆ ತಿಳಿದಿದೆ. ಸಮಯ ಎಲ್ಲವನ್ನೂ ಹೇಳುತ್ತದೆ ಎಂದು ನಾನು ಊಹಿಸುತ್ತೇನೆ. ಆದರೆ ಈ ಆಡಳಿತವು ಲಾಕ್‌ಡೌನ್‌ಗೆ ಹೋಗುವುದಿಲ್ಲ ಎಂದು ನಾನು ನಿಮಗೆ ಹೇಳಬಲ್ಲೆ” ಎಂದು ಹೇಳಿದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಇನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಟ್ರಂಪ್- ಸರಣಿ ಟ್ವೀಟ್!

ಅಮೆರಿಕಾದಲ್ಲಿ 243,000 ಕ್ಕೂ ಹೆಚ್ಚು ಜನರು ಕೊರೊನ ವೈರಸ್ ಸಾಂಕ್ರಾಮಿಕಕ್ಕೆ ತುತ್ತಾಗಿದ್ದು, ಇದಕ್ಕೆ ಆಡಳಿತದ ಪ್ರತಿಕ್ರಿಯೆಯನ್ನು ಕೇಳಿದ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.

“ನೀವು ಚುನಾವಣೆಯಲ್ಲಿ ಸೋತಿದ್ದನ್ನು ಯಾವಾಗ ಒಪ್ಪುತ್ತೀರಿ, ಸರ್?” ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದ ಸುದ್ದಿಗಾರರಿಗೆ ಪ್ರತಿಕ್ರಿಯಿಸದೆ ಟ್ರಂಪ್ ಈ ಕಾರ್ಯಕ್ರಮದಿಂದ ಹೊರನಡೆದರು.

ಈ ಹಿಂದೆ, ಟ್ರಂಪ್ ಮತ್ತೊಮ್ಮೆ “ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ” ಎಂದು ಹೊಸ ಟ್ವೀಟ್‌ ಮಾಡಿದ್ದರು. ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿನ ಸೋಲನ್ನು ಟ್ರಂಪ್ ಇನ್ನೂ ಒಪ್ಪಿಕೊಂಡಿಲ್ಲ. ಹಾಗಾಗಿ ತಮ್ಮ ಟ್ವೀಟ್‌ಗಳಲ್ಲಿ ತಮಗೆ “ದೊಡ್ಡ ಗೆಲುವು” ಎಂದು ಹೇಳಿಕೊಳ್ಳುತ್ತಾ, ಡೆಮೋಕ್ರಾಟ್‌ಗಳ ವಿರುದ್ಧ ವಂಚನೆಯ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ವಿಜೇತರಾಗಿದ್ದಾರೆ ಎಂದು ಮಾಧ್ಯಮಗಳು ಘೋಷಿಸಿದ ನಂತರವೂ ಟ್ರಂಪ್ ಈ ರೀತಿಯ ಹಕ್ಕುಮಂಡನೆ ಮಾಡುತ್ತಿದ್ದಾರೆ.

ಟ್ರಂಪ್ ಮಂಗಳವಾರ ಮತ್ತೆ “ದೊಡ್ಡ ಗೆಲುವು” ಕುರಿತು ಟ್ವೀಟ್ ಮಾಡಿದ್ದು, ಪ್ರತಿಸ್ಪರ್ಧಿ ಬೈಡೆನ್ ಅವರ ಡೆಮಾಕ್ರಟಿಕ್ ಪಕ್ಷವು ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಯಾವುದೇ ಪುರಾವೆಗಳನ್ನು ಉಲ್ಲೇಖಿಸದೆ, “ನಾವು ದೊಡ್ಡವರಾಗಿದ್ದೇವೆ, ಆದರೆ ಅವರು ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ಅದನ್ನು ಮಾಡಲು ಎಂದಿಗೂ ಬಿಡುವುದಿಲ್ಲ. ಮತದಾನ ಮುಗಿದ ನಂತರ ಮತ ಚಲಾಯಿಸಲಾಗುವುದಿಲ್ಲ!” ಎಂದು ಮತ್ತೊಂದು ಟ್ವೀಟ್ ಮಾಡಿದ್ದರು.

ಇದೇ ರೀತಿಯ ಆರೋಪಗಳನ್ನು ಮಾಡುತ್ತಾ ಟ್ರಂಪ್ ಸುಮಾರು 30 ಟ್ವೀಟ್‌ಗಳನ್ನು ಮಾಡಿದ್ದಾರೆ. ಅವುಗಳಲ್ಲಿ ಸುಮಾರು 13 ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿ ಈಗಾಗಲೆ ನಿರ್ಬಂಧಿಸಿದೆ.


ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...