Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಸೋಲೊಪ್ಪಿಕೊಳ್ಳುವ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್!

ಅಮೆರಿಕಾ ಚುನಾವಣೆ: ಸೋಲೊಪ್ಪಿಕೊಳ್ಳುವ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್!

ಭವಿಷ್ಯದಲ್ಲಿ ಏನಾಗುತ್ತದೆಯೋ, ಯಾವ ಆಡಳಿತ ಬರುತ್ತದೋ ಎಂದು ಯಾರಿಗೆ ತಿಳಿದಿದೆ. ಸಮಯ ಎಲ್ಲವನ್ನೂ ಹೇಳುತ್ತದೆ ಎಂದು ನಾನು ಊಹಿಸುತ್ತೇನೆ ಎಂದು ಹೇಳಿದರು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕುರಿತು ಇಂದು ಶ್ವೇತಭವನದಲ್ಲಿ ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ 2020ರ ಅಧ್ಯಕ್ಷೀಯ ಚುನಾವಣೆಯಲ್ಲಿನ ತಮ್ಮ ಸೋಲನ್ನು ಇನ್ನೇನು ಒಪ್ಪಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ಮಾತು ನಿಲ್ಲಿಸಿ “ಸಮಯ ಎಲ್ಲವನ್ನೂ ಹೇಳುತ್ತದೆ” ಎಂದು ಹೇಳಿದರು.

ಮೊದಲಿನಿಂದಲೂ ತಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ ಟ್ರಂಪ್, “ಭವಿಷ್ಯದಲ್ಲಿ ಏನಾಗುತ್ತದೆಯೋ, ಯಾವ ಆಡಳಿತ ಬರುತ್ತದೋ ಎಂದು ಯಾರಿಗೆ ತಿಳಿದಿದೆ. ಸಮಯ ಎಲ್ಲವನ್ನೂ ಹೇಳುತ್ತದೆ ಎಂದು ನಾನು ಊಹಿಸುತ್ತೇನೆ. ಆದರೆ ಈ ಆಡಳಿತವು ಲಾಕ್‌ಡೌನ್‌ಗೆ ಹೋಗುವುದಿಲ್ಲ ಎಂದು ನಾನು ನಿಮಗೆ ಹೇಳಬಲ್ಲೆ” ಎಂದು ಹೇಳಿದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಇನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಟ್ರಂಪ್- ಸರಣಿ ಟ್ವೀಟ್!

ಅಮೆರಿಕಾದಲ್ಲಿ 243,000 ಕ್ಕೂ ಹೆಚ್ಚು ಜನರು ಕೊರೊನ ವೈರಸ್ ಸಾಂಕ್ರಾಮಿಕಕ್ಕೆ ತುತ್ತಾಗಿದ್ದು, ಇದಕ್ಕೆ ಆಡಳಿತದ ಪ್ರತಿಕ್ರಿಯೆಯನ್ನು ಕೇಳಿದ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.

“ನೀವು ಚುನಾವಣೆಯಲ್ಲಿ ಸೋತಿದ್ದನ್ನು ಯಾವಾಗ ಒಪ್ಪುತ್ತೀರಿ, ಸರ್?” ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದ ಸುದ್ದಿಗಾರರಿಗೆ ಪ್ರತಿಕ್ರಿಯಿಸದೆ ಟ್ರಂಪ್ ಈ ಕಾರ್ಯಕ್ರಮದಿಂದ ಹೊರನಡೆದರು.

ಈ ಹಿಂದೆ, ಟ್ರಂಪ್ ಮತ್ತೊಮ್ಮೆ “ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ” ಎಂದು ಹೊಸ ಟ್ವೀಟ್‌ ಮಾಡಿದ್ದರು. ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿನ ಸೋಲನ್ನು ಟ್ರಂಪ್ ಇನ್ನೂ ಒಪ್ಪಿಕೊಂಡಿಲ್ಲ. ಹಾಗಾಗಿ ತಮ್ಮ ಟ್ವೀಟ್‌ಗಳಲ್ಲಿ ತಮಗೆ “ದೊಡ್ಡ ಗೆಲುವು” ಎಂದು ಹೇಳಿಕೊಳ್ಳುತ್ತಾ, ಡೆಮೋಕ್ರಾಟ್‌ಗಳ ವಿರುದ್ಧ ವಂಚನೆಯ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡೆನ್ ವಿಜೇತರಾಗಿದ್ದಾರೆ ಎಂದು ಮಾಧ್ಯಮಗಳು ಘೋಷಿಸಿದ ನಂತರವೂ ಟ್ರಂಪ್ ಈ ರೀತಿಯ ಹಕ್ಕುಮಂಡನೆ ಮಾಡುತ್ತಿದ್ದಾರೆ.

ಟ್ರಂಪ್ ಮಂಗಳವಾರ ಮತ್ತೆ “ದೊಡ್ಡ ಗೆಲುವು” ಕುರಿತು ಟ್ವೀಟ್ ಮಾಡಿದ್ದು, ಪ್ರತಿಸ್ಪರ್ಧಿ ಬೈಡೆನ್ ಅವರ ಡೆಮಾಕ್ರಟಿಕ್ ಪಕ್ಷವು ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಯಾವುದೇ ಪುರಾವೆಗಳನ್ನು ಉಲ್ಲೇಖಿಸದೆ, “ನಾವು ದೊಡ್ಡವರಾಗಿದ್ದೇವೆ, ಆದರೆ ಅವರು ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ಅದನ್ನು ಮಾಡಲು ಎಂದಿಗೂ ಬಿಡುವುದಿಲ್ಲ. ಮತದಾನ ಮುಗಿದ ನಂತರ ಮತ ಚಲಾಯಿಸಲಾಗುವುದಿಲ್ಲ!” ಎಂದು ಮತ್ತೊಂದು ಟ್ವೀಟ್ ಮಾಡಿದ್ದರು.

ಇದೇ ರೀತಿಯ ಆರೋಪಗಳನ್ನು ಮಾಡುತ್ತಾ ಟ್ರಂಪ್ ಸುಮಾರು 30 ಟ್ವೀಟ್‌ಗಳನ್ನು ಮಾಡಿದ್ದಾರೆ. ಅವುಗಳಲ್ಲಿ ಸುಮಾರು 13 ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿ ಈಗಾಗಲೆ ನಿರ್ಬಂಧಿಸಿದೆ.


ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು: ಟ್ರಂಪ್‌ಗೆ ವಿಚ್ಛೇಧನ ನೀಡಲಿರುವ ಮೆಲೆನಿಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....