Homeಅಂತರಾಷ್ಟ್ರೀಯUS Elections 2024: ಟ್ರಂಪ್ ಜಯಭೇರಿ; ಸೋತ ಕಮಲ

US Elections 2024: ಟ್ರಂಪ್ ಜಯಭೇರಿ; ಸೋತ ಕಮಲ

- Advertisement -
- Advertisement -

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದ ಡೊನಾಲ್ಡ್‌ ಟ್ರಂಪ್, 2024ರ ಚುನಾವಣೆಯಲ್ಲಿ ವಿಜಯಿಯಾಗಿದ್ದು, ಶ್ವೇತಭವನಕ್ಕೆ ಮತ್ತೆ ಪುನರಾಗಮಿಸಲಿದ್ದಾರೆ. ತನ್ನ ಮೊದಲ ವಿಜಯ ಭಾಷಣದಲ್ಲಿ ಮಾತನಾಡಿದ ಟ್ರಂಪ್ “ನಾವು ತೀವ್ರ ಸುರಕ್ಷಿತ ಮತ್ತು ಸಮೃದ್ಧ ಅಮೇರಿಕಾ  ನಿರ್ಮಿಸುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ” ಎಂದು ಹೇಳಿದ್ದಾರೆ. US Elections 2024

ಅಧ್ಯಕ್ಷೀಯ ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಪರವಾಗಿ ಗಣನೀಯವಾಗಿ ಪ್ರಚಾರ ಮಾಡಿದ ಎಕ್ಸ್‌(ಟ್ವಿಟರ್) ಮಾಲಿಕ ಎಲೋನ್ ಮಸ್ಕ್‌ ಅವರನ್ನು ಟ್ರಂಪ್ ಭಾಷಣದಲ್ಲಿ ನೆನಪಿಸಿಕೊಂಡಿದ್ದಾರೆ. ಎಲೋನ್‌ ಮಸ್ಕ್ ಅವರು ರಿಪಬ್ಲಿಕ್ ಪಕ್ಷದ ಮುಖವಾಣಿಯಂತೆ X ಮತ್ತು ಅವರ ಖಾತೆಯನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಬೆಂಬಲಿಗರು “ಎಲೋನ್! ಎಲೋನ್!” ಎಂದು ಕೂಗಲು ಪ್ರಾರಂಭಿಸಿದಾಗ, “ಸ್ಟಾರ್ ಒಬ್ಬರು ಹುಟ್ಟಿದ್ದಾರೆ; ಎಲೋನ್ ಮಸ್ಕ್” ಎಂದು ಟ್ರಂಪ್ ಹೇಳಿದ್ದಾರೆ. ಜೊತೆಗೆ ಯುಎಫ್‌ಸಿಯ ಸಿಇಒ ಡಾನಾ ವೈಟ್ ಮತ್ತು ಪಾಡ್‌ಕಾಸ್ಟರ್ ಜೋ ರೋಗನ್ ಅವರ ಬೆಂಬಲಕ್ಕಾಗಿ ಕೂಡಾ ಟ್ರಂಪ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಮೆರಿಕದ ಎಲ್ಲಾ ರಾಜ್ಯಗಳಲ್ಲಿ ಬಿರುಸಿನ ಜಟಾಪಟಿ ನಡೆದಿದ್ದರೂ, ಸ್ವಿಂಗ್ ರಾಜ್ಯಗಳ ಬಹುತೇಕ ಮತದಾರರ ಮನಸ್ಸು ಗೆಲ್ಲಲು ಕಮಲಾ ಹ್ಯಾರಿಸ್‌ಗೆ ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಸ್ವಿಂಗ್ ರಾಜ್ಯಗಳ ಮತದಾರರು ಟ್ರಂಪ್ ಅವರ ಪರವಾಗಿ ಮತ ಹಾಕಿದ್ದಾರೆ. ಕಮಲಾ ಮತ್ತು ಟ್ರಂಪ್ ನಡುವಿನ ಸ್ಪರ್ಧೆಯು ವಿಶ್ವದಾದ್ಯಂತ ತೀವ್ರ ಕುತೂಹಲ ಹುಟ್ಟುಹಾಕಿತ್ತು. US Elections 2024

ತನ್ನ ಕೊನೆಯ ಭಾಷಣಗಳಲ್ಲಿ ಕಮಲಾ ಅವರು ಭರವಸೆ, ಏಕತೆ ಮತ್ತು ಮಹಿಳಾ ಹಕ್ಕುಗಳ ವಿಷಯಗಳನ್ನು ಒತ್ತಿಹೇಳಿದ್ದರು. ಅದಾಗ್ಯೂ ಮತದಾರರು ಅವರನ್ನು ಕೈ ಹಿಡಿಯಲಿಲ್ಲ. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಟ್ರಂಪ್ ಪ್ರಸ್ತುತ ಹ್ಯಾರಿಸ್ ವಿರುದ್ಧ 267-224 ಮುನ್ನಡೆ ಸಾಧಿಸಿದ್ದಾರೆ.

78 ವರ್ಷಗಳ ಟ್ರಂಪ್ ಜುಲೈನಲ್ಲಿ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಷನ್ (RNC)ನಲ್ಲಿ ಅಧ್ಯಕ್ಷೀಯ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಈ ಮೂಲಕ ಅಪರಾಧಕ್ಕಾಗಿ ಶಿಕ್ಷೆ ಅನುಭವಿಸಿದ ನಂತರ ಕೂಡಾ ಅಧ್ಯಕ್ಷೀಯ ಚುನಾವಣೆಗೆ ಆಯ್ಕೆಯಾದ ಮೊದಲ ಮಾಜಿ ಅಧ್ಯಕ್ಷರಾಗಿ ಅವರು ಹೊರಹೊಮ್ಮಿದ್ದಾರೆ.

ಕಮಲಾ ಹ್ಯಾರಿಸ್ ಅವರ ಔಪಚಾರಿಕ ಆಯ್ಕೆ ಆಗಸ್ಟ್ 2024 ರಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್‌ನಲ್ಲಿ ನಡೆಯಿತು. ಒಂದು ವೇಳೆ ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಅವರು ಗೆಲುವು ಕಂಡಿದ್ದರೆ, ಅವರು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರದ ಅಧ್ಯಕ್ಷೆಯಾಗಿ ಅಧಿಕಾರ ಪಡೆದ ಮೊದಲ ಕಪ್ಪು ಮತ್ತು ಏಷ್ಯನ್ ಮೂಲದ ಮೊದಲ ಮಹಿಳೆಯಾಗುತ್ತಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...