Homeಅಂತರಾಷ್ಟ್ರೀಯUS Elections 2024: ಟ್ರಂಪ್ ಜಯಭೇರಿ; ಸೋತ ಕಮಲ

US Elections 2024: ಟ್ರಂಪ್ ಜಯಭೇರಿ; ಸೋತ ಕಮಲ

- Advertisement -
- Advertisement -

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದ ಡೊನಾಲ್ಡ್‌ ಟ್ರಂಪ್, 2024ರ ಚುನಾವಣೆಯಲ್ಲಿ ವಿಜಯಿಯಾಗಿದ್ದು, ಶ್ವೇತಭವನಕ್ಕೆ ಮತ್ತೆ ಪುನರಾಗಮಿಸಲಿದ್ದಾರೆ. ತನ್ನ ಮೊದಲ ವಿಜಯ ಭಾಷಣದಲ್ಲಿ ಮಾತನಾಡಿದ ಟ್ರಂಪ್ “ನಾವು ತೀವ್ರ ಸುರಕ್ಷಿತ ಮತ್ತು ಸಮೃದ್ಧ ಅಮೇರಿಕಾ  ನಿರ್ಮಿಸುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ” ಎಂದು ಹೇಳಿದ್ದಾರೆ. US Elections 2024

ಅಧ್ಯಕ್ಷೀಯ ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಪರವಾಗಿ ಗಣನೀಯವಾಗಿ ಪ್ರಚಾರ ಮಾಡಿದ ಎಕ್ಸ್‌(ಟ್ವಿಟರ್) ಮಾಲಿಕ ಎಲೋನ್ ಮಸ್ಕ್‌ ಅವರನ್ನು ಟ್ರಂಪ್ ಭಾಷಣದಲ್ಲಿ ನೆನಪಿಸಿಕೊಂಡಿದ್ದಾರೆ. ಎಲೋನ್‌ ಮಸ್ಕ್ ಅವರು ರಿಪಬ್ಲಿಕ್ ಪಕ್ಷದ ಮುಖವಾಣಿಯಂತೆ X ಮತ್ತು ಅವರ ಖಾತೆಯನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಬೆಂಬಲಿಗರು “ಎಲೋನ್! ಎಲೋನ್!” ಎಂದು ಕೂಗಲು ಪ್ರಾರಂಭಿಸಿದಾಗ, “ಸ್ಟಾರ್ ಒಬ್ಬರು ಹುಟ್ಟಿದ್ದಾರೆ; ಎಲೋನ್ ಮಸ್ಕ್” ಎಂದು ಟ್ರಂಪ್ ಹೇಳಿದ್ದಾರೆ. ಜೊತೆಗೆ ಯುಎಫ್‌ಸಿಯ ಸಿಇಒ ಡಾನಾ ವೈಟ್ ಮತ್ತು ಪಾಡ್‌ಕಾಸ್ಟರ್ ಜೋ ರೋಗನ್ ಅವರ ಬೆಂಬಲಕ್ಕಾಗಿ ಕೂಡಾ ಟ್ರಂಪ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಮೆರಿಕದ ಎಲ್ಲಾ ರಾಜ್ಯಗಳಲ್ಲಿ ಬಿರುಸಿನ ಜಟಾಪಟಿ ನಡೆದಿದ್ದರೂ, ಸ್ವಿಂಗ್ ರಾಜ್ಯಗಳ ಬಹುತೇಕ ಮತದಾರರ ಮನಸ್ಸು ಗೆಲ್ಲಲು ಕಮಲಾ ಹ್ಯಾರಿಸ್‌ಗೆ ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಸ್ವಿಂಗ್ ರಾಜ್ಯಗಳ ಮತದಾರರು ಟ್ರಂಪ್ ಅವರ ಪರವಾಗಿ ಮತ ಹಾಕಿದ್ದಾರೆ. ಕಮಲಾ ಮತ್ತು ಟ್ರಂಪ್ ನಡುವಿನ ಸ್ಪರ್ಧೆಯು ವಿಶ್ವದಾದ್ಯಂತ ತೀವ್ರ ಕುತೂಹಲ ಹುಟ್ಟುಹಾಕಿತ್ತು. US Elections 2024

ತನ್ನ ಕೊನೆಯ ಭಾಷಣಗಳಲ್ಲಿ ಕಮಲಾ ಅವರು ಭರವಸೆ, ಏಕತೆ ಮತ್ತು ಮಹಿಳಾ ಹಕ್ಕುಗಳ ವಿಷಯಗಳನ್ನು ಒತ್ತಿಹೇಳಿದ್ದರು. ಅದಾಗ್ಯೂ ಮತದಾರರು ಅವರನ್ನು ಕೈ ಹಿಡಿಯಲಿಲ್ಲ. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಟ್ರಂಪ್ ಪ್ರಸ್ತುತ ಹ್ಯಾರಿಸ್ ವಿರುದ್ಧ 267-224 ಮುನ್ನಡೆ ಸಾಧಿಸಿದ್ದಾರೆ.

78 ವರ್ಷಗಳ ಟ್ರಂಪ್ ಜುಲೈನಲ್ಲಿ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಷನ್ (RNC)ನಲ್ಲಿ ಅಧ್ಯಕ್ಷೀಯ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಈ ಮೂಲಕ ಅಪರಾಧಕ್ಕಾಗಿ ಶಿಕ್ಷೆ ಅನುಭವಿಸಿದ ನಂತರ ಕೂಡಾ ಅಧ್ಯಕ್ಷೀಯ ಚುನಾವಣೆಗೆ ಆಯ್ಕೆಯಾದ ಮೊದಲ ಮಾಜಿ ಅಧ್ಯಕ್ಷರಾಗಿ ಅವರು ಹೊರಹೊಮ್ಮಿದ್ದಾರೆ.

ಕಮಲಾ ಹ್ಯಾರಿಸ್ ಅವರ ಔಪಚಾರಿಕ ಆಯ್ಕೆ ಆಗಸ್ಟ್ 2024 ರಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್‌ನಲ್ಲಿ ನಡೆಯಿತು. ಒಂದು ವೇಳೆ ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಅವರು ಗೆಲುವು ಕಂಡಿದ್ದರೆ, ಅವರು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರದ ಅಧ್ಯಕ್ಷೆಯಾಗಿ ಅಧಿಕಾರ ಪಡೆದ ಮೊದಲ ಕಪ್ಪು ಮತ್ತು ಏಷ್ಯನ್ ಮೂಲದ ಮೊದಲ ಮಹಿಳೆಯಾಗುತ್ತಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...