Homeಮುಖಪುಟಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಈ ನಾಲ್ವರು ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

- Advertisement -
- Advertisement -

ಅಮೆರಿಕಾ ಚುನಾವಣೆ ಫಲಿತಾಂಶದಲ್ಲಿ ಎಲ್ಲರ ಗಮನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಜೋ ಬಿಡೆನ್ ಮೇಲೆ ಕೇಂದ್ರಿಕರಿಸಿದೆ. ಆದರೆ ಇತ್ತ ಅಧ್ಯಕ್ಷರ ಆಯ್ಕೆಗೂ ಮುನ್ನ ಖುಷಿ ನೀಡುವ ಮತ್ತಷ್ಟು ಸುದ್ದಿಗಳಿವೆ. ಸಮಾಜದ ಲೈಂಗಿಕತೆ, ವರ್ಣಭೇದ ನೀತಿ, ಇಸ್ಲಾಮೋಫೋಬಿಯಾಗಳ ವಿರುದ್ಧ ಹೋರಾಡುತ್ತಾ, ಟೀಕೆ, ದಾಳಿಗಳನ್ನು ಎದುರಿಸಿದ ನಾಲ್ವರು ಪ್ರಗತಿಪರ ಮಹಿಳೆಯರು ಜಯಗಳಿಸಿದ್ದಾರೆ.

ಹೌದು, ಮಿನ್ನಿಯಾಪೊಲೀಸ್‌ನ ಇಲ್ಹಾನ್ ಒಮರ್, ನ್ಯೂಯಾರ್ಕ್‌ನ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್, ಮ್ಯಾಸಚೂಸೆಟ್ಸ್‌ನ ಅಯನ್ನಾ ಪ್ರೆಸ್ಲೆ, ಮತ್ತು ಮಿಚಿಗನ್‌ನ ರಶೀದಾ ಟ್ಲೈಬ್ ಎಲ್ಲರೂ  ಮರುಚುನಾವಣೆಯಲ್ಲಿ ವಿಜಯ ಸಾಧಿಸಿದ್ದಾರೆ.

ಈ ನಾಲ್ವರು ಕಾಂಗ್ರೆಸ್ ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

ಇದನ್ನೂ ಓದಿ: ಟ್ರಂಪ್ ನಡೆಸಿದ 18 ರ್ಯಾಲಿಗಳಿಂದ 30 ಸಾವಿರ ಜನರಿಗೆ ಸೋಂಕು, 700 ಸಾವು ಸಾಧ್ಯತೆ: ವರದಿ

ಡೆಮಾಕ್ರಟಿಕ್ ಪಕ್ಷದ ಎಒಸಿ ಎಂದೂ ಕರೆಯಲ್ಪಡುವ ಒಕಾಸಿಯೊ-ಕಾರ್ಟೆಜ್, ರಿಪಬ್ಲಿಕನ್ ಎದುರಾಳಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿ, ನ್ಯೂಯಾರ್ಕ್‌ನ 14 ನೇ ಜಿಲ್ಲೆಯಲ್ಲಿ 68.8% ಮತಗಳೊಂದಿಗೆ ಮರು ಆಯ್ಕೆಯಾಗಿದ್ದಾರೆ. 2018 ರಲ್ಲಿ ಎಒಸಿ ಸದನಕ್ಕೆ ಚುನಾಯಿತರಾದ ಅತ್ಯಂತ ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಎಒಸಿ ತಮ್ಮ ಪ್ರಗತಿಪರ ಸಿದ್ದಾಂತಗಳು ಮತ್ತು ಅಜೆಂಡಾವನ್ನು ಬಹಿರಂಗವಾಗಿ ಮಾತನಾಡಿದ್ದು, ಅವರ ಸಹೋದ್ಯೋಗಿಗಳು ಮತ್ತು ಸಂಪ್ರದಾಯವಾದಿ ಪತ್ರಿಕಾ ಮಾಧ್ಯಮಗಳನ್ನು ಕೆರಳಿಸಿತ್ತು. ಸದ್ಯ 31 ವರ್ಷದ ಒಕಾಸಿಯೊ-ಕಾರ್ಟೆಜ್, 60 ವರ್ಷದ ಕ್ಯಾಥೊಲಿಕ್ ಪ್ರೌಢಶಾಲಾ ಶಿಕ್ಷಕ, 10 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಹಣ ಸಂಪಾಡಿಸಿರುವ ರಿಪಬ್ಲಿಕನ್ ಅಭ್ಯರ್ಥಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿದ್ದಾರೆ.

ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ 64.6% ಮತಗಳೊಂದಿಗೆ ಮಿನ್ನೇಸೋಟದ 5 ನೇ ಕಾಂಗ್ರೆಸ್ ಜಿಲ್ಲೆಯಲ್ಲಿ ಇಲ್ಹಾನ್ ಒಮರ್ ಗೆಲುವು ಸಾಧಿಸಿದ್ದಾರೆ. ಬಾಲ್ಯದಲ್ಲಿ ಅಂತರ್ಯುದ್ಧದಿಂದ ಪಲಾಯನ ಮಾಡಿದ ಸೊಮಾಲಿ ನಿರಾಶ್ರಿತರಾಗಿದ್ದ ಒಮರ್, ಸದನಕ್ಕೆ ಚುನಾಯಿತರಾದ ಮೊದಲ ಸೊಮಾಲಿ ಅಮೆರಿಕನ್ ಎನಿಸಿಕೊಂಡಿದ್ದಾರೆ.

ಅವರು ತನ್ನ ಜನರ ಬಗ್ಗೆ, ತನ್ನ ಮಣ್ಣಿನ ಬಗ್ಗೆ ಬಹಿರಂಗವಾಗಿ ಮಾತನಾಡುವ ದೊಡ್ಡ ಧ್ವನಿಯಾಗಿದ್ದಾರೆ. ಜನಾಂಗೀಯ ಹಲ್ಲೆ ಮತ್ತು ವಲಸಿಗರ ಮೇಲೆ ನಡೆಯುವ ದಾಳಿಗಳ ಬಗ್ಗೆ ಮಾತನಾಡಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಇದನ್ನೆ ದಾಳವಾಗಿಸಿ ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ ಜಯಗಳಿಸಿದ್ದಾರೆ.

ಇದನ್ನೂ ಓದಿ: ಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

 

ಇನ್ನು ಮ್ಯಾಸಚೂಸೆಟ್ಸ್‌ನ 7 ನೇ ಜಿಲ್ಲೆಯ ಪಾದ್ರಿಯಾಗಿದ್ದ ಸ್ವತಂತ್ರ ಅಭ್ಯರ್ಥಿ ರಾಯ್ ಓವೆನ್ಸ್‌ರನ್ನು 87.5% ಮತಗಳನ್ನು ಪಡೆಯುವ ಮೂಲಕ ಪ್ರೆಸ್ಲೆ ಸೋಲಿಸಿದರು. ಕಪ್ಪು ಹುಡುಗಿಯರ ಮೇಲಾಗುವ ಅನ್ಯಾಯದ ಅಪರಾಧೀಕರಣವನ್ನು ಸರಿಪಡಿಸುವ ಯೋಜನೆಗಳ ಬಗ್ಗೆ ಅವರು ಗಮನಾರ್ಹವಾಗಿ ಮಾತನಾಡಿದ್ದಾರೆ ಮತ್ತು ಈ ಕುರಿತು ಪ್ರಸ್ತಾಪಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅವರು ಸ್ಪೂರ್ತಿದಾಯಕ ವೀಡಿಯೊವನ್ನು ಸಹ ಬಿಡುಗಡೆ ಮಾಡಿದರು, ಇದರಲ್ಲಿ ತಾವು ಬೋಳುತಲೆ(ಅಲೋಪೆಸಿಯಾ) ಹೊಂದಿರುವ ಕುರಿತು ವಿವರಿಸಿದ್ದರು.

ಮಿಚಿಗನ್‌ನ 13 ನೇ ಜಿಲ್ಲೆಯ ರಿಪಬ್ಲಿಕನ್ ಎದುರಾಳಿ ಡೇವಿಡ್ ಡುಡೆನ್‌ಹೋಫರ್ ವಿರುದ್ಧ ಟ್ಲೈಬ್ ಜಯಗಳಿಸಿದ್ದಾರೆ. ಟ್ಲೈಬ್, 2018 ರಲ್ಲಿ ಸದನದಲ್ಲಿ ಪ್ಯಾಲೇಸ್ಟಿನಿಯನ್ ಮೂಲದ ಮೊದಲ ಮಹಿಳೆ ಮತ್ತು ಒಮರ್ ಜೊತೆಗೆ  ಸದನಕ್ಕೆ ಆಯ್ಕೆಯಾದ ಮೊದಲ ಇಬ್ಬರು ಮುಸ್ಲಿಂ ಮಹಿಳೆಯರಲ್ಲಿ ಒಬ್ಬರಾಗಿದ್ದರು.

“ದಿ ಸ್ಕ್ವಾಡ್” ಎಂದು ಕರೆಸಿಕೊಳ್ಳುವ ಇವರ ಮೇಲೆ ಅಧ್ಯಕ್ಷ ಟ್ರಂಪ್ ಪದೇ ಪದೇ ಆಕ್ರಮಣ ಮಾಡಿದ್ದಾರೆ. ಈನಾಲ್ವರನ್ನು “ಎಒಸಿ ಪ್ಲಸ್ ತ್ರೀ” ಎಂದು ವ್ಯಂಗ್ಯವಾಡುತ್ತಾರೆ. ಕಳೆದ ವರ್ಷ, ಟ್ರಂಪ್ ಈ ನಾಲ್ವರು ಅಮೆರಿಕಾ ಪ್ರಜೆಗಳಾಗಿದ್ದರೂ ತಾವು ಬಂದ ದೇಶಗಳಿಗೆ ಹಿಂತಿರುಗಿ ಎಂದು ಹೇಳಿದ್ದರು.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಈ ನಾಲ್ವರೂ ಎಂದು ಸುಮ್ಮನೆ ಕುಳಿತವರಲ್ಲ. ತಮ್ಮ ತಮ್ಮ ವ್ಯಾಪ್ತಿಯಲ್ಲಿ, ವ್ಯಾಪ್ತಿಯ ಹೊರಗಡೆಯೂ ಅನ್ಯಾಯಗಳ ವಿರುದ್ಧ ಧ್ವನಿ ಮಾಡಿದವರು. ಲೈಂಗಿಕತೆ, ಇಸ್ಲಾಮೋಫೋಬಿಯಾ ಮತ್ತು ವರ್ಣಭೇದ ನೀತಿಯಿಂದ ಜೀನೋಫೋಬಿಯಾ (ವಲಸಿಗರ ಮೇಲೆ ದಾಳಿ) ವರೆಗಿನ ಬಗ್ಗೆ ಬಹಿರಂಗವಾಗಿ ಮಾತನಾಡಿವರು. ಈ ಕಾರಣಕ್ಕೆ ಅನೇಕ ದಾಳಿಗಳು ಮತ್ತು ಟೀಕೆಗಳನ್ನು ಎದುರಿಸಿದ್ದಾರೆ.

ಒಕಾಸಿಯೊ-ಕಾರ್ಟೆಜ್, ಈ ನಾಲ್ವರಲ್ಲಿ ಗಮನಾರ್ಹವಾದವರು. ತನ್ನ ಎಡಪಂಥೀಯ ರಾಜಕಾರಣಕ್ಕಾಗಿ ಸಂಪ್ರದಾಯವಾದಿಗಳಿಂದ ಕಟುಟೀಕೆ ಎದುರಿಸಿದವರು.

ಇನ್ನು ಈ ನಾಲ್ವರಲ್ಲಿ ಅಮೆರಿಕಾಕ್ಕೆ ಹೊರಗಡೆಯಿಂದ ಬಂದವರು ಇಲ್ಹಾನ್ ಒಮರ್ ಮಾತ್ರ. ಯುವತಿಯೊಬ್ಬಳು ವಲಸೆಗಾರರ ಬಗ್ಗೆ ಮತ್ತು ಇಸ್ಲಾಮೋಫೋಬಿಯಾ ಬಗ್ಗೆ ಸಾಕಷ್ಟು ಧ್ವನಿ ಎತ್ತಿದ್ದರಿಂದ ಈಕೆಯನ್ನು ಚಿಕ್ಕವಯಸ್ಸಿನಲ್ಲೇ ಅಮೆರಿಕಕ್ಕೆ ಕರೆತರಲಾಗಿತ್ತು.

ಅಮೆರಿಕಾ ಚುನಾವಣೆ ಅಧ್ಯಕ್ಷೀಯ ಚುನಾವಣಾ ಫಲಿತಾಂಶಕ್ಕಾಗಿ ಇಡೀ ವಿಶ್ವದ ಜನರೇ ಎದುರು ನೋಡುತ್ತಿದ್ದಾರೆ. ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡೆನ್ ವೈಟ್ ಹೌಸ್‌ನತ್ತ ಮುನ್ನುಗ್ಗುತ್ತಿದ್ದಾರೆ. ಆದರೆ ಪೂರ್ತಿ ಮತ ಏಣಿಕೆ ಮುಗಿರುವವರೆಗೂ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ.

ಅಮೆರಿಕಾ ಚುನಾವಣೆ ಫಲಿತಾಂಶ ಏನೇ ಇರಲಿ. ಕೆಲವು ಸ್ಥಳಗಳಲ್ಲಿನ ಮಹಿಳೆಯರ ಗೆಲುವು, ಹೋರಾಟಗಾರರು, ಅನ್ಯಾಯ ವಿರುದ್ಧ ದನಿ ಎತ್ತುವವರಿಗೆ ಹೊಸ ಭರವಸೆ ಮೂಡಿಸಿರುವುದು ಸುಳ್ಳಲ್ಲ.


ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...