Homeಮುಖಪುಟಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಈ ನಾಲ್ವರು ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

- Advertisement -
- Advertisement -

ಅಮೆರಿಕಾ ಚುನಾವಣೆ ಫಲಿತಾಂಶದಲ್ಲಿ ಎಲ್ಲರ ಗಮನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಜೋ ಬಿಡೆನ್ ಮೇಲೆ ಕೇಂದ್ರಿಕರಿಸಿದೆ. ಆದರೆ ಇತ್ತ ಅಧ್ಯಕ್ಷರ ಆಯ್ಕೆಗೂ ಮುನ್ನ ಖುಷಿ ನೀಡುವ ಮತ್ತಷ್ಟು ಸುದ್ದಿಗಳಿವೆ. ಸಮಾಜದ ಲೈಂಗಿಕತೆ, ವರ್ಣಭೇದ ನೀತಿ, ಇಸ್ಲಾಮೋಫೋಬಿಯಾಗಳ ವಿರುದ್ಧ ಹೋರಾಡುತ್ತಾ, ಟೀಕೆ, ದಾಳಿಗಳನ್ನು ಎದುರಿಸಿದ ನಾಲ್ವರು ಪ್ರಗತಿಪರ ಮಹಿಳೆಯರು ಜಯಗಳಿಸಿದ್ದಾರೆ.

ಹೌದು, ಮಿನ್ನಿಯಾಪೊಲೀಸ್‌ನ ಇಲ್ಹಾನ್ ಒಮರ್, ನ್ಯೂಯಾರ್ಕ್‌ನ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್, ಮ್ಯಾಸಚೂಸೆಟ್ಸ್‌ನ ಅಯನ್ನಾ ಪ್ರೆಸ್ಲೆ, ಮತ್ತು ಮಿಚಿಗನ್‌ನ ರಶೀದಾ ಟ್ಲೈಬ್ ಎಲ್ಲರೂ  ಮರುಚುನಾವಣೆಯಲ್ಲಿ ವಿಜಯ ಸಾಧಿಸಿದ್ದಾರೆ.

ಈ ನಾಲ್ವರು ಕಾಂಗ್ರೆಸ್ ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

ಇದನ್ನೂ ಓದಿ: ಟ್ರಂಪ್ ನಡೆಸಿದ 18 ರ್ಯಾಲಿಗಳಿಂದ 30 ಸಾವಿರ ಜನರಿಗೆ ಸೋಂಕು, 700 ಸಾವು ಸಾಧ್ಯತೆ: ವರದಿ

ಡೆಮಾಕ್ರಟಿಕ್ ಪಕ್ಷದ ಎಒಸಿ ಎಂದೂ ಕರೆಯಲ್ಪಡುವ ಒಕಾಸಿಯೊ-ಕಾರ್ಟೆಜ್, ರಿಪಬ್ಲಿಕನ್ ಎದುರಾಳಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿ, ನ್ಯೂಯಾರ್ಕ್‌ನ 14 ನೇ ಜಿಲ್ಲೆಯಲ್ಲಿ 68.8% ಮತಗಳೊಂದಿಗೆ ಮರು ಆಯ್ಕೆಯಾಗಿದ್ದಾರೆ. 2018 ರಲ್ಲಿ ಎಒಸಿ ಸದನಕ್ಕೆ ಚುನಾಯಿತರಾದ ಅತ್ಯಂತ ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಎಒಸಿ ತಮ್ಮ ಪ್ರಗತಿಪರ ಸಿದ್ದಾಂತಗಳು ಮತ್ತು ಅಜೆಂಡಾವನ್ನು ಬಹಿರಂಗವಾಗಿ ಮಾತನಾಡಿದ್ದು, ಅವರ ಸಹೋದ್ಯೋಗಿಗಳು ಮತ್ತು ಸಂಪ್ರದಾಯವಾದಿ ಪತ್ರಿಕಾ ಮಾಧ್ಯಮಗಳನ್ನು ಕೆರಳಿಸಿತ್ತು. ಸದ್ಯ 31 ವರ್ಷದ ಒಕಾಸಿಯೊ-ಕಾರ್ಟೆಜ್, 60 ವರ್ಷದ ಕ್ಯಾಥೊಲಿಕ್ ಪ್ರೌಢಶಾಲಾ ಶಿಕ್ಷಕ, 10 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಹಣ ಸಂಪಾಡಿಸಿರುವ ರಿಪಬ್ಲಿಕನ್ ಅಭ್ಯರ್ಥಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿದ್ದಾರೆ.

ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ 64.6% ಮತಗಳೊಂದಿಗೆ ಮಿನ್ನೇಸೋಟದ 5 ನೇ ಕಾಂಗ್ರೆಸ್ ಜಿಲ್ಲೆಯಲ್ಲಿ ಇಲ್ಹಾನ್ ಒಮರ್ ಗೆಲುವು ಸಾಧಿಸಿದ್ದಾರೆ. ಬಾಲ್ಯದಲ್ಲಿ ಅಂತರ್ಯುದ್ಧದಿಂದ ಪಲಾಯನ ಮಾಡಿದ ಸೊಮಾಲಿ ನಿರಾಶ್ರಿತರಾಗಿದ್ದ ಒಮರ್, ಸದನಕ್ಕೆ ಚುನಾಯಿತರಾದ ಮೊದಲ ಸೊಮಾಲಿ ಅಮೆರಿಕನ್ ಎನಿಸಿಕೊಂಡಿದ್ದಾರೆ.

ಅವರು ತನ್ನ ಜನರ ಬಗ್ಗೆ, ತನ್ನ ಮಣ್ಣಿನ ಬಗ್ಗೆ ಬಹಿರಂಗವಾಗಿ ಮಾತನಾಡುವ ದೊಡ್ಡ ಧ್ವನಿಯಾಗಿದ್ದಾರೆ. ಜನಾಂಗೀಯ ಹಲ್ಲೆ ಮತ್ತು ವಲಸಿಗರ ಮೇಲೆ ನಡೆಯುವ ದಾಳಿಗಳ ಬಗ್ಗೆ ಮಾತನಾಡಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಇದನ್ನೆ ದಾಳವಾಗಿಸಿ ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ ಜಯಗಳಿಸಿದ್ದಾರೆ.

ಇದನ್ನೂ ಓದಿ: ಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

 

ಇನ್ನು ಮ್ಯಾಸಚೂಸೆಟ್ಸ್‌ನ 7 ನೇ ಜಿಲ್ಲೆಯ ಪಾದ್ರಿಯಾಗಿದ್ದ ಸ್ವತಂತ್ರ ಅಭ್ಯರ್ಥಿ ರಾಯ್ ಓವೆನ್ಸ್‌ರನ್ನು 87.5% ಮತಗಳನ್ನು ಪಡೆಯುವ ಮೂಲಕ ಪ್ರೆಸ್ಲೆ ಸೋಲಿಸಿದರು. ಕಪ್ಪು ಹುಡುಗಿಯರ ಮೇಲಾಗುವ ಅನ್ಯಾಯದ ಅಪರಾಧೀಕರಣವನ್ನು ಸರಿಪಡಿಸುವ ಯೋಜನೆಗಳ ಬಗ್ಗೆ ಅವರು ಗಮನಾರ್ಹವಾಗಿ ಮಾತನಾಡಿದ್ದಾರೆ ಮತ್ತು ಈ ಕುರಿತು ಪ್ರಸ್ತಾಪಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅವರು ಸ್ಪೂರ್ತಿದಾಯಕ ವೀಡಿಯೊವನ್ನು ಸಹ ಬಿಡುಗಡೆ ಮಾಡಿದರು, ಇದರಲ್ಲಿ ತಾವು ಬೋಳುತಲೆ(ಅಲೋಪೆಸಿಯಾ) ಹೊಂದಿರುವ ಕುರಿತು ವಿವರಿಸಿದ್ದರು.

ಮಿಚಿಗನ್‌ನ 13 ನೇ ಜಿಲ್ಲೆಯ ರಿಪಬ್ಲಿಕನ್ ಎದುರಾಳಿ ಡೇವಿಡ್ ಡುಡೆನ್‌ಹೋಫರ್ ವಿರುದ್ಧ ಟ್ಲೈಬ್ ಜಯಗಳಿಸಿದ್ದಾರೆ. ಟ್ಲೈಬ್, 2018 ರಲ್ಲಿ ಸದನದಲ್ಲಿ ಪ್ಯಾಲೇಸ್ಟಿನಿಯನ್ ಮೂಲದ ಮೊದಲ ಮಹಿಳೆ ಮತ್ತು ಒಮರ್ ಜೊತೆಗೆ  ಸದನಕ್ಕೆ ಆಯ್ಕೆಯಾದ ಮೊದಲ ಇಬ್ಬರು ಮುಸ್ಲಿಂ ಮಹಿಳೆಯರಲ್ಲಿ ಒಬ್ಬರಾಗಿದ್ದರು.

“ದಿ ಸ್ಕ್ವಾಡ್” ಎಂದು ಕರೆಸಿಕೊಳ್ಳುವ ಇವರ ಮೇಲೆ ಅಧ್ಯಕ್ಷ ಟ್ರಂಪ್ ಪದೇ ಪದೇ ಆಕ್ರಮಣ ಮಾಡಿದ್ದಾರೆ. ಈನಾಲ್ವರನ್ನು “ಎಒಸಿ ಪ್ಲಸ್ ತ್ರೀ” ಎಂದು ವ್ಯಂಗ್ಯವಾಡುತ್ತಾರೆ. ಕಳೆದ ವರ್ಷ, ಟ್ರಂಪ್ ಈ ನಾಲ್ವರು ಅಮೆರಿಕಾ ಪ್ರಜೆಗಳಾಗಿದ್ದರೂ ತಾವು ಬಂದ ದೇಶಗಳಿಗೆ ಹಿಂತಿರುಗಿ ಎಂದು ಹೇಳಿದ್ದರು.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಈ ನಾಲ್ವರೂ ಎಂದು ಸುಮ್ಮನೆ ಕುಳಿತವರಲ್ಲ. ತಮ್ಮ ತಮ್ಮ ವ್ಯಾಪ್ತಿಯಲ್ಲಿ, ವ್ಯಾಪ್ತಿಯ ಹೊರಗಡೆಯೂ ಅನ್ಯಾಯಗಳ ವಿರುದ್ಧ ಧ್ವನಿ ಮಾಡಿದವರು. ಲೈಂಗಿಕತೆ, ಇಸ್ಲಾಮೋಫೋಬಿಯಾ ಮತ್ತು ವರ್ಣಭೇದ ನೀತಿಯಿಂದ ಜೀನೋಫೋಬಿಯಾ (ವಲಸಿಗರ ಮೇಲೆ ದಾಳಿ) ವರೆಗಿನ ಬಗ್ಗೆ ಬಹಿರಂಗವಾಗಿ ಮಾತನಾಡಿವರು. ಈ ಕಾರಣಕ್ಕೆ ಅನೇಕ ದಾಳಿಗಳು ಮತ್ತು ಟೀಕೆಗಳನ್ನು ಎದುರಿಸಿದ್ದಾರೆ.

ಒಕಾಸಿಯೊ-ಕಾರ್ಟೆಜ್, ಈ ನಾಲ್ವರಲ್ಲಿ ಗಮನಾರ್ಹವಾದವರು. ತನ್ನ ಎಡಪಂಥೀಯ ರಾಜಕಾರಣಕ್ಕಾಗಿ ಸಂಪ್ರದಾಯವಾದಿಗಳಿಂದ ಕಟುಟೀಕೆ ಎದುರಿಸಿದವರು.

ಇನ್ನು ಈ ನಾಲ್ವರಲ್ಲಿ ಅಮೆರಿಕಾಕ್ಕೆ ಹೊರಗಡೆಯಿಂದ ಬಂದವರು ಇಲ್ಹಾನ್ ಒಮರ್ ಮಾತ್ರ. ಯುವತಿಯೊಬ್ಬಳು ವಲಸೆಗಾರರ ಬಗ್ಗೆ ಮತ್ತು ಇಸ್ಲಾಮೋಫೋಬಿಯಾ ಬಗ್ಗೆ ಸಾಕಷ್ಟು ಧ್ವನಿ ಎತ್ತಿದ್ದರಿಂದ ಈಕೆಯನ್ನು ಚಿಕ್ಕವಯಸ್ಸಿನಲ್ಲೇ ಅಮೆರಿಕಕ್ಕೆ ಕರೆತರಲಾಗಿತ್ತು.

ಅಮೆರಿಕಾ ಚುನಾವಣೆ ಅಧ್ಯಕ್ಷೀಯ ಚುನಾವಣಾ ಫಲಿತಾಂಶಕ್ಕಾಗಿ ಇಡೀ ವಿಶ್ವದ ಜನರೇ ಎದುರು ನೋಡುತ್ತಿದ್ದಾರೆ. ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡೆನ್ ವೈಟ್ ಹೌಸ್‌ನತ್ತ ಮುನ್ನುಗ್ಗುತ್ತಿದ್ದಾರೆ. ಆದರೆ ಪೂರ್ತಿ ಮತ ಏಣಿಕೆ ಮುಗಿರುವವರೆಗೂ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ.

ಅಮೆರಿಕಾ ಚುನಾವಣೆ ಫಲಿತಾಂಶ ಏನೇ ಇರಲಿ. ಕೆಲವು ಸ್ಥಳಗಳಲ್ಲಿನ ಮಹಿಳೆಯರ ಗೆಲುವು, ಹೋರಾಟಗಾರರು, ಅನ್ಯಾಯ ವಿರುದ್ಧ ದನಿ ಎತ್ತುವವರಿಗೆ ಹೊಸ ಭರವಸೆ ಮೂಡಿಸಿರುವುದು ಸುಳ್ಳಲ್ಲ.


ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...