Homeಮುಖಪುಟಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಈ ನಾಲ್ವರು ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

- Advertisement -
- Advertisement -

ಅಮೆರಿಕಾ ಚುನಾವಣೆ ಫಲಿತಾಂಶದಲ್ಲಿ ಎಲ್ಲರ ಗಮನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಜೋ ಬಿಡೆನ್ ಮೇಲೆ ಕೇಂದ್ರಿಕರಿಸಿದೆ. ಆದರೆ ಇತ್ತ ಅಧ್ಯಕ್ಷರ ಆಯ್ಕೆಗೂ ಮುನ್ನ ಖುಷಿ ನೀಡುವ ಮತ್ತಷ್ಟು ಸುದ್ದಿಗಳಿವೆ. ಸಮಾಜದ ಲೈಂಗಿಕತೆ, ವರ್ಣಭೇದ ನೀತಿ, ಇಸ್ಲಾಮೋಫೋಬಿಯಾಗಳ ವಿರುದ್ಧ ಹೋರಾಡುತ್ತಾ, ಟೀಕೆ, ದಾಳಿಗಳನ್ನು ಎದುರಿಸಿದ ನಾಲ್ವರು ಪ್ರಗತಿಪರ ಮಹಿಳೆಯರು ಜಯಗಳಿಸಿದ್ದಾರೆ.

ಹೌದು, ಮಿನ್ನಿಯಾಪೊಲೀಸ್‌ನ ಇಲ್ಹಾನ್ ಒಮರ್, ನ್ಯೂಯಾರ್ಕ್‌ನ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್, ಮ್ಯಾಸಚೂಸೆಟ್ಸ್‌ನ ಅಯನ್ನಾ ಪ್ರೆಸ್ಲೆ, ಮತ್ತು ಮಿಚಿಗನ್‌ನ ರಶೀದಾ ಟ್ಲೈಬ್ ಎಲ್ಲರೂ  ಮರುಚುನಾವಣೆಯಲ್ಲಿ ವಿಜಯ ಸಾಧಿಸಿದ್ದಾರೆ.

ಈ ನಾಲ್ವರು ಕಾಂಗ್ರೆಸ್ ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

ಇದನ್ನೂ ಓದಿ: ಟ್ರಂಪ್ ನಡೆಸಿದ 18 ರ್ಯಾಲಿಗಳಿಂದ 30 ಸಾವಿರ ಜನರಿಗೆ ಸೋಂಕು, 700 ಸಾವು ಸಾಧ್ಯತೆ: ವರದಿ

ಡೆಮಾಕ್ರಟಿಕ್ ಪಕ್ಷದ ಎಒಸಿ ಎಂದೂ ಕರೆಯಲ್ಪಡುವ ಒಕಾಸಿಯೊ-ಕಾರ್ಟೆಜ್, ರಿಪಬ್ಲಿಕನ್ ಎದುರಾಳಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿ, ನ್ಯೂಯಾರ್ಕ್‌ನ 14 ನೇ ಜಿಲ್ಲೆಯಲ್ಲಿ 68.8% ಮತಗಳೊಂದಿಗೆ ಮರು ಆಯ್ಕೆಯಾಗಿದ್ದಾರೆ. 2018 ರಲ್ಲಿ ಎಒಸಿ ಸದನಕ್ಕೆ ಚುನಾಯಿತರಾದ ಅತ್ಯಂತ ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಎಒಸಿ ತಮ್ಮ ಪ್ರಗತಿಪರ ಸಿದ್ದಾಂತಗಳು ಮತ್ತು ಅಜೆಂಡಾವನ್ನು ಬಹಿರಂಗವಾಗಿ ಮಾತನಾಡಿದ್ದು, ಅವರ ಸಹೋದ್ಯೋಗಿಗಳು ಮತ್ತು ಸಂಪ್ರದಾಯವಾದಿ ಪತ್ರಿಕಾ ಮಾಧ್ಯಮಗಳನ್ನು ಕೆರಳಿಸಿತ್ತು. ಸದ್ಯ 31 ವರ್ಷದ ಒಕಾಸಿಯೊ-ಕಾರ್ಟೆಜ್, 60 ವರ್ಷದ ಕ್ಯಾಥೊಲಿಕ್ ಪ್ರೌಢಶಾಲಾ ಶಿಕ್ಷಕ, 10 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಹಣ ಸಂಪಾಡಿಸಿರುವ ರಿಪಬ್ಲಿಕನ್ ಅಭ್ಯರ್ಥಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿದ್ದಾರೆ.

ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ 64.6% ಮತಗಳೊಂದಿಗೆ ಮಿನ್ನೇಸೋಟದ 5 ನೇ ಕಾಂಗ್ರೆಸ್ ಜಿಲ್ಲೆಯಲ್ಲಿ ಇಲ್ಹಾನ್ ಒಮರ್ ಗೆಲುವು ಸಾಧಿಸಿದ್ದಾರೆ. ಬಾಲ್ಯದಲ್ಲಿ ಅಂತರ್ಯುದ್ಧದಿಂದ ಪಲಾಯನ ಮಾಡಿದ ಸೊಮಾಲಿ ನಿರಾಶ್ರಿತರಾಗಿದ್ದ ಒಮರ್, ಸದನಕ್ಕೆ ಚುನಾಯಿತರಾದ ಮೊದಲ ಸೊಮಾಲಿ ಅಮೆರಿಕನ್ ಎನಿಸಿಕೊಂಡಿದ್ದಾರೆ.

ಅವರು ತನ್ನ ಜನರ ಬಗ್ಗೆ, ತನ್ನ ಮಣ್ಣಿನ ಬಗ್ಗೆ ಬಹಿರಂಗವಾಗಿ ಮಾತನಾಡುವ ದೊಡ್ಡ ಧ್ವನಿಯಾಗಿದ್ದಾರೆ. ಜನಾಂಗೀಯ ಹಲ್ಲೆ ಮತ್ತು ವಲಸಿಗರ ಮೇಲೆ ನಡೆಯುವ ದಾಳಿಗಳ ಬಗ್ಗೆ ಮಾತನಾಡಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಇದನ್ನೆ ದಾಳವಾಗಿಸಿ ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ ಜಯಗಳಿಸಿದ್ದಾರೆ.

ಇದನ್ನೂ ಓದಿ: ಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

 

ಇನ್ನು ಮ್ಯಾಸಚೂಸೆಟ್ಸ್‌ನ 7 ನೇ ಜಿಲ್ಲೆಯ ಪಾದ್ರಿಯಾಗಿದ್ದ ಸ್ವತಂತ್ರ ಅಭ್ಯರ್ಥಿ ರಾಯ್ ಓವೆನ್ಸ್‌ರನ್ನು 87.5% ಮತಗಳನ್ನು ಪಡೆಯುವ ಮೂಲಕ ಪ್ರೆಸ್ಲೆ ಸೋಲಿಸಿದರು. ಕಪ್ಪು ಹುಡುಗಿಯರ ಮೇಲಾಗುವ ಅನ್ಯಾಯದ ಅಪರಾಧೀಕರಣವನ್ನು ಸರಿಪಡಿಸುವ ಯೋಜನೆಗಳ ಬಗ್ಗೆ ಅವರು ಗಮನಾರ್ಹವಾಗಿ ಮಾತನಾಡಿದ್ದಾರೆ ಮತ್ತು ಈ ಕುರಿತು ಪ್ರಸ್ತಾಪಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅವರು ಸ್ಪೂರ್ತಿದಾಯಕ ವೀಡಿಯೊವನ್ನು ಸಹ ಬಿಡುಗಡೆ ಮಾಡಿದರು, ಇದರಲ್ಲಿ ತಾವು ಬೋಳುತಲೆ(ಅಲೋಪೆಸಿಯಾ) ಹೊಂದಿರುವ ಕುರಿತು ವಿವರಿಸಿದ್ದರು.

ಮಿಚಿಗನ್‌ನ 13 ನೇ ಜಿಲ್ಲೆಯ ರಿಪಬ್ಲಿಕನ್ ಎದುರಾಳಿ ಡೇವಿಡ್ ಡುಡೆನ್‌ಹೋಫರ್ ವಿರುದ್ಧ ಟ್ಲೈಬ್ ಜಯಗಳಿಸಿದ್ದಾರೆ. ಟ್ಲೈಬ್, 2018 ರಲ್ಲಿ ಸದನದಲ್ಲಿ ಪ್ಯಾಲೇಸ್ಟಿನಿಯನ್ ಮೂಲದ ಮೊದಲ ಮಹಿಳೆ ಮತ್ತು ಒಮರ್ ಜೊತೆಗೆ  ಸದನಕ್ಕೆ ಆಯ್ಕೆಯಾದ ಮೊದಲ ಇಬ್ಬರು ಮುಸ್ಲಿಂ ಮಹಿಳೆಯರಲ್ಲಿ ಒಬ್ಬರಾಗಿದ್ದರು.

“ದಿ ಸ್ಕ್ವಾಡ್” ಎಂದು ಕರೆಸಿಕೊಳ್ಳುವ ಇವರ ಮೇಲೆ ಅಧ್ಯಕ್ಷ ಟ್ರಂಪ್ ಪದೇ ಪದೇ ಆಕ್ರಮಣ ಮಾಡಿದ್ದಾರೆ. ಈನಾಲ್ವರನ್ನು “ಎಒಸಿ ಪ್ಲಸ್ ತ್ರೀ” ಎಂದು ವ್ಯಂಗ್ಯವಾಡುತ್ತಾರೆ. ಕಳೆದ ವರ್ಷ, ಟ್ರಂಪ್ ಈ ನಾಲ್ವರು ಅಮೆರಿಕಾ ಪ್ರಜೆಗಳಾಗಿದ್ದರೂ ತಾವು ಬಂದ ದೇಶಗಳಿಗೆ ಹಿಂತಿರುಗಿ ಎಂದು ಹೇಳಿದ್ದರು.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಈ ನಾಲ್ವರೂ ಎಂದು ಸುಮ್ಮನೆ ಕುಳಿತವರಲ್ಲ. ತಮ್ಮ ತಮ್ಮ ವ್ಯಾಪ್ತಿಯಲ್ಲಿ, ವ್ಯಾಪ್ತಿಯ ಹೊರಗಡೆಯೂ ಅನ್ಯಾಯಗಳ ವಿರುದ್ಧ ಧ್ವನಿ ಮಾಡಿದವರು. ಲೈಂಗಿಕತೆ, ಇಸ್ಲಾಮೋಫೋಬಿಯಾ ಮತ್ತು ವರ್ಣಭೇದ ನೀತಿಯಿಂದ ಜೀನೋಫೋಬಿಯಾ (ವಲಸಿಗರ ಮೇಲೆ ದಾಳಿ) ವರೆಗಿನ ಬಗ್ಗೆ ಬಹಿರಂಗವಾಗಿ ಮಾತನಾಡಿವರು. ಈ ಕಾರಣಕ್ಕೆ ಅನೇಕ ದಾಳಿಗಳು ಮತ್ತು ಟೀಕೆಗಳನ್ನು ಎದುರಿಸಿದ್ದಾರೆ.

ಒಕಾಸಿಯೊ-ಕಾರ್ಟೆಜ್, ಈ ನಾಲ್ವರಲ್ಲಿ ಗಮನಾರ್ಹವಾದವರು. ತನ್ನ ಎಡಪಂಥೀಯ ರಾಜಕಾರಣಕ್ಕಾಗಿ ಸಂಪ್ರದಾಯವಾದಿಗಳಿಂದ ಕಟುಟೀಕೆ ಎದುರಿಸಿದವರು.

ಇನ್ನು ಈ ನಾಲ್ವರಲ್ಲಿ ಅಮೆರಿಕಾಕ್ಕೆ ಹೊರಗಡೆಯಿಂದ ಬಂದವರು ಇಲ್ಹಾನ್ ಒಮರ್ ಮಾತ್ರ. ಯುವತಿಯೊಬ್ಬಳು ವಲಸೆಗಾರರ ಬಗ್ಗೆ ಮತ್ತು ಇಸ್ಲಾಮೋಫೋಬಿಯಾ ಬಗ್ಗೆ ಸಾಕಷ್ಟು ಧ್ವನಿ ಎತ್ತಿದ್ದರಿಂದ ಈಕೆಯನ್ನು ಚಿಕ್ಕವಯಸ್ಸಿನಲ್ಲೇ ಅಮೆರಿಕಕ್ಕೆ ಕರೆತರಲಾಗಿತ್ತು.

ಅಮೆರಿಕಾ ಚುನಾವಣೆ ಅಧ್ಯಕ್ಷೀಯ ಚುನಾವಣಾ ಫಲಿತಾಂಶಕ್ಕಾಗಿ ಇಡೀ ವಿಶ್ವದ ಜನರೇ ಎದುರು ನೋಡುತ್ತಿದ್ದಾರೆ. ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡೆನ್ ವೈಟ್ ಹೌಸ್‌ನತ್ತ ಮುನ್ನುಗ್ಗುತ್ತಿದ್ದಾರೆ. ಆದರೆ ಪೂರ್ತಿ ಮತ ಏಣಿಕೆ ಮುಗಿರುವವರೆಗೂ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ.

ಅಮೆರಿಕಾ ಚುನಾವಣೆ ಫಲಿತಾಂಶ ಏನೇ ಇರಲಿ. ಕೆಲವು ಸ್ಥಳಗಳಲ್ಲಿನ ಮಹಿಳೆಯರ ಗೆಲುವು, ಹೋರಾಟಗಾರರು, ಅನ್ಯಾಯ ವಿರುದ್ಧ ದನಿ ಎತ್ತುವವರಿಗೆ ಹೊಸ ಭರವಸೆ ಮೂಡಿಸಿರುವುದು ಸುಳ್ಳಲ್ಲ.


ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...