Homeಮುಖಪುಟಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಈ ನಾಲ್ವರು ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

- Advertisement -
- Advertisement -

ಅಮೆರಿಕಾ ಚುನಾವಣೆ ಫಲಿತಾಂಶದಲ್ಲಿ ಎಲ್ಲರ ಗಮನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಜೋ ಬಿಡೆನ್ ಮೇಲೆ ಕೇಂದ್ರಿಕರಿಸಿದೆ. ಆದರೆ ಇತ್ತ ಅಧ್ಯಕ್ಷರ ಆಯ್ಕೆಗೂ ಮುನ್ನ ಖುಷಿ ನೀಡುವ ಮತ್ತಷ್ಟು ಸುದ್ದಿಗಳಿವೆ. ಸಮಾಜದ ಲೈಂಗಿಕತೆ, ವರ್ಣಭೇದ ನೀತಿ, ಇಸ್ಲಾಮೋಫೋಬಿಯಾಗಳ ವಿರುದ್ಧ ಹೋರಾಡುತ್ತಾ, ಟೀಕೆ, ದಾಳಿಗಳನ್ನು ಎದುರಿಸಿದ ನಾಲ್ವರು ಪ್ರಗತಿಪರ ಮಹಿಳೆಯರು ಜಯಗಳಿಸಿದ್ದಾರೆ.

ಹೌದು, ಮಿನ್ನಿಯಾಪೊಲೀಸ್‌ನ ಇಲ್ಹಾನ್ ಒಮರ್, ನ್ಯೂಯಾರ್ಕ್‌ನ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್, ಮ್ಯಾಸಚೂಸೆಟ್ಸ್‌ನ ಅಯನ್ನಾ ಪ್ರೆಸ್ಲೆ, ಮತ್ತು ಮಿಚಿಗನ್‌ನ ರಶೀದಾ ಟ್ಲೈಬ್ ಎಲ್ಲರೂ  ಮರುಚುನಾವಣೆಯಲ್ಲಿ ವಿಜಯ ಸಾಧಿಸಿದ್ದಾರೆ.

ಈ ನಾಲ್ವರು ಕಾಂಗ್ರೆಸ್ ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

ಇದನ್ನೂ ಓದಿ: ಟ್ರಂಪ್ ನಡೆಸಿದ 18 ರ್ಯಾಲಿಗಳಿಂದ 30 ಸಾವಿರ ಜನರಿಗೆ ಸೋಂಕು, 700 ಸಾವು ಸಾಧ್ಯತೆ: ವರದಿ

ಡೆಮಾಕ್ರಟಿಕ್ ಪಕ್ಷದ ಎಒಸಿ ಎಂದೂ ಕರೆಯಲ್ಪಡುವ ಒಕಾಸಿಯೊ-ಕಾರ್ಟೆಜ್, ರಿಪಬ್ಲಿಕನ್ ಎದುರಾಳಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿ, ನ್ಯೂಯಾರ್ಕ್‌ನ 14 ನೇ ಜಿಲ್ಲೆಯಲ್ಲಿ 68.8% ಮತಗಳೊಂದಿಗೆ ಮರು ಆಯ್ಕೆಯಾಗಿದ್ದಾರೆ. 2018 ರಲ್ಲಿ ಎಒಸಿ ಸದನಕ್ಕೆ ಚುನಾಯಿತರಾದ ಅತ್ಯಂತ ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಎಒಸಿ ತಮ್ಮ ಪ್ರಗತಿಪರ ಸಿದ್ದಾಂತಗಳು ಮತ್ತು ಅಜೆಂಡಾವನ್ನು ಬಹಿರಂಗವಾಗಿ ಮಾತನಾಡಿದ್ದು, ಅವರ ಸಹೋದ್ಯೋಗಿಗಳು ಮತ್ತು ಸಂಪ್ರದಾಯವಾದಿ ಪತ್ರಿಕಾ ಮಾಧ್ಯಮಗಳನ್ನು ಕೆರಳಿಸಿತ್ತು. ಸದ್ಯ 31 ವರ್ಷದ ಒಕಾಸಿಯೊ-ಕಾರ್ಟೆಜ್, 60 ವರ್ಷದ ಕ್ಯಾಥೊಲಿಕ್ ಪ್ರೌಢಶಾಲಾ ಶಿಕ್ಷಕ, 10 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಹಣ ಸಂಪಾಡಿಸಿರುವ ರಿಪಬ್ಲಿಕನ್ ಅಭ್ಯರ್ಥಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿದ್ದಾರೆ.

ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ 64.6% ಮತಗಳೊಂದಿಗೆ ಮಿನ್ನೇಸೋಟದ 5 ನೇ ಕಾಂಗ್ರೆಸ್ ಜಿಲ್ಲೆಯಲ್ಲಿ ಇಲ್ಹಾನ್ ಒಮರ್ ಗೆಲುವು ಸಾಧಿಸಿದ್ದಾರೆ. ಬಾಲ್ಯದಲ್ಲಿ ಅಂತರ್ಯುದ್ಧದಿಂದ ಪಲಾಯನ ಮಾಡಿದ ಸೊಮಾಲಿ ನಿರಾಶ್ರಿತರಾಗಿದ್ದ ಒಮರ್, ಸದನಕ್ಕೆ ಚುನಾಯಿತರಾದ ಮೊದಲ ಸೊಮಾಲಿ ಅಮೆರಿಕನ್ ಎನಿಸಿಕೊಂಡಿದ್ದಾರೆ.

ಅವರು ತನ್ನ ಜನರ ಬಗ್ಗೆ, ತನ್ನ ಮಣ್ಣಿನ ಬಗ್ಗೆ ಬಹಿರಂಗವಾಗಿ ಮಾತನಾಡುವ ದೊಡ್ಡ ಧ್ವನಿಯಾಗಿದ್ದಾರೆ. ಜನಾಂಗೀಯ ಹಲ್ಲೆ ಮತ್ತು ವಲಸಿಗರ ಮೇಲೆ ನಡೆಯುವ ದಾಳಿಗಳ ಬಗ್ಗೆ ಮಾತನಾಡಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಇದನ್ನೆ ದಾಳವಾಗಿಸಿ ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ ಜಯಗಳಿಸಿದ್ದಾರೆ.

ಇದನ್ನೂ ಓದಿ: ಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

 

ಇನ್ನು ಮ್ಯಾಸಚೂಸೆಟ್ಸ್‌ನ 7 ನೇ ಜಿಲ್ಲೆಯ ಪಾದ್ರಿಯಾಗಿದ್ದ ಸ್ವತಂತ್ರ ಅಭ್ಯರ್ಥಿ ರಾಯ್ ಓವೆನ್ಸ್‌ರನ್ನು 87.5% ಮತಗಳನ್ನು ಪಡೆಯುವ ಮೂಲಕ ಪ್ರೆಸ್ಲೆ ಸೋಲಿಸಿದರು. ಕಪ್ಪು ಹುಡುಗಿಯರ ಮೇಲಾಗುವ ಅನ್ಯಾಯದ ಅಪರಾಧೀಕರಣವನ್ನು ಸರಿಪಡಿಸುವ ಯೋಜನೆಗಳ ಬಗ್ಗೆ ಅವರು ಗಮನಾರ್ಹವಾಗಿ ಮಾತನಾಡಿದ್ದಾರೆ ಮತ್ತು ಈ ಕುರಿತು ಪ್ರಸ್ತಾಪಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅವರು ಸ್ಪೂರ್ತಿದಾಯಕ ವೀಡಿಯೊವನ್ನು ಸಹ ಬಿಡುಗಡೆ ಮಾಡಿದರು, ಇದರಲ್ಲಿ ತಾವು ಬೋಳುತಲೆ(ಅಲೋಪೆಸಿಯಾ) ಹೊಂದಿರುವ ಕುರಿತು ವಿವರಿಸಿದ್ದರು.

ಮಿಚಿಗನ್‌ನ 13 ನೇ ಜಿಲ್ಲೆಯ ರಿಪಬ್ಲಿಕನ್ ಎದುರಾಳಿ ಡೇವಿಡ್ ಡುಡೆನ್‌ಹೋಫರ್ ವಿರುದ್ಧ ಟ್ಲೈಬ್ ಜಯಗಳಿಸಿದ್ದಾರೆ. ಟ್ಲೈಬ್, 2018 ರಲ್ಲಿ ಸದನದಲ್ಲಿ ಪ್ಯಾಲೇಸ್ಟಿನಿಯನ್ ಮೂಲದ ಮೊದಲ ಮಹಿಳೆ ಮತ್ತು ಒಮರ್ ಜೊತೆಗೆ  ಸದನಕ್ಕೆ ಆಯ್ಕೆಯಾದ ಮೊದಲ ಇಬ್ಬರು ಮುಸ್ಲಿಂ ಮಹಿಳೆಯರಲ್ಲಿ ಒಬ್ಬರಾಗಿದ್ದರು.

“ದಿ ಸ್ಕ್ವಾಡ್” ಎಂದು ಕರೆಸಿಕೊಳ್ಳುವ ಇವರ ಮೇಲೆ ಅಧ್ಯಕ್ಷ ಟ್ರಂಪ್ ಪದೇ ಪದೇ ಆಕ್ರಮಣ ಮಾಡಿದ್ದಾರೆ. ಈನಾಲ್ವರನ್ನು “ಎಒಸಿ ಪ್ಲಸ್ ತ್ರೀ” ಎಂದು ವ್ಯಂಗ್ಯವಾಡುತ್ತಾರೆ. ಕಳೆದ ವರ್ಷ, ಟ್ರಂಪ್ ಈ ನಾಲ್ವರು ಅಮೆರಿಕಾ ಪ್ರಜೆಗಳಾಗಿದ್ದರೂ ತಾವು ಬಂದ ದೇಶಗಳಿಗೆ ಹಿಂತಿರುಗಿ ಎಂದು ಹೇಳಿದ್ದರು.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಈ ನಾಲ್ವರೂ ಎಂದು ಸುಮ್ಮನೆ ಕುಳಿತವರಲ್ಲ. ತಮ್ಮ ತಮ್ಮ ವ್ಯಾಪ್ತಿಯಲ್ಲಿ, ವ್ಯಾಪ್ತಿಯ ಹೊರಗಡೆಯೂ ಅನ್ಯಾಯಗಳ ವಿರುದ್ಧ ಧ್ವನಿ ಮಾಡಿದವರು. ಲೈಂಗಿಕತೆ, ಇಸ್ಲಾಮೋಫೋಬಿಯಾ ಮತ್ತು ವರ್ಣಭೇದ ನೀತಿಯಿಂದ ಜೀನೋಫೋಬಿಯಾ (ವಲಸಿಗರ ಮೇಲೆ ದಾಳಿ) ವರೆಗಿನ ಬಗ್ಗೆ ಬಹಿರಂಗವಾಗಿ ಮಾತನಾಡಿವರು. ಈ ಕಾರಣಕ್ಕೆ ಅನೇಕ ದಾಳಿಗಳು ಮತ್ತು ಟೀಕೆಗಳನ್ನು ಎದುರಿಸಿದ್ದಾರೆ.

ಒಕಾಸಿಯೊ-ಕಾರ್ಟೆಜ್, ಈ ನಾಲ್ವರಲ್ಲಿ ಗಮನಾರ್ಹವಾದವರು. ತನ್ನ ಎಡಪಂಥೀಯ ರಾಜಕಾರಣಕ್ಕಾಗಿ ಸಂಪ್ರದಾಯವಾದಿಗಳಿಂದ ಕಟುಟೀಕೆ ಎದುರಿಸಿದವರು.

ಇನ್ನು ಈ ನಾಲ್ವರಲ್ಲಿ ಅಮೆರಿಕಾಕ್ಕೆ ಹೊರಗಡೆಯಿಂದ ಬಂದವರು ಇಲ್ಹಾನ್ ಒಮರ್ ಮಾತ್ರ. ಯುವತಿಯೊಬ್ಬಳು ವಲಸೆಗಾರರ ಬಗ್ಗೆ ಮತ್ತು ಇಸ್ಲಾಮೋಫೋಬಿಯಾ ಬಗ್ಗೆ ಸಾಕಷ್ಟು ಧ್ವನಿ ಎತ್ತಿದ್ದರಿಂದ ಈಕೆಯನ್ನು ಚಿಕ್ಕವಯಸ್ಸಿನಲ್ಲೇ ಅಮೆರಿಕಕ್ಕೆ ಕರೆತರಲಾಗಿತ್ತು.

ಅಮೆರಿಕಾ ಚುನಾವಣೆ ಅಧ್ಯಕ್ಷೀಯ ಚುನಾವಣಾ ಫಲಿತಾಂಶಕ್ಕಾಗಿ ಇಡೀ ವಿಶ್ವದ ಜನರೇ ಎದುರು ನೋಡುತ್ತಿದ್ದಾರೆ. ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡೆನ್ ವೈಟ್ ಹೌಸ್‌ನತ್ತ ಮುನ್ನುಗ್ಗುತ್ತಿದ್ದಾರೆ. ಆದರೆ ಪೂರ್ತಿ ಮತ ಏಣಿಕೆ ಮುಗಿರುವವರೆಗೂ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ.

ಅಮೆರಿಕಾ ಚುನಾವಣೆ ಫಲಿತಾಂಶ ಏನೇ ಇರಲಿ. ಕೆಲವು ಸ್ಥಳಗಳಲ್ಲಿನ ಮಹಿಳೆಯರ ಗೆಲುವು, ಹೋರಾಟಗಾರರು, ಅನ್ಯಾಯ ವಿರುದ್ಧ ದನಿ ಎತ್ತುವವರಿಗೆ ಹೊಸ ಭರವಸೆ ಮೂಡಿಸಿರುವುದು ಸುಳ್ಳಲ್ಲ.


ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....