Homeಅಂತರಾಷ್ಟ್ರೀಯಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಮುಂದಿನ ಎರಡು ವಾರಗಳಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಲಿದ್ದಾರೆ ಎಂದು ಶ್ವೇತಭವನ ಗುರುವಾರ ತಿಳಿಸಿದೆ. ಇರಾನ್‌ ಮೇಲೆ ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಗಳಿಗೆ ಅಮೆರಿಕ ಸೇರಲಿದೆ ಎಂಬ ಊಹಾಪೋಹಗಳ ನಡುವೆ ಈ ಹೇಳಿಕೆ ಹೊರಬಿದ್ದಿದೆ. ಇಸ್ರೇಲ್-ಇರಾನ್ ಯುದ್ಧಕ್ಕೆ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು, ಟ್ರಂಪ್ ಅವರ ಸಂದೇಶವನ್ನು ಉಲ್ಲೇಖಿಸುತ್ತಾ,“ಮುಂದಿನ ದಿನಗಳಲ್ಲಿ ಇರಾನ್‌ನೊಂದಿಗೆ ಮಾತುಕತೆಗಳು ನಡೆಯಬಹುದೇ ಅಥವಾ ಇಲ್ಲವೇ ಎಂಬುದರ ಗಣನೀಯ ಅವಕಾಶವಿದೆ ಎಂಬ ಅಂಶದ ಆಧಾರದ ಮೇಲೆ, ಮುಂದಿನ ಎರಡು ವಾರಗಳಲ್ಲಿ ಈ ಸಂಘರ್ಷದಲ್ಲಿ ತೊಡಗಿಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ನಾನು ನಿರ್ಧರಿಸುತ್ತೇನೆ.” ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸದಂತೆ ನೋಡಿಕೊಳ್ಳುವುದು ಅಧ್ಯಕ್ಷ ಟ್ರಂಪ್ ಅವರ ಆದ್ಯತೆಯಾಗಿತ್ತು ಎಂದು ಲೀವಿಟ್ ಹೇಳಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುವ ಹಂತಕ್ಕೆ “ಎಂದಿಗೂ ಬಂದಿಲ್ಲ” ಎಂದು ಅಮೆರಿಕದ ಆಡಳಿತ ಹೇಳಿದೆ ಎಂದು ಬಿಬಿಸಿ ವರದಿ ಮಾಡಿದೆ.

ಬುಧವಾರವಷ್ಟೆ ಇಸ್ರೇಲ್ – ಇರಾನ್‌ ಸಂಘರ್ಷದಲ್ಲಿ ಪಾಲ್ಗೊಳ್ಳುವಿಕೆಯ ಯೋಜನೆಗಳನ್ನು ದೃಢೀಕರಿಸಲು ಟ್ರಂಪ್ ನಿರಾಕರಿಸಿದ್ದರು. “ನಾನು ಅದನ್ನು ಮಾಡಬಹುದು, ಅದನ್ನು ಮಾಡದೆಯು ಇರಬಹುದು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದರು.

“ನಾನು ಏನು ಮಾಡಲಿದ್ದೇನೆಂದು ಯಾರಿಗೂ ತಿಳಿದಿಲ್ಲ. ನಾನು ನಿಮಗೆ ಒಂದು ಮಾತ್ರ ಹೇಳಬಲ್ಲೆ, ಇರಾನ್ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಿದ್ದು, ಅವರು ಮಾತುಕತೆ ನಡೆಸಲು ಬಯಸುತ್ತಾರೆ.” ಎಂದು ಟ್ರಂಪ್ ಹೇಳಿದ್ದರು. ಅಮೆರಿಕವು ಇಸ್ರೇಲ್‌ನ ಮಿತ್ರ ರಾಷ್ಟ್ರವಾಗಿದ್ದು, ಇಸ್ರೇಲ್‌ನ ಭದ್ರತೆಗಾಗಿ ಅಮೆರಿಕ ಕಾರ್ಯನಿರ್ವಹಿಸುತ್ತದೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ಹೇಳಿಕೆ ನೀಡಿದ ಗಂಟೆಗಳ ನಂತರ, ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಇರಾನ್‌ನ ಉಪ ವಿದೇಶಾಂಗ ಸಚಿವ ಸಯೀದ್ ಖತೀಬ್ಜಾದೆಹ್, ಅಮೆರಿಕ ಈ ಯುದ್ಧದಲ್ಲಿ ಭಾಗಿಯಾಗಿದರೆ ಪಶ್ಚಿಮ ಏಷ್ಯಾದಲ್ಲಿ “ನರಕ” ಉಂಟಾಗುತ್ತದೆ ಎಂದು ಬಿಬಿಸಿಗೆ ತಿಳಿಸಿದ್ದಾರೆ. “ಇದು ಅಮೆರಿಕದ ಯುದ್ಧವಲ್ಲ” ಎಂದು ಖತೀಬ್ಜಾದೆಹ್ ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ವಾಯು ದಾಳಿ ಮುಂದುವರಿದಂತೆ ಈ ಬೆಳವಣಿಗೆಗಳು ಸಂಭವಿಸಿವೆ.

ಗುರುವಾರ, ಇಸ್ರೇಲ್ ಸೇನೆಯು ಇರಾನ್‌ನಲ್ಲಿರುವ ಅರಾಕ್ ಪರಮಾಣು ರಿಯಾಕ್ಟರ್ ಅನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದು, ನಟಂಜ್ ಪ್ರದೇಶದಲ್ಲಿ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿ ತಾಣ ಎಂದು ಹೇಳಿಕೊಂಡಿದ್ದನ್ನು ಹೊಡೆದುರುಳಿಸಿದ್ದಾಗಿ ಎಂದು ಘೋಷಿಸಿದೆ. ಅದಾಗ್ಯೂ, ಅರಾಕ್ ಕೇಂದ್ರವು ಭಾಗಶಃ ನಿರ್ಮಿಸಲಾದ ಭಾರ-ನೀರಿನ ಸಂಶೋಧನಾ ರಿಯಾಕ್ಟರ್ ಆಗಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಅಲ್ಲಿನ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಈ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಕ್ಕೆ ಕಾರಣವಾಗಿವೆ.

ಜೂನ್ 15 ರಂದು, ಸಂಘರ್ಷದಲ್ಲಿ 224 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಹೇಳಿತ್ತು. ಆದಾಗ್ಯೂ, ಅಮೆರಿಕ ಮೂಲದ ಮಾನವ ಹಕ್ಕುಗಳ ಹೋರಾಟಗಾರರು ಇಸ್ರೇಲಿ ದಾಳಿಗಳು ಇರಾನ್‌ನಲ್ಲಿ ಕನಿಷ್ಠ 657 ಜನರನ್ನು ಕೊಂದಿವೆ ಮತ್ತು ಇಲ್ಲಿಯವರೆಗೆ 2,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಇರಾನ್‌ನ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಇಲ್ಲಿಯವರೆಗೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಇಸ್ರೇಲ್-ಇರಾನ್ ಯುದ್ಧಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ

ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...