Homeಅಂತರಾಷ್ಟ್ರೀಯಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಮುಂದಿನ ಎರಡು ವಾರಗಳಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಲಿದ್ದಾರೆ ಎಂದು ಶ್ವೇತಭವನ ಗುರುವಾರ ತಿಳಿಸಿದೆ. ಇರಾನ್‌ ಮೇಲೆ ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಗಳಿಗೆ ಅಮೆರಿಕ ಸೇರಲಿದೆ ಎಂಬ ಊಹಾಪೋಹಗಳ ನಡುವೆ ಈ ಹೇಳಿಕೆ ಹೊರಬಿದ್ದಿದೆ. ಇಸ್ರೇಲ್-ಇರಾನ್ ಯುದ್ಧಕ್ಕೆ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು, ಟ್ರಂಪ್ ಅವರ ಸಂದೇಶವನ್ನು ಉಲ್ಲೇಖಿಸುತ್ತಾ,“ಮುಂದಿನ ದಿನಗಳಲ್ಲಿ ಇರಾನ್‌ನೊಂದಿಗೆ ಮಾತುಕತೆಗಳು ನಡೆಯಬಹುದೇ ಅಥವಾ ಇಲ್ಲವೇ ಎಂಬುದರ ಗಣನೀಯ ಅವಕಾಶವಿದೆ ಎಂಬ ಅಂಶದ ಆಧಾರದ ಮೇಲೆ, ಮುಂದಿನ ಎರಡು ವಾರಗಳಲ್ಲಿ ಈ ಸಂಘರ್ಷದಲ್ಲಿ ತೊಡಗಿಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ನಾನು ನಿರ್ಧರಿಸುತ್ತೇನೆ.” ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸದಂತೆ ನೋಡಿಕೊಳ್ಳುವುದು ಅಧ್ಯಕ್ಷ ಟ್ರಂಪ್ ಅವರ ಆದ್ಯತೆಯಾಗಿತ್ತು ಎಂದು ಲೀವಿಟ್ ಹೇಳಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುವ ಹಂತಕ್ಕೆ “ಎಂದಿಗೂ ಬಂದಿಲ್ಲ” ಎಂದು ಅಮೆರಿಕದ ಆಡಳಿತ ಹೇಳಿದೆ ಎಂದು ಬಿಬಿಸಿ ವರದಿ ಮಾಡಿದೆ.

ಬುಧವಾರವಷ್ಟೆ ಇಸ್ರೇಲ್ – ಇರಾನ್‌ ಸಂಘರ್ಷದಲ್ಲಿ ಪಾಲ್ಗೊಳ್ಳುವಿಕೆಯ ಯೋಜನೆಗಳನ್ನು ದೃಢೀಕರಿಸಲು ಟ್ರಂಪ್ ನಿರಾಕರಿಸಿದ್ದರು. “ನಾನು ಅದನ್ನು ಮಾಡಬಹುದು, ಅದನ್ನು ಮಾಡದೆಯು ಇರಬಹುದು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದರು.

“ನಾನು ಏನು ಮಾಡಲಿದ್ದೇನೆಂದು ಯಾರಿಗೂ ತಿಳಿದಿಲ್ಲ. ನಾನು ನಿಮಗೆ ಒಂದು ಮಾತ್ರ ಹೇಳಬಲ್ಲೆ, ಇರಾನ್ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಿದ್ದು, ಅವರು ಮಾತುಕತೆ ನಡೆಸಲು ಬಯಸುತ್ತಾರೆ.” ಎಂದು ಟ್ರಂಪ್ ಹೇಳಿದ್ದರು. ಅಮೆರಿಕವು ಇಸ್ರೇಲ್‌ನ ಮಿತ್ರ ರಾಷ್ಟ್ರವಾಗಿದ್ದು, ಇಸ್ರೇಲ್‌ನ ಭದ್ರತೆಗಾಗಿ ಅಮೆರಿಕ ಕಾರ್ಯನಿರ್ವಹಿಸುತ್ತದೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ಹೇಳಿಕೆ ನೀಡಿದ ಗಂಟೆಗಳ ನಂತರ, ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಇರಾನ್‌ನ ಉಪ ವಿದೇಶಾಂಗ ಸಚಿವ ಸಯೀದ್ ಖತೀಬ್ಜಾದೆಹ್, ಅಮೆರಿಕ ಈ ಯುದ್ಧದಲ್ಲಿ ಭಾಗಿಯಾಗಿದರೆ ಪಶ್ಚಿಮ ಏಷ್ಯಾದಲ್ಲಿ “ನರಕ” ಉಂಟಾಗುತ್ತದೆ ಎಂದು ಬಿಬಿಸಿಗೆ ತಿಳಿಸಿದ್ದಾರೆ. “ಇದು ಅಮೆರಿಕದ ಯುದ್ಧವಲ್ಲ” ಎಂದು ಖತೀಬ್ಜಾದೆಹ್ ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ವಾಯು ದಾಳಿ ಮುಂದುವರಿದಂತೆ ಈ ಬೆಳವಣಿಗೆಗಳು ಸಂಭವಿಸಿವೆ.

ಗುರುವಾರ, ಇಸ್ರೇಲ್ ಸೇನೆಯು ಇರಾನ್‌ನಲ್ಲಿರುವ ಅರಾಕ್ ಪರಮಾಣು ರಿಯಾಕ್ಟರ್ ಅನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದು, ನಟಂಜ್ ಪ್ರದೇಶದಲ್ಲಿ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿ ತಾಣ ಎಂದು ಹೇಳಿಕೊಂಡಿದ್ದನ್ನು ಹೊಡೆದುರುಳಿಸಿದ್ದಾಗಿ ಎಂದು ಘೋಷಿಸಿದೆ. ಅದಾಗ್ಯೂ, ಅರಾಕ್ ಕೇಂದ್ರವು ಭಾಗಶಃ ನಿರ್ಮಿಸಲಾದ ಭಾರ-ನೀರಿನ ಸಂಶೋಧನಾ ರಿಯಾಕ್ಟರ್ ಆಗಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಅಲ್ಲಿನ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಈ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಕ್ಕೆ ಕಾರಣವಾಗಿವೆ.

ಜೂನ್ 15 ರಂದು, ಸಂಘರ್ಷದಲ್ಲಿ 224 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಹೇಳಿತ್ತು. ಆದಾಗ್ಯೂ, ಅಮೆರಿಕ ಮೂಲದ ಮಾನವ ಹಕ್ಕುಗಳ ಹೋರಾಟಗಾರರು ಇಸ್ರೇಲಿ ದಾಳಿಗಳು ಇರಾನ್‌ನಲ್ಲಿ ಕನಿಷ್ಠ 657 ಜನರನ್ನು ಕೊಂದಿವೆ ಮತ್ತು ಇಲ್ಲಿಯವರೆಗೆ 2,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಇರಾನ್‌ನ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಇಲ್ಲಿಯವರೆಗೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಇಸ್ರೇಲ್-ಇರಾನ್ ಯುದ್ಧಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ

ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...