Homeಅಂತರಾಷ್ಟ್ರೀಯಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌ಗೆ 26 ಬಿಲಿಯನ್‌ ನೆರವು ಪ್ಯಾಕೇಜ್‌ ಅನುಮೋದಿಸಿದ ಅಮೆರಿಕ

ಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌ಗೆ 26 ಬಿಲಿಯನ್‌ ನೆರವು ಪ್ಯಾಕೇಜ್‌ ಅನುಮೋದಿಸಿದ ಅಮೆರಿಕ

- Advertisement -
- Advertisement -

ಗಾಝಾದಲ್ಲಿ ಮಕ್ಕಳು, ಮಹಿಳೆಯರ ಸೇರಿದಂತೆ ಸಾವಿರಾರು ಮಂದಿಯ ಹತ್ಯಾಕಾಂಡವನ್ನು ನಡೆಸಿ ಕ್ರೌರ್ಯವನ್ನು ಮೆರೆದಿದ್ದ ಇಸ್ರೇಲ್‌ಗೆ ನೆರವು ನೀಡುವುದನ್ನು ಅಮೆರಿಕ ಮುಂದುವರಿಸಿದ್ದು, ಇಸ್ರೇಲ್‌ಗೆ 26 ಬಿಲಿಯನ್‌ ಮೌಲ್ಯದ ನೆರವು ಪ್ಯಾಕೇಜ್‌ನ್ನು ಅಮೆರಿಕ ಅನುಮೋದಿಸಿದೆ ಎಂದು ವರದಿಯಾಗಿದೆ.

ಗಾಝಾದ ಮೇಲೆ ದಾಳಿ ನಡೆಸಲು ಅಮೆರಿಕ ಈ ಮೊದಲು ಇಸ್ರೇಲ್‌ಗೆ ಯುದ್ಧ ವಿಮಾನಗಳು ಮತ್ತು ಶಸ್ತ್ರಾಸ್ತ್ರವನ್ನು ಕಳುಹಿಸಿಕೊಟ್ಟಿತ್ತು. ಇದಕ್ಕೆ ಅಂತರಾಷ್ಟ್ರೀಯ ಸಮುದಾಯ ಸೇರಿದಂತೆ ಅಮೆರಿಕದ ಪ್ರಜೆಗಳೇ ಬೈಡನ್‌ಗೆ ವಿರೋಧವನ್ನು ವ್ಯಕ್ತಪಡಿಸಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುವ ಇಸ್ರೇಲ್‌ಗೆ ಬೆಂಬಲಿಸದಂತೆ ಅಮೆರಿಕದಲ್ಲಿ ಪ್ರತಿಭಟನೆ ನಡೆದಿದ್ದವು, ಆದರೆ ಇದೀಗ ಮತ್ತೆ ಇಸ್ರೇಲ್‌ಗೆ ಅಮೆರಿಕ ನೆರವನ್ನು ಘೋಷಿಸಿದೆ.

ಇಸ್ರೇಲ್‌ ಗಾಝಾ ಮೇಲೆ ದಾಳಿ ನಡೆಸಿ ಕಳೆದ ಆರು ತಿಂಗಳಲ್ಲಿ ನಡೆಸಿದ ಹತ್ಯಾಕಾಂಡಕ್ಕೆ 34,000ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದೀಗ ಗಾಝಾದಲ್ಲಿನ ತುರ್ತು ಸೇವಾ ಘಟಕಗಳು ಖಾನ್ ಯೂನಿಸ್‌ನಲ್ಲಿರುವ ನಾಸರ್ ವೈದ್ಯಕೀಯ ಸಂಕೀರ್ಣದಲ್ಲಿರುವ ಅವಶೇಷಗಳಡಿಯಿಂದ 50 ಪ್ಯಾಲೆಸ್ತೀನ್‌ ನಾಗರಿಕರ ಶವಗಳನ್ನು ವಶಪಡಿಸಿಕೊಂಡಿದೆ.

ಗಾಝಾದ ದಕ್ಷಿಣದ ನಗರವಾದ ರಫಾದ ಮೇಲೆ ಇಸ್ರೇಲ್‌ ದಾಳಿಯ ನಂತರ ಕೊಲ್ಲಲ್ಪಟ್ಟ ಎಂಟು ಪ್ಯಾಲೆಸ್ತೀನಿಯಾದವರಲ್ಲಿ ಓರ್ವ ಗರ್ಭಿಣಿ ಮಹಿಳೆ ಮತ್ತು ಆರು ಮಕ್ಕಳು ಸೇರಿದ್ದಾರೆ. ಮಹಿಳೆಯ ಗರ್ಭದಲ್ಲಿರುವ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ನೂರ್ ಶಮ್ಸ್ ನಿರಾಶ್ರಿತರ ಶಿಬಿರದ ಮೇಲೆ ದಾಳಿಯ ಸಮಯದಲ್ಲಿ ಇಸ್ರೇಲ್‌ ಪಡೆಗಳು 14 ಜನರನ್ನು ಕೊಂದಿವೆ ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ, ನಬ್ಲಸ್‌ನ ದಕ್ಷಿಣಕ್ಕೆ ಹಿಂಸಾಚಾರದಲ್ಲಿ ಗಾಯಗೊಂಡ ಪ್ಯಾಲೆಸ್ತೀನಿಯನ್ನರನ್ನು ತಲುಪಲು ಪ್ರಯತ್ನಿಸುತ್ತಿದ್ದ ಆಂಬ್ಯುಲೆನ್ಸ್ ಚಾಲಕನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಇಸ್ರೇಲ್‌ ಪಡೆಗಳು. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ತುಲ್ಕರೆಮ್‌ನಲ್ಲಿರುವ ನೂರ್ ಶಮ್ಸ್ ನಿರಾಶ್ರಿತರ ಶಿಬಿರದ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದೆ. ರಫಾ ನಗರದ ಮಧ್ಯಭಾಗದಲ್ಲಿರುವ ಮನೆಯೊಂದರ ಮೇಲೆ ಇಸ್ರೇಲ್‌ ಬಾಂಬ್ ದಾಳಿ ನಡೆಸಿದ ಪರಿಣಾಮವಾಗಿ ಮೂವರು ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಇಸ್ತಾನ್‌ಬುಲ್‌ನಲ್ಲಿ ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರನ್ನು ಭೇಟಿಯಾದರು. ಯುಎಸ್‌ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಗಾಝಾದ ಮೇಲಿನ ಯುದ್ಧ ಮತ್ತು ಇರಾನ್‌ನೊಂದಿಗಿನ ಉದ್ವಿಗ್ನತೆಯ ಮಧ್ಯೆ ಇಸ್ರೇಲ್‌ಗೆ 26 ಬಿಲಿಯನ್‌ ನಿಧಿಯನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 7ರಿಂದ ಗಾಝಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯಲ್ಲಿ ಕನಿಷ್ಠ 34,049 ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 76,901 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.  ಸಾವಿರಾರು ಕಟ್ಟಡಗಳು ಇಸ್ರೇಲ್‌ ದಾಳಿಗೆ ನೆಲಸಮವಾಗಿದ್ದು, ಲಕ್ಷಾಂತರ ಜನರು ಆಶ್ರಯವನ್ನು ಕಳೆದುಕೊಂಡು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...