Homeಅಂತರಾಷ್ಟ್ರೀಯಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌ಗೆ 26 ಬಿಲಿಯನ್‌ ನೆರವು ಪ್ಯಾಕೇಜ್‌ ಅನುಮೋದಿಸಿದ ಅಮೆರಿಕ

ಗಾಝಾದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‌ಗೆ 26 ಬಿಲಿಯನ್‌ ನೆರವು ಪ್ಯಾಕೇಜ್‌ ಅನುಮೋದಿಸಿದ ಅಮೆರಿಕ

- Advertisement -
- Advertisement -

ಗಾಝಾದಲ್ಲಿ ಮಕ್ಕಳು, ಮಹಿಳೆಯರ ಸೇರಿದಂತೆ ಸಾವಿರಾರು ಮಂದಿಯ ಹತ್ಯಾಕಾಂಡವನ್ನು ನಡೆಸಿ ಕ್ರೌರ್ಯವನ್ನು ಮೆರೆದಿದ್ದ ಇಸ್ರೇಲ್‌ಗೆ ನೆರವು ನೀಡುವುದನ್ನು ಅಮೆರಿಕ ಮುಂದುವರಿಸಿದ್ದು, ಇಸ್ರೇಲ್‌ಗೆ 26 ಬಿಲಿಯನ್‌ ಮೌಲ್ಯದ ನೆರವು ಪ್ಯಾಕೇಜ್‌ನ್ನು ಅಮೆರಿಕ ಅನುಮೋದಿಸಿದೆ ಎಂದು ವರದಿಯಾಗಿದೆ.

ಗಾಝಾದ ಮೇಲೆ ದಾಳಿ ನಡೆಸಲು ಅಮೆರಿಕ ಈ ಮೊದಲು ಇಸ್ರೇಲ್‌ಗೆ ಯುದ್ಧ ವಿಮಾನಗಳು ಮತ್ತು ಶಸ್ತ್ರಾಸ್ತ್ರವನ್ನು ಕಳುಹಿಸಿಕೊಟ್ಟಿತ್ತು. ಇದಕ್ಕೆ ಅಂತರಾಷ್ಟ್ರೀಯ ಸಮುದಾಯ ಸೇರಿದಂತೆ ಅಮೆರಿಕದ ಪ್ರಜೆಗಳೇ ಬೈಡನ್‌ಗೆ ವಿರೋಧವನ್ನು ವ್ಯಕ್ತಪಡಿಸಿದ್ದರು. ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುವ ಇಸ್ರೇಲ್‌ಗೆ ಬೆಂಬಲಿಸದಂತೆ ಅಮೆರಿಕದಲ್ಲಿ ಪ್ರತಿಭಟನೆ ನಡೆದಿದ್ದವು, ಆದರೆ ಇದೀಗ ಮತ್ತೆ ಇಸ್ರೇಲ್‌ಗೆ ಅಮೆರಿಕ ನೆರವನ್ನು ಘೋಷಿಸಿದೆ.

ಇಸ್ರೇಲ್‌ ಗಾಝಾ ಮೇಲೆ ದಾಳಿ ನಡೆಸಿ ಕಳೆದ ಆರು ತಿಂಗಳಲ್ಲಿ ನಡೆಸಿದ ಹತ್ಯಾಕಾಂಡಕ್ಕೆ 34,000ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದೀಗ ಗಾಝಾದಲ್ಲಿನ ತುರ್ತು ಸೇವಾ ಘಟಕಗಳು ಖಾನ್ ಯೂನಿಸ್‌ನಲ್ಲಿರುವ ನಾಸರ್ ವೈದ್ಯಕೀಯ ಸಂಕೀರ್ಣದಲ್ಲಿರುವ ಅವಶೇಷಗಳಡಿಯಿಂದ 50 ಪ್ಯಾಲೆಸ್ತೀನ್‌ ನಾಗರಿಕರ ಶವಗಳನ್ನು ವಶಪಡಿಸಿಕೊಂಡಿದೆ.

ಗಾಝಾದ ದಕ್ಷಿಣದ ನಗರವಾದ ರಫಾದ ಮೇಲೆ ಇಸ್ರೇಲ್‌ ದಾಳಿಯ ನಂತರ ಕೊಲ್ಲಲ್ಪಟ್ಟ ಎಂಟು ಪ್ಯಾಲೆಸ್ತೀನಿಯಾದವರಲ್ಲಿ ಓರ್ವ ಗರ್ಭಿಣಿ ಮಹಿಳೆ ಮತ್ತು ಆರು ಮಕ್ಕಳು ಸೇರಿದ್ದಾರೆ. ಮಹಿಳೆಯ ಗರ್ಭದಲ್ಲಿರುವ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ನೂರ್ ಶಮ್ಸ್ ನಿರಾಶ್ರಿತರ ಶಿಬಿರದ ಮೇಲೆ ದಾಳಿಯ ಸಮಯದಲ್ಲಿ ಇಸ್ರೇಲ್‌ ಪಡೆಗಳು 14 ಜನರನ್ನು ಕೊಂದಿವೆ ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ, ನಬ್ಲಸ್‌ನ ದಕ್ಷಿಣಕ್ಕೆ ಹಿಂಸಾಚಾರದಲ್ಲಿ ಗಾಯಗೊಂಡ ಪ್ಯಾಲೆಸ್ತೀನಿಯನ್ನರನ್ನು ತಲುಪಲು ಪ್ರಯತ್ನಿಸುತ್ತಿದ್ದ ಆಂಬ್ಯುಲೆನ್ಸ್ ಚಾಲಕನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಇಸ್ರೇಲ್‌ ಪಡೆಗಳು. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ತುಲ್ಕರೆಮ್‌ನಲ್ಲಿರುವ ನೂರ್ ಶಮ್ಸ್ ನಿರಾಶ್ರಿತರ ಶಿಬಿರದ ಮೇಲೆ ದಾಳಿ ಮಾಡುವುದನ್ನು ಮುಂದುವರಿಸಿದೆ. ರಫಾ ನಗರದ ಮಧ್ಯಭಾಗದಲ್ಲಿರುವ ಮನೆಯೊಂದರ ಮೇಲೆ ಇಸ್ರೇಲ್‌ ಬಾಂಬ್ ದಾಳಿ ನಡೆಸಿದ ಪರಿಣಾಮವಾಗಿ ಮೂವರು ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಇಸ್ತಾನ್‌ಬುಲ್‌ನಲ್ಲಿ ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರನ್ನು ಭೇಟಿಯಾದರು. ಯುಎಸ್‌ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಗಾಝಾದ ಮೇಲಿನ ಯುದ್ಧ ಮತ್ತು ಇರಾನ್‌ನೊಂದಿಗಿನ ಉದ್ವಿಗ್ನತೆಯ ಮಧ್ಯೆ ಇಸ್ರೇಲ್‌ಗೆ 26 ಬಿಲಿಯನ್‌ ನಿಧಿಯನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 7ರಿಂದ ಗಾಝಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯಲ್ಲಿ ಕನಿಷ್ಠ 34,049 ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 76,901 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.  ಸಾವಿರಾರು ಕಟ್ಟಡಗಳು ಇಸ್ರೇಲ್‌ ದಾಳಿಗೆ ನೆಲಸಮವಾಗಿದ್ದು, ಲಕ್ಷಾಂತರ ಜನರು ಆಶ್ರಯವನ್ನು ಕಳೆದುಕೊಂಡು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...