Homeಮುಖಪುಟಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

- Advertisement -
- Advertisement -

ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ ವಿಚಾರವನ್ನು ಉಲ್ಲೇಖಿಸಿದೆ.

ಮೇ 2023ರಲ್ಲಿ ಜನಾಂಗೀಯ ಸಂಘರ್ಷದ ಪ್ರಾರಂಭದ ನಂತರ ಮಣಿಪುರದಲ್ಲಿ ನಡೆದ ಹಿಂಸಾಚಾರ, UK-ಮೂಲದ BBC ಮೇಲೆ ಭಾರತದಲ್ಲಿ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ ಭಾರತದ ಕೈವಾಡದ ಆರೋಪದ ಬಗ್ಗೆ ಅಮೆರಿಕದ 2023ರ ಮಾನವ ಹಕ್ಕುಗಳ ವರದಿಯಲ್ಲಿ ಉಲ್ಲೇಖಿತವಾಗಿದೆ. ಈ ಬಗ್ಗೆ ಭಾರತವು ಇನ್ನೂ ಪ್ರತಿಕ್ರಿಯಿಸದಿದ್ದರೂ, ವಿದೇಶಾಂಗ ಸಚಿವಾಲಯವು ಈ ಹಿಂದೆ ಯುಎಸ್‌ನ ಇಂತಹ ವರದಿಗಳು ತಪ್ಪು ಮಾಹಿತಿಯನ್ನು ಹೊಂದಿರುವಂತದ್ದು ಮತ್ತು ದೋಷಪೂರಿತವಾಗಿರುವಂತದ್ದು ಎಂದು ಹೇಳಿದೆ. ಕೆಲವು US ಅಧಿಕಾರಿಗಳ ಹಸ್ತಕ್ಷೇಪದಿಂದ ಇಂತಹ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯವು ಹೇಳಿತ್ತು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಕನಿಷ್ಠ 175 ಜನರು ಸಾವನ್ನಪ್ಪಿದ್ದಾರೆ ಮತ್ತು 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2023ರ ಮೇ ತಿಂಗಳಿನಿಂದ ಮಣಿಪುರವು ಇಂಫಾಲ್ ಕಣಿವೆಯಲ್ಲಿ ವಾಸಿಸುವ ಬಹುಸಂಖ್ಯಾತ ಮೈತೈ ಮತ್ತು ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿದೆ.

ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು, ಸಶಸ್ತ್ರ ಸಂಘರ್ಷ, ಅತ್ಯಾಚಾರ ಮತ್ತು ದಾಳಿಗಳ ಬಗ್ಗೆ ವರದಿ ಮಾಡಿದ್ದಾರೆ, ಜೊತೆಗೆ ಮನೆಗಳು, ವ್ಯಾಪಾರಗಳು ಮತ್ತು ಪೂಜಾ ಸ್ಥಳಗಳ ನಾಶದ ಜೊತೆಗೆ ಸರ್ಕಾರವು ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮಣಿಪುರದಲ್ಲಿ ದೈನಂದಿನ ಕರ್ಫ್ಯೂಗಳನ್ನು ಜಾರಿಗೊಳಿಸಲಾಗಿತ್ತು ಮತ್ತು  ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖವಿದೆ. ಇದಲ್ಲದೆ ಹಿಂಸೆಯನ್ನು ತಡೆಯುವಲ್ಲಿ ಸರಕಾರ ವಿಫಲವಾಗಿದೆ ಎಂದು ಸುಪ್ರೀಂಕೋರ್ಟ್‌ ಗಮನಿಸಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...