Homeಮುಖಪುಟಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

- Advertisement -
- Advertisement -

ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ ವಿಚಾರವನ್ನು ಉಲ್ಲೇಖಿಸಿದೆ.

ಮೇ 2023ರಲ್ಲಿ ಜನಾಂಗೀಯ ಸಂಘರ್ಷದ ಪ್ರಾರಂಭದ ನಂತರ ಮಣಿಪುರದಲ್ಲಿ ನಡೆದ ಹಿಂಸಾಚಾರ, UK-ಮೂಲದ BBC ಮೇಲೆ ಭಾರತದಲ್ಲಿ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ ಭಾರತದ ಕೈವಾಡದ ಆರೋಪದ ಬಗ್ಗೆ ಅಮೆರಿಕದ 2023ರ ಮಾನವ ಹಕ್ಕುಗಳ ವರದಿಯಲ್ಲಿ ಉಲ್ಲೇಖಿತವಾಗಿದೆ. ಈ ಬಗ್ಗೆ ಭಾರತವು ಇನ್ನೂ ಪ್ರತಿಕ್ರಿಯಿಸದಿದ್ದರೂ, ವಿದೇಶಾಂಗ ಸಚಿವಾಲಯವು ಈ ಹಿಂದೆ ಯುಎಸ್‌ನ ಇಂತಹ ವರದಿಗಳು ತಪ್ಪು ಮಾಹಿತಿಯನ್ನು ಹೊಂದಿರುವಂತದ್ದು ಮತ್ತು ದೋಷಪೂರಿತವಾಗಿರುವಂತದ್ದು ಎಂದು ಹೇಳಿದೆ. ಕೆಲವು US ಅಧಿಕಾರಿಗಳ ಹಸ್ತಕ್ಷೇಪದಿಂದ ಇಂತಹ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯವು ಹೇಳಿತ್ತು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಕನಿಷ್ಠ 175 ಜನರು ಸಾವನ್ನಪ್ಪಿದ್ದಾರೆ ಮತ್ತು 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2023ರ ಮೇ ತಿಂಗಳಿನಿಂದ ಮಣಿಪುರವು ಇಂಫಾಲ್ ಕಣಿವೆಯಲ್ಲಿ ವಾಸಿಸುವ ಬಹುಸಂಖ್ಯಾತ ಮೈತೈ ಮತ್ತು ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿದೆ.

ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು, ಸಶಸ್ತ್ರ ಸಂಘರ್ಷ, ಅತ್ಯಾಚಾರ ಮತ್ತು ದಾಳಿಗಳ ಬಗ್ಗೆ ವರದಿ ಮಾಡಿದ್ದಾರೆ, ಜೊತೆಗೆ ಮನೆಗಳು, ವ್ಯಾಪಾರಗಳು ಮತ್ತು ಪೂಜಾ ಸ್ಥಳಗಳ ನಾಶದ ಜೊತೆಗೆ ಸರ್ಕಾರವು ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮಣಿಪುರದಲ್ಲಿ ದೈನಂದಿನ ಕರ್ಫ್ಯೂಗಳನ್ನು ಜಾರಿಗೊಳಿಸಲಾಗಿತ್ತು ಮತ್ತು  ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖವಿದೆ. ಇದಲ್ಲದೆ ಹಿಂಸೆಯನ್ನು ತಡೆಯುವಲ್ಲಿ ಸರಕಾರ ವಿಫಲವಾಗಿದೆ ಎಂದು ಸುಪ್ರೀಂಕೋರ್ಟ್‌ ಗಮನಿಸಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...