Homeಅಂತರಾಷ್ಟ್ರೀಯಅಮೆರಿಕಾ: ಭಾರತೀಯ ಮಹಿಳೆ ಶವವಾಗಿ ಪತ್ತೆ, ಮಾಜಿ ಗೆಳೆಯ ಹತ್ಯೆ ಮಾಡಿ ಭಾರತಕ್ಕೆ ಪರಾರಿಯಾಗಿರುವ ಶಂಕೆ

ಅಮೆರಿಕಾ: ಭಾರತೀಯ ಮಹಿಳೆ ಶವವಾಗಿ ಪತ್ತೆ, ಮಾಜಿ ಗೆಳೆಯ ಹತ್ಯೆ ಮಾಡಿ ಭಾರತಕ್ಕೆ ಪರಾರಿಯಾಗಿರುವ ಶಂಕೆ

- Advertisement -
- Advertisement -

ಕಳೆದ ವಾರ ನಾಪತ್ತೆಯಾಗಿದ್ದ 27 ವರ್ಷದ ಭಾರತೀಯ ಮಹಿಳೆ ನಿಕಿತಾ ಗೋಡಿಶಾಲಾ ಅಮೆರಿಕಾದ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆಕೆಯ ಮಾಜಿ ಗೆಳೆಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತ ಆಕೆಯನ್ನು ಕೊಂದು ಭಾರತಕ್ಕೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಎಲ್ಲಿಕಾಟ್ ನಗರದ ಗೋಡಿಶಾಲಾ ಜನವರಿ 2 ರಂದು ನಾಪತ್ತೆಯಾಗಿದ್ದಾರೆ ಎಂದು ಆಕೆಯ ಮಾಜಿ ಗೆಳೆಯ 26 ವರ್ಷದ ಅರ್ಜುನ್ ಶರ್ಮಾ ದೂರು ನೀಡಿದ್ದರು.

ಕಾಣೆಯಾದ ವ್ಯಕ್ತಿಯ ಬಗ್ಗೆ ದೂರು ದಾಖಲಿಸಿದ ಕೂಡಲೇ ಅರ್ಜುನ್ ಶರ್ಮಾ ಭಾರತಕ್ಕೆ ವಿಮಾನದಲ್ಲಿ ದೇಶ ತೊರೆದಿದ್ದಾರೆ ಎಂದು ಪೊಲೀಸರಿಗೆ ನಂತರ ತಿಳಿದುಬಂದಿದೆ. ಹೊವಾರ್ಡ್ ಕೌಂಟಿ ಪೊಲೀಸ್ ಪತ್ತೆದಾರರು ಅವರ ಅಪಾರ್ಟ್ಮೆಂಟ್ ನಲ್ಲಿ ಶೋಧ ನಡೆಸಲು  ವಾರಂಟ್ ಕಾರ್ಯಗತಗೊಳಿಸಿದರು ಆ ವೇಳೆ ಇರಿತದ ಗಾಯಗಳೊಂದಿಗೆ ಗೋಡಿಶಾಲ ಅವರ ಮೃತ ದೇಹವು ಪತ್ತೆಯಾಗಿದೆ.

ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ಪ್ರಕಾರ, ಗೋಡಿಶಾಲ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಸಾಧ್ಯವಿರುವ ಎಲ್ಲಾ ಕಾನ್ಸುಲರ್ ಸಹಾಯವನ್ನು ನೀಡುತ್ತಿದೆ ಎನ್ನಲಾಗಿದೆ. 

“ರಾಯಭಾರ ಕಚೇರಿಯು ಸ್ಥಳೀಯ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಚರ್ಚಿಸುತ್ತಿರುವುದಾಗಿ” ಹೇಳಿದೆ.

ತನಿಖೆಯ ಮೂಲಕ, ಡಿಸೆಂಬರ್ 31 ರಂದು ಸಂಜೆ 7 ಗಂಟೆಯ ನಂತರ ಶರ್ಮಾ ಗೋಡಿಶಾಲನನ್ನು ಕೊಲ್ಲಲಾಗಿದೆ ಎಂಬ ವಿಚಾರ ಬಯಲಾಗಿದ್ದು, ತನಿಖೆ ಮುಂದುವರೆದಿದೆ. ಈವರೆಗೆ ಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಹೊವಾರ್ಡ್ ಕೌಂಟಿ ಪೊಲೀಸರು ತಿಳಿಸಿದ್ದಾರೆ. ಶರ್ಮಾ ಅವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಅಮೆರಿಕದ ಫೆಡರಲ್ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. 

ನಿಕಿತಾ ಗೋಡಿಶಾಲ ಯಾರು?

ಗೋಡಿಶಾಲಾ ಅವರು ಮೇರಿಲ್ಯಾಂಡ್‌ನ ಕೊಲಂಬಿಯಾದ ವೇಡಾ ಹೆಲ್ತ್‌ನಲ್ಲಿ ಡೇಟಾ ಮತ್ತು ಸ್ಟ್ರಾಟಜಿ ವಿಶ್ಲೇಷಕರಾಗಿದ್ದರು. ಅವರು ಫೆಬ್ರವರಿ 2025 ರಲ್ಲಿ ಸಂಸ್ಥೆಯನ್ನು ಸೇರಿದರು ಮತ್ತು ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ, ಅವರ ಕಾರ್ಯಕ್ಷಮತೆಗಾಗಿ “ಆಲ್-ಇನ್ ಪ್ರಶಸ್ತಿ” ಪಡೆದರು.

ಇದಕ್ಕೂ ಮೊದಲು ಅವರು ಆರೋಗ್ಯ ನಿರ್ವಹಣಾ ವಿಜ್ಞಾನದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಡೇಟಾ ವಿಶ್ಲೇಷಣೆ ಮತ್ತು ದೃಶ್ಯೀಕರಣ ತಜ್ಞರಾಗಿ (ತಾಂತ್ರಿಕ ಸಲಹೆಗಾರ) ಕೆಲಸ ಮಾಡಿದರು. ಮೇರಿಲ್ಯಾಂಡ್ ವಿಶ್ವವಿದ್ಯಾಲಯದ ಬಾಲ್ಟಿಮೋರ್ ಕೌಂಟಿ ಕ್ಯಾಂಪಸ್‌ನಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಅವರು ಅಮೆರಿಕದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು.

ಅವರ ವೃತ್ತಿಪರ ಪ್ರೊಫೈಲ್ ಪ್ರಕಾರ ಅವರು 2022 ರಲ್ಲಿ ಅಮೆರಿಕಕ್ಕೆ ತೆರಳಿದರು ಮತ್ತು ಅದಕ್ಕೂ ಮೊದಲು ತೆಲಂಗಾಣದ KIMS ಆಸ್ಪತ್ರೆಯಲ್ಲಿ 2 ವರ್ಷಗಳ ಕಾಲ ಕ್ಲಿನಿಕಲ್ ಡೇಟಾ ಸ್ಪೆಷಲಿಸ್ಟ್ ಆಗಿ ಕೆಲಸ ಮಾಡಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...