Homeಮುಖಪುಟಅಮೆರಿಕ ದೋಷಾರೋಪಣೆಗೆ ಕೊನೆಗೂ ಪ್ರತಿಕ್ರಿಯಿಸಿದ ಅದಾನಿ | ಪತ್ರಿಕೆಗಳ ವಿರುದ್ಧ ಆಕ್ರೋಶ

ಅಮೆರಿಕ ದೋಷಾರೋಪಣೆಗೆ ಕೊನೆಗೂ ಪ್ರತಿಕ್ರಿಯಿಸಿದ ಅದಾನಿ | ಪತ್ರಿಕೆಗಳ ವಿರುದ್ಧ ಆಕ್ರೋಶ

- Advertisement -
- Advertisement -

ತನ್ನ ಕಂಪೆನಿಯ ಮೇಲೆ ಅಮೆರಿಕದ ಅಧಿಕಾರಿಗಳು ಮಾಡಿರುವ ಆರೋಪಗಳ ಬಗ್ಗೆ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರು ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ಪತ್ರಿಕೆಗಳು ತಪ್ಪಾಗಿ ಮತ್ತು ಅಜಾಗರೂಕ ವರದಿ ಮಾಡಿವೆ ಎಂದು ಶನಿವಾರ ಹೇಳಿದ್ದಾರೆ. ಅಮೆರಿಕ ದೋಷಾರೋಪಣೆಗೆ

“ಎರಡು ವಾರಗಳ ಹಿಂದೆಯೇ ಅದಾನಿ ಗ್ರೀನ್ ಎನರ್ಜಿಯಲ್ಲಿನ ಅನುಸರಣೆ ಪ್ರಕ್ರಿಯೆಗಳ ಬಗ್ಗೆ ನಾವು ಅಮೆರಿಕದಿಂದ ಆರೋಪಗಳನ್ನು ಎದುರಿಸಿದ್ದೇವೆ ಎಂದು ನಿಮ್ಮಲ್ಲಿ ಹೆಚ್ಚಿನವರು ಓದಿದ್ದೀರಿ. ಆದರೆ ನಾವು ಇಂತಹ ಸವಾಲುಗಳನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ.” ಎಂದು ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅದಾನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರತಿಯೊಂದು ದಾಳಿಯು ನಮ್ಮನ್ನು ಬಲಪಡಿಸುತ್ತದೆ ಮತ್ತು ಪ್ರತಿ ಅಡಚಣೆಯು ಅದಾನಿ ಗ್ರೂಪ್‌ಗೆ ಮತ್ತಷ್ಟು ಚೇತರಿಸಿಕೊಳ್ಳುವ ಮೆಟ್ಟಿಲು ಆಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ” ಎಂದು ಅದಾನಿ ಹೇಳಿದ್ದಾರೆ.

ಅಮರಿಕದಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿರುವ ಅದಾನಿ ಮತ್ತು ಇತರರ ದೋಷಾರೋಪಣೆಗೆ ಸಂಬಂಧಿಸಿದ ಬೆಳವಣಿಗೆಗಳನ್ನು ಖಾಸಗಿ ಕಂಪನಿಗಳು, ವ್ಯಕ್ತಿಗಳು ಮತ್ತು ಅಮೆರಿಕ ನ್ಯಾಯಾಂಗ ಇಲಾಖೆಯನ್ನು ಒಳಗೊಂಡಿರುವ ಕಾನೂನು ವಿಷಯವಾಗಿ ಪರಿಗಣಿಸುವುದಾಗಿ ಭಾರತ ಸರ್ಕಾರ ಹೇಳಿದ ಒಂದು ದಿನದ ನಂತರ ಅದಾನಿ ಈ ಹೇಳಿಕೆ ನೀಡಿದ್ದಾರೆ.

ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಹಿರಿಯ ಕಾರ್ಯನಿರ್ವಾಹಕ ವನೀತ್ ಜೈನ್ ಅವರು ಸೆಕ್ಯುರಿಟೀಸ್ ವಂಚನೆ ಮತ್ತು ಅಮೆರಿಕದ ಸೆಕ್ಯುರಿಟೀಸ್ ನಿಯಮಗಳ ಉಲ್ಲಂಘನೆಗಾಗಿ ಪಿತೂರಿ ನಡೆಸಿದ್ದಾರೆ ಎಂದು ದೋಷಾರೋಪಣೆಯಲ್ಲಿ ಆರೋಪಿಸಲಾಗಿದೆ. ಅದಾನಿ ಗ್ರೀನ್ ಎನರ್ಜಿ ಕಾರ್ಯನಿರ್ವಾಹಕರು ಅಂತರಾಷ್ಟ್ರೀಯ ನಿಧಿಯನ್ನು ಪಡೆಯಲು ಲಂಚದ ಆಮಿಷ ನೀಡಿದ್ದರು ಎಂದು ಅದು ಆರೋಪಿಸಿದೆ.

ಅದಾನಿ ಮತ್ತು ಅವರ ಸಹಚರರು 2021 ಮತ್ತು 2023 ರ ನಡುವೆ ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ 2,200 ಕೋಟಿ ರೂಪಾಯಿಗಳನ್ನು ಲಂಚವಾಗಿ ಪಾವತಿಸಲು ಸಂಚು ರೂಪಿಸಿದ್ದಾರೆ ಎಂದು ಅಮೆರಿಕದ ಪ್ರಾಸಿಕ್ಯೂಟರ್‌ಗಳು ಪ್ರತಿಪಾದಿಸಿದ್ದಾರೆ. ಅಲ್ಲದೆ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಛತ್ತೀಸ್‌ಗಢ ಮತ್ತು ಜಮ್ಮು ಕಾಶ್ಮೀರದ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎನ್ನಲಾಗಿದೆ.

“ಸಾಕಷ್ಟು ಸ್ಥಾಪಿತ ವರದಿಗಳ ಹೊರತಾಗಿಯೂ, ಅದಾನಿ ಕಡೆಯಿಂದ ‘ವಿದೇಶಿ ಭ್ರಷ್ಟ ಆಚರಣೆಗಳ ಕಾಯ್ದೆ’ಯ ಉಲ್ಲಂಘನೆ ಆಗಿದೆ ಎಂದು ಯಾರೋಬ್ಬರೂ ಆರೋಪ ಮಾಡಿಲ್ಲ. ಜೊತೆಗೆ ನ್ಯಾಯಕ್ಕೆ ಅಡ್ಡಿಪಡಿಸುವ ಪಿತೂರಿ ನಡೆಸಲಾಗಿದೆ ಎಂಬ ಆರೋಪ ಹೊರಿಸಲಾಗಿಲ್ಲ. ಆದರೂ, ಇಂದಿನ ಜಗತ್ತಿನಲ್ಲಿ ನಕಾರಾತ್ಮಕತೆಯು ಸತ್ಯಗಳಿಗಿಂತ ವೇಗವಾಗಿ ಹರಡುತ್ತದೆ” ಎಂದು ಅದಾನಿ ಶನಿವಾರ ಹೇಳಿದ್ದಾರೆ.

ಜೊತೆಗೆ ಹಿಂಡೆನ್‌ಬರ್ಗ್ ವರದಿಯನ್ನು ಉಲ್ಲೇಖಿಸಿರುವ ಅದಾನಿ, ಪಟ್ಟಭದ್ರ ಮಾಧ್ಯಮ ಹಿತಾಸಕ್ತಿಗಳಿಂದ ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಅಮೆರಿಕದ ಅಧಿಕಾರಿಗಳು ಮಾಡಿರುವ ಆರೋಪಗಳನ್ನು ಅದಾನಿ ಗ್ರೂಪ್ ನಿರಾಕರಿಸಿದ್ದು, ಅವುಗಳನ್ನು “ಆಧಾರರಹಿತ” ಎಂದು ಕರೆದಿದೆ.

ವಿದೇಶಿ ಭ್ರಷ್ಟ ಆಚರಣೆಗಳ ಕಾಯಿದೆಯು ಅಮೆರಿಕದ ಕಾನೂನಾಗಿದ್ದು, ಹೆಚ್ಚಿನ ವ್ಯಾಪಾರ ವ್ಯವಹಾರಗಳಿಗಾಗಿ ವಿದೇಶಿ ಅಧಿಕಾರಿಗಳಿಗೆ ಲಂಚ ಪಾವತಿಸುವುದನ್ನು ಕಾಯಿದೆಯು ನಿಷೇಧಿಸುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...